ಪ್ರಿಯಾಂಕ್ ಖರ್ಗೆ 
ರಾಜ್ಯ

ಸಚಿವ ಸಂಪುಟ ರಚನೆಗೆ ಭಾರೀ ಕಸರತ್ತು: ಪ್ರಿಯಾಂಕ್ ಖರ್ಗೆಗೆ DCM ಸ್ಥಾನ ನೀಡಲು ಒತ್ತಾಯ!

ನಮ್ಮ ಪ್ರಿಯಾಂಕ್ ಖರ್ಗೆ ಸಾಹೇಬ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರೆ, ಪಕ್ಷ ಬಲಗೊಳ್ಳುತ್ತದೆ. ವಿರೋಧ ಪಕ್ಷಗಳು ನಮ್ಮ ಪಕ್ಷದ ಮೇಲೆ ದಾಳಿ ಮಾಡಿದಾಗ ತಕ್ಷಣ ಪ್ರತಿಕ್ರಿಯಿಸುವ ವ್ಯಕ್ತಿ ಪ್ರಿಯಾಂಕ್ ಖರ್ಗೆ" ಎಂದು ಗುತ್ತೇದಾರ್ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಯ ಕಸರತ್ತು ನಡೆಯುತ್ತಿರುವಂತೆಯೇ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ.

ANI ಜೊತೆ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಜಗದೇವ್ ಗುತ್ತೇದಾರ್, ವಿರೋಧ ಪಕ್ಷದ ದಾಳಿಯಿಂದ ಪಕ್ಷವನ್ನು ನಿರಂತರವಾಗಿ ಸಮರ್ಥಿಸಿಕೊಳ್ಳುವ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಇದರಿಂದ ರಾಜ್ಯದಲ್ಲಿ ಪಕ್ಷ ಬಲಗೊಳ್ಳುತ್ತದೆ ಎಂದು ಒತ್ತಾಯಿಸಿದರು.

ನಮ್ಮ ಪ್ರಿಯಾಂಕ್ ಖರ್ಗೆ ಸಾಹೇಬ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರೆ, ಪಕ್ಷ ಬಲಗೊಳ್ಳುತ್ತದೆ. ವಿರೋಧ ಪಕ್ಷಗಳು ನಮ್ಮ ಪಕ್ಷದ ಮೇಲೆ ದಾಳಿ ಮಾಡಿದಾಗ ತಕ್ಷಣ ಪ್ರತಿಕ್ರಿಯಿಸುವ ವ್ಯಕ್ತಿ ಪ್ರಿಯಾಂಕ್ ಖರ್ಗೆ" ಎಂದು ಗುತ್ತೇದಾರ್ ಹೇಳಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ , ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆ ಬಗ್ಗೆ ತಿಳಿಸಿದ್ದಾರೆ.

ಈ ಮಧ್ಯೆ ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ "ಒಳಜಗಳ ರಾಜ್ಯದಲ್ಲಿ ಆಡಳಿತದ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್: ಲೋಕಭವನದಲ್ಲೇ ಸರಳ ಸಮಾರಂಭ; ಸಾರ್ವಜನಿಕರಿಗೆ ಪ್ರವೇಶ ಇಲ್ಲ

Karnataka CM News LIVE Updates | ಜೂನ್ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಲೋಕಭವನದಲ್ಲಿ ಪ್ರಮಾಣವಚನ!

'ಕೇಳಿದ್ದು ಸುಳ್ಳಾಗಬಹುದು.. ನೋಡಿದ್ದು ಸುಳ್ಳಾಗಬಹುದು': ಬಾಲ್ ಗರ್ಲ್ ತಳ್ಳಿದ ಟೆನ್ನಿಸ್ ಆಟಗಾರ Rafael Jodar, ನಿಜಕ್ಕೂ ಆಗಿದ್ದೇನು? video

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಇಡೀ ಕಟ್ಟಡ!

ಪರಮಾಣು ದಾಳಿಯಿಂದ ರಕ್ಷಣೆ, ಪ್ರತಿದಾಳಿಗೆ ಚೀನಾ ಮಾಸ್ಟರ್ ಪ್ಲಾನ್: ಸೈಲೋಗಳ ಸಮೀಪ ಲಾಂಚ್ ಪ್ಯಾಡ್ ಗಳ ನಿರ್ಮಾಣ! ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

SCROLL FOR NEXT