ಬಿವೈ ವಿಜಯೇಂದ್ರ 
ರಾಜ್ಯ

'ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ': ಪಾದಯಾತ್ರೆಗೂ ಮುನ್ನ ಅಮರೇಶ್ವರ ದೇವಸ್ಥಾನಕ್ಕೆ ಬಿವೈ ವಿಜಯೇಂದ್ರ ಭೇಟಿ

ಈ ಸರ್ಕಾರವನ್ನು ನಾವು ಸಂಪೂರ್ಣವಾಗಿ ಕಿತ್ತುಹಾಕುತ್ತೇವೆ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಲಿಂಗಸುಗೂರು: ಪಕ್ಷದ ಪಾದಯಾತ್ರೆಗೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ಲಿಂಗಸುಗೂರಿನ ಶ್ರೀ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು 'ಕಿತ್ತೊಗೆಯುವವರೆಗೆ' ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಪಾದಿಸಿದರು.

ಗುರುಗುಂಟಾದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯ 10 ದಿನಗಳ ಪಾದಯಾತ್ರೆ ಸೆಪ್ಟೆಂಬರ್ 10 ರಂದು ಕೊನೆಗೊಳ್ಳಬಹುದು. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧದ ರಾಜಕೀಯ ಅಭಿಯಾನ ಮುಂದುವರಿಯುತ್ತದೆ ಎಂದು ಹೇಳಿದರು.

'ಭ್ರಷ್ಟ, ಜನವಿರೋಧಿ, ದಲಿತ ವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಆರಂಭವಾಗಿದೆ. ಪಾದಯಾತ್ರೆ 10 ರಂದು ಕೊನೆಗೊಳ್ಳಬಹುದು, ಆದರೆ ಈ ಸರ್ಕಾರದ ವಿರುದ್ಧದ ಹೋರಾಟ ಮುಂದುವರಿಯುತ್ತದೆ' ಎಂದರು.

ಮುಂಬರುವ ಒಂದೂವರೆ ವರ್ಷದಿಂದ ಎರಡು ವರ್ಷಗಳ ಅವಧಿಯಲ್ಲಿ ಬಿಜೆಪಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತದೆ. ಈ ಸರ್ಕಾರವನ್ನು ನಾವು ಸಂಪೂರ್ಣವಾಗಿ ಕಿತ್ತುಹಾಕುತ್ತೇವೆ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪಾದಯಾತ್ರೆಯು ಲಿಂಗಸುಗೂರಿನಿಂದ ಪ್ರಾರಂಭವಾಗಿ ಸೆಪ್ಟೆಂಬರ್ 10 ರಂದು ಬಳ್ಳಾರಿಯಲ್ಲಿ ಮುಕ್ತಾಯಗೊಳ್ಳಲಿದೆ. ಇದನ್ನು ಐತಿಹಾಸಿಕ ಮೆರವಣಿಗೆ ಎಂದು ಬಣ್ಣಿಸಿದ ಅವರು, ಉತ್ತರ ಕರ್ನಾಟಕದಾದ್ಯಂತದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

'ನಾವು ಲಿಂಗಸೂರಿನಿಂದ ನಮ್ಮ ಪಾದಯಾತ್ರೆ ಪ್ರಾರಂಭಿಸುತ್ತಿದ್ದೇವೆ. ಇಂದು ನಾನು ಲಿಂಗಸೂರು ತಾಲ್ಲೂಕಿನ ಪ್ರಸಿದ್ಧ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಕರ್ನಾಟಕದ ಜನರು ಈಗಾಗಲೇ ಈ ಭ್ರಷ್ಟ ಜನವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ನಿರ್ಧರಿಸಿದ್ದಾರೆ. ಸರ್ಕಾರವನ್ನು ಕಿತ್ತೊಗೆಯುವುದೇ ಈ ಪಾದಯಾತ್ರೆಯ ಕಾರ್ಯಸೂಚಿಯಾಗಿದೆ' ಎಂದು ವಿಜಯೇಂದ್ರ ಹೇಳಿದರು.

'ಅವರು ಬರ ಪರಿಸ್ಥಿತಿಯ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳುತ್ತಿಲ್ಲ ಮತ್ತು 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ' ಎಂದು ಅವರು ಹೇಳಿದರು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಬಿ. ಶ್ರೀರಾಮುಲು ಮತ್ತು ಶಿವನಗೌಡ ನಾಯಕ್, ಸ್ಥಳೀಯ ಶಾಸಕ ಮಾನಪ್ಪ ವಜ್ಜಲ್ ಮತ್ತು ಇತರ ಬಿಜೆಪಿ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಎಷ್ಟು ಜನರು ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ. ನಮ್ಮ ಹೋರಾಟ ಎಷ್ಟು ಕಾಲ ಮುಂದುವರಿಯುತ್ತದೆ ಎಂಬುದು ಮುಖ್ಯ. ಮಾಜಿ ಸಚಿವ ಬಿ. ನಾಗೇಂದ್ರ ಮೇಲಿನ ಬಿಜೆಪಿ ಒತ್ತಡವು ಈಗಾಗಲೇ 'ಭ್ರಷ್ಟ ಸಚಿವರ' ರಾಜೀನಾಮೆಗೆ ಕಾರಣವಾಗಿದೆ. ಇಂದಿನಿಂದ ಭಾರತೀಯ ಜನತಾ ಪಕ್ಷದ ಹೊಸ ಯುಗ ಪ್ರಾರಂಭವಾಗಲಿದೆ' ಎಂದು ವಿಜಯೇಂದ್ರ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧಾತಂಕ..!

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

New York’s Times Squareನಲ್ಲಿ ರಕ್ತಪಾತ: ದಾರಿಹೋಕರಿಗೆ ಚೂರಿ ಇರಿತ, ಆತಂಕ ಸೃಷ್ಟಿಸಿದ್ದ ಮಹಿಳೆ ಪೊಲೀಸರ ಗುಂಡಿಗೆ ಬಲಿ..!

ರೆಸಾರ್ಟ್‌ನಲ್ಲಿ AEE ಪರೀಕ್ಷೆ ಬರೆಸಿದ ಪ್ರಿಯಾಂಕ್‌: ಮಿಸ್ಟರ್‌ ಖರ್ಗೆ- ನನ್ನ ಹತ್ರ ನಿಮ್ಮ ಆಟ ನಡೆಯಲ್ಲ; ಕುಮಾರಸ್ವಾಮಿ ವಾಗ್ದಾಳಿ