ಸಾಂದರ್ಭಿಕ ಚಿತ್ರ 
ರಾಜ್ಯ

‘ಹಣ ಕೊಟ್ಟು ಹುದ್ದೆ ಪಡೆದೆವು, ಒಟ್ಟಿಗೆ ಸಂಪಾದಿಸೋಣ’: Audio viral, ಮೂವರು PSI ಅಮಾನತು

ಮೂವರೂ ಸ್ನೇಹಿತರಾಗಿದ್ದು, ಹಳಿಯಾಳ ಪಿಎಸ್‌ಐ ಹುದ್ದೆ ಪಡೆಯಲು ನೀಡಲಾದ ಲಂಚದ ಹಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಸ್ಪರ ಚರ್ಚಿಸುತ್ತಿದ್ದರು ಎನ್ನಲಾಗಿದೆ.

ಹಳಿಯಾಳ (ಉತ್ತರ ಕನ್ನಡ): ಪೊಲೀಸ್‌ ಇಲಾಖೆಯಲ್ಲಿ ಹುದ್ದೆ ಪಡೆಯಲು ಲಂಚ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದರ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮೂವರು ಪಿಎಸ್‌ಐಗಳನ್ನು ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡಿರುವ ಪಿಎಸ್‌ಐಗಳನ್ನು ಕಿರಣ್ ಪಾಟೀಲ್, ಕೃಷ್ಣ ಅರಗೇರಿ ಮತ್ತು ವಿನೋದ್ ರೆಡ್ಡಿ ಎಂದು ಗುರುತಿಸಲಾಗಿದೆ.

ಮೂವರೂ ಸ್ನೇಹಿತರಾಗಿದ್ದು, ಹಳಿಯಾಳ ಪಿಎಸ್‌ಐ ಹುದ್ದೆ ಪಡೆಯಲು ನೀಡಲಾದ ಲಂಚದ ಹಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಸ್ಪರ ಚರ್ಚಿಸುತ್ತಿದ್ದರು ಎನ್ನಲಾಗಿದೆ.

ಈ ಸಂಭಾಷಣೆಯ ಸುಮಾರು ಎರಡು ನಿಮಿಷಗಳ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿ ವೈರಲ್‌ ಆಗಿದೆ.

ಈ ಆಡಿಯೋವನ್ನು ಜೆಡಿಎಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆಡಳಿತಾರೂಢ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದೆ.

ವೈರಲ್‌ ಆಗಿರುವ ಆಡಿಯೋದಲ್ಲಿ ಮೂವರು ಪಿಎಸ್‌ಐಗಳು ಹುದ್ದೆ ಪಡೆಯಲು ಹಣ ಪಾವತಿಸಿರುವ ಕುರಿತು ಹಾಗೂ ಒಂದೇ ತಾಲೂಕಿನಲ್ಲಿ ಕರ್ತವ್ಯಕ್ಕೆ ಸೇರಿ ಒಟ್ಟಿಗೆ ‘ಹಣ ಸಂಪಾದಿಸುವ’ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಆಡಿಯೋ ವೈರಲ್‌ ಆದ ಬೆನ್ನಲ್ಲೇ ಕ್ರಮ ಕೈಗೊಂಡಿರುವ ಉತ್ತರ ಕನ್ನಡ ಎಸ್‌ಪಿ ಎಂ.ಎನ್. ದೀಪನ್, ಮೂವರನ್ನೂ ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಶಾಂತಿಯೆಡೆಗೆ ಹೆಜ್ಜೆ ಮಾನವೀಯತೆಗೆ ಹೊಸ ಭರವಸೆ"- ಯುಕ್ರೇನ್-ರಷ್ಯಾ ಯುದ್ಧ ಕೊನೆಗೊಳಿಸಲು Putin ಗೆ Modi ಒತ್ತಾಯ

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಬಿಹಾರ-ಜಾರ್ಖಂಡ್ ನಡುವಿನ 25 ವರ್ಷಗಳ ಹಳೆಯ ನದಿ ನೀರು ಹಂಚಿಕೆ ವಿವಾದ ಇತ್ಯರ್ಥ!

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ಹಠಾತ್ ನಿವೃತ್ತಿ ಘೋಷಿಸಿದ ಲಿಯೋನೆಲ್ ಮೆಸ್ಸಿ

ಇರಾನ್ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ರಷ್ಟು ಬೆಳವಣಿಗೆ: ಪ್ರಧಾನಿ ಮೋದಿ ಮೆಚ್ಚುಗೆ!

'ಮೋದಿ ನನ್ನ ಜೀವನ ನರಕ ಮಾಡಿದ್ದಾರೆ, ಹೇಡಿ': ಕಣ್ಣೀರಿಟ್ಟು ಪ್ರಧಾನಿ ಕ್ಷಮೆ ಕೇಳಿದ್ದ ಹುಡುಗಿ ಯೂಟರ್ನ್; ಮತ್ತೊಂದು ವಿಡಿಯೋ!