ಶಾಸಕ ಸುರೇಶ್ ಕುಮಾರ್  
ರಾಜ್ಯ

ಹಿಂದುತ್ವ, ಸಂಸ್ಕೃತ ನಿಂದಿಸಿ ವಿವಾದಾತ್ಮಕ ಬರಹ ಆರೋಪ; ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಆಗ್ರಹ

ಆಗಸ್ಟ್ 30ರಂದು ಸಂಸ್ಕೃತ ಭಾಷೆಯ ಕುರಿತು ಆಕ್ಷೇಪಾರ್ಹ ಅಭಿಪ್ರಾಯವನ್ನು ವ್ಯಕ್ತಪಡಿಸುವ ಪೋಸ್ಟ್‌ವೊಂದು ಈ ಖಾತೆಯಲ್ಲಿ ಪ್ರಕಟವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು: ಸಂಸ್ಕೃತ ಭಾಷೆ ಹಾಗೂ ಹಿಂದುತ್ವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹಗಳನ್ನು ಹಂಚಿಕೊಂಡಿರುವ ಆರೋಪವು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದೆ.

ಕಾಣಿಯೂರು ಉಪ ವಲಯ ಅರಣ್ಯ ಅಧಿಕಾರಿ ಎಂದು ಹೇಳಿಕೊಳ್ಳುತ್ತಿರುವ ಸಂಜೀವ್ ಪೂಜಾರಿ ಅವರ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಯಲ್ಲಿನ ಕೆಲವು ಪೋಸ್ಟ್‌ಗಳು ಇದೀಗ ವಿವಾದಕ್ಕೆ ಕಾರಣವಾಗಿವೆ.

ಆಗಸ್ಟ್ 30ರಂದು ಸಂಸ್ಕೃತ ಭಾಷೆಯ ಕುರಿತು ಆಕ್ಷೇಪಾರ್ಹ ಅಭಿಪ್ರಾಯವನ್ನು ವ್ಯಕ್ತಪಡಿಸುವ ಪೋಸ್ಟ್‌ವೊಂದು ಈ ಖಾತೆಯಲ್ಲಿ ಪ್ರಕಟವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಇದಲ್ಲದೆ ಹಿಂದುತ್ವ, ಸನಾತನ ಧರ್ಮ, ಮೂರ್ತಿ ಪೂಜೆ, ಜಾತಿ ಪದ್ಧತಿ ಹಾಗೂ ಕರ್ಮ ಸಿದ್ಧಾಂತದ ಕುರಿತು ಹಲವು ಬರಹಗಳನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಹೆಸರಿನಲ್ಲಿರುವ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಇಂತಹ ಬರಹಗಳು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅಥವಾ ನಿರ್ದಿಷ್ಟ ಸಿದ್ಧಾಂತ ಹಾಗೂ ಭಾಷೆಯನ್ನು ಅವಹೇಳನ ಮಾಡುವ ರೀತಿಯಲ್ಲಿ ವರ್ತಿಸುವಂತಿಲ್ಲ.

ಸಂಜೀವ್ ಪೂಜಾರಿ ಎಂಬ ವ್ಯಕ್ತಿ ನಿಜವಾಗಿಯೂ ಅರಣ್ಯ ಇಲಾಖೆಯ ಅಧಿಕಾರಿಯಾಗಿದ್ದರೆ, ಸರ್ಕಾರಿ ನೌಕರರ ಸೇವಾ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ನಡುವೆ ಅಧಿಕಾರಿಯ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟವಾಗಿರುವ ಬರಹಗಳ ಕುರಿತು ಸೂಕ್ತ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧಾತಂಕ..!

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

New York’s Times Squareನಲ್ಲಿ ರಕ್ತಪಾತ: ದಾರಿಹೋಕರಿಗೆ ಚೂರಿ ಇರಿತ, ಆತಂಕ ಸೃಷ್ಟಿಸಿದ್ದ ಮಹಿಳೆ ಪೊಲೀಸರ ಗುಂಡಿಗೆ ಬಲಿ..!

ರೆಸಾರ್ಟ್‌ನಲ್ಲಿ AEE ಪರೀಕ್ಷೆ ಬರೆಸಿದ ಪ್ರಿಯಾಂಕ್‌: ಮಿಸ್ಟರ್‌ ಖರ್ಗೆ- ನನ್ನ ಹತ್ರ ನಿಮ್ಮ ಆಟ ನಡೆಯಲ್ಲ; ಕುಮಾರಸ್ವಾಮಿ ವಾಗ್ದಾಳಿ