ಸಾಂದರ್ಭಿಕ ಚಿತ್ರ 
ರಾಜ್ಯ

ಹಿಮಾಚಲದಲ್ಲಿ ಭಯಾನಕ ಅಪಘಾತ: ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ; ಬೆಂಗಳೂರಿನ ಕುಟುಂಬ ಸೇರಿ 8 ಪ್ರವಾಸಿಗರು ಸಾವು

ಬೆಂಗಳೂರಿನ ಒಂದು ಕುಟುಂಬ ಮತ್ತು ಛತ್ತೀಸ್‌ಗಢದ ಇನ್ನೊಂದು ಕುಟುಂಬ ಹಾಗೂ ಸ್ಥಳೀಯ ಚಾಲಕ ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಬಾ: ಹಿಮಾಚಲ ಪ್ರದೇಶದಲ್ಲಿ ಭಾನುವಾರ ಭಯಾನಕ ಅಪಘಾತ ಸಂಭವಿಸಿದ್ದು, ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟ್ಯಾಕ್ಸಿಯೊಂದು ಚಂಬಾ ಜಿಲ್ಲೆಯ ಪಂಗಿ ಪ್ರದೇಶದ ಬೈರಾಗಢ-ಪಂಗಿ-ಸಚ್ ಪಾಸ್ ರಸ್ತೆಯ ಕಲಾವನ್ ಬಳಿ 500 ಮೀಟರ್ ಆಳದ ಪ್ರಪಾತಕ್ಕೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಚಾಲಕ ಸೇರಿದಂತೆ ಅದರಲ್ಲಿದ್ದ ಎಂಟು ಜನ ಮೃತಪಟ್ಟಿದ್ದಾರೆ.

ಬೆಂಗಳೂರಿನ ಒಂದು ಕುಟುಂಬ ಮತ್ತು ಛತ್ತೀಸ್‌ಗಢದ ಇನ್ನೊಂದು ಕುಟುಂಬ ಹಾಗೂ ಸ್ಥಳೀಯ ಚಾಲಕ ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ ಮೂರು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಅಪಘಾತದ ಸಮಯದಲ್ಲಿ ಒಟ್ಟು ಎಂಟು ಜನ ವಾಹನದಲ್ಲಿದ್ದರು ಎಂದು ಚಂಬಾ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ವಿಜಯ್ ಸಕ್ಲಾನಿ ಅವರು ತಿಳಿಸಿದ್ದಾರೆ.

"ಮೂರು ಶವಗಳನ್ನು ಹೊರತೆಗೆಯಲಾಗಿದೆ. ಟ್ಯಾಕ್ಸಿಯಲ್ಲಿ ಎರಡು ಕುಟುಂಬಗಳ ಒಟ್ಟು ಎಂಟು ಜನರಿದ್ದರು. ಅದರಲ್ಲಿ ಒಂದು ಕುಟುಂಬ ಬೆಂಗಳೂರಿನದ್ದು ಮತ್ತು ಇನ್ನೊಂದು ಕುಟುಂಬ ಛತ್ತೀಸ್‌ಗಢದವರು ಹಾಗೂ ಸ್ಥಳೀಯ ಚಾಲಕ" ಎಂದು ಎಸ್‌ಪಿ ಸಕ್ಲಾನಿ ಅವರು ಹೇಳಿದ್ದಾರೆ.

ವಾಹನವು ಚಾಲಕನ ನಿಯಂತ್ರ ತಪ್ಪಿ ಆಳವಾದ ಪ್ರಪಾತಕ್ಕೆ ಬಿದ್ದ ಪರಿಣಾಮ ಎಲ್ಲಾ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಉಪ ಆಯುಕ್ತ ಅಮಿತ್ ಮೆಹ್ರಾ ಅವರು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪ್ರಮಾಣ ವಚನ ದಿನವೇ ಹೊಸ ಕಾಂಗ್ರೆಸ್ ಭವನಕ್ಕೆ ರಾಹುಲ್ ಗಾಂಧಿ ಶಂಕು ಸ್ಥಾಪನೆ; ಸ್ಥಳ ಪರಿಶೀಲಿಸಿದ ನಿಯೋಜಿತ ಸಿಎಂ

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd

'ಶತ್ರುವಿನ ಮಾತು, ಭರವಸೆ ನಂಬಲ್ಲ': ಇರಾನಿಯರ ಹಕ್ಕು ಸಂಪೂರ್ಣ ಖಚಿತವಾಗದಿದ್ದರೆ ಅಮೆರಿಕ ಜೊತೆ ಒಪ್ಪಂದ ಇಲ್ಲ: ಇರಾನ್‌ ಸಂಧಾನಕಾರ

'ಇಂಪ್ಯಾಕ್ಟ್ ಪ್ಲೇಯರ್' ನಿಯಮ ರದ್ದುಗೊಳಿಸಬೇಕು: ಸಚಿನ್ ತೆಂಡೂಲ್ಕರ್ ಹೀಗೆ ಹೇಳಿದ್ಯಾಕೆ?

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

SCROLL FOR NEXT