ಸಾಂದರ್ಭಿಕ ಚಿತ್ರ  
ರಾಜ್ಯ

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಪ್ರತಿ ಅಭ್ಯರ್ಥಿಗಳಿಂದ 40 ಲಕ್ಷ ರೂ. ಸಂಗ್ರಹ !

ಆರು ಅಭ್ಯರ್ಥಿಗಳು ನೀಡಿರುವ ಹೇಳಿಕೆ ಅಥವಾ ಒಪ್ಪಿಕೊಂಡಿರುವ ಅಂಶಗಳ ಕುರಿತು ಸಿಐಡಿ ಅಧಿಕಾರಿಗಳು ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಬೆಂಗಳೂರು: ಸುಮಾರು 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಿಐಡಿ ನಡೆಸುತ್ತಿರುವ ತನಿಖೆಯಲ್ಲಿ, ಪ್ರತಿ ಹುದ್ದೆಗೆ 40 ಲಕ್ಷ ರೂಪಾಯಿಗಳವರೆಗೆ ಹಣ ಸಂಗ್ರಹಿಸುತ್ತಿದ್ದ ದೊಡ್ಡ ಜಾಲವೊಂದು ಪತ್ತೆಯಾಗಿದೆ.

ಆರು ಅಭ್ಯರ್ಥಿಗಳು ಹಣ ಪಾವತಿಸಿ, ಈ ಜಾಲದ ಮೂಲಕ ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ಅಭ್ಯರ್ಥಿಗಳ ಮನೆಗಳ ಮೇಲೆ ನಡೆಸಿದ ಶೋಧ ಮತ್ತು ಅವರ ವಿಚಾರಣೆಯಿಂದ ಹಗರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿ ಲಭ್ಯವಾಗಿದೆ.

ಆದರೆ, ಆರು ಅಭ್ಯರ್ಥಿಗಳು ನೀಡಿರುವ ಹೇಳಿಕೆ ಅಥವಾ ಒಪ್ಪಿಕೊಂಡಿರುವ ಅಂಶಗಳ ಕುರಿತು ಸಿಐಡಿ ಅಧಿಕಾರಿಗಳು ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಇಂತಹ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು ಎನ್ನಲಾದ ಕೆಲವು ರಹಸ್ಯ ಕೇಂದ್ರಗಳನ್ನು ಸಿಐಡಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಅವರನ್ನು ಬೆಂಗಳೂರಿನ ರೆಸಾರ್ಟ್‌ಗಳು, ತುಮಕೂರಿನ ದೇವರಾಯನದುರ್ಗ ಹಾಗೂ ಆಂಧ್ರಪ್ರದೇಶದ ಕೆಲವು ಸ್ಥಳಗಳಲ್ಲಿ ಇರಿಸಿ ತರಬೇತಿ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಪರೀಕ್ಷೆಗೆ ಮುನ್ನವೇ ಅವರಿಗೆ ಪ್ರಶ್ನೆಪತ್ರಿಕೆಗಳನ್ನು ನೀಡಲಾಗುತ್ತಿತ್ತು ಎಂದೂ ಆರೋಪಿಸಲಾಗಿದೆ.

ಹಗರಣದ ಪ್ರಮುಖ ಮಧ್ಯವರ್ತಿಗಳಲ್ಲಿ ಒಬ್ಬರೆಂದು ಶಂಕಿಸಲಾಗಿರುವ ಭಾಲ್ಕಿಯ ರಾಜಕಾರಣಿ ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಿದ ಬಳಿಕ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ದೇಶದಿಂದ ಹೊರಹೋಗಲು ಯತ್ನಿಸುತ್ತಿದ್ದ ವೇಳೆ ದೆಹಲಿ ವಿಮಾನ ನಿಲ್ದಾಣದಲ್ಲಿ ಕನ್ನಾಳೆ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಶೋಧನಾ ವಾರಂಟ್ ಪಡೆದು, ಬೆಂಗಳೂರಿನ ಸಂಜಯನಗರದ ವಿನಾಯಕ ಲೇಔಟ್‌ನಲ್ಲಿರುವ ಕನ್ನಾಳೆ ಅವರ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ಸಿಸಿಟಿವಿ ಡಿವಿಆರ್, ದಾಖಲೆಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಕೆಪಿಎಸ್‌ಸಿ ಮೂಲಕ ನೇಮಕಗೊಂಡಿದ್ದ ಡಿವೈಎಸ್‌ಪಿಗಳ ತಂಡದೊಂದಿಗೆ ಕನ್ನಾಳೆ ಇರುವ ಛಾಯಾಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಕನ್ನಾಳೆ ಅವರೊಂದಿಗೆ ಈ ಡಿವೈಎಸ್‌ಪಿಗಳಿಗೆ ಯಾವುದೇ ಸಂಪರ್ಕವಿದೆಯೇ ಎಂಬುದನ್ನು ಪತ್ತೆಹಚ್ಚಲು ಅವರನ್ನು ವಿಚಾರಣೆಗೊಳಪಡಿಸುವ ಬಗ್ಗೆ ಸಿಐಡಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅಲ್ಲದೆ, ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರೊಂದಿಗೆ ಕನ್ನಾಳೆ ಹೊಂದಿದ್ದಾರೆ ಎನ್ನಲಾದ ಸಂಪರ್ಕದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಆಗಸ್ಟ್ 29ರಂದು ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಗಂಗ್ವಾರ್ ಮತ್ತು ಕನ್ನಾಳೆ ಅವರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಲಾಗಿದೆ. ಗಂಗ್ವಾರ್ ಅವರು ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಗೃಹಲಕ್ಷ್ಮಿ ನಕಲಿ ಖಾತೆಗಳಿಗೆ ಕಡಿವಾಣ: ಮನೆ-ಮನೆ ಸಮೀಕ್ಷೆಗೆ ಸರ್ಕಾರ ಮುಂದು, ಸಮೀಕ್ಷೆ ತಪ್ಪಿಸಿದ್ರೆ ನಿಲ್ಲಲಿದೆ 2,000 ರೂ. ಹಣ..!

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಜಸ್ಟ್ ಮಿಸ್; ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ 17 ಮಂದಿ ಕನ್ನಡಿಗರು!

ಏನಾದರೂ ಮಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲು ಅಶೋಕ-ವಿಜಯೇಂದ್ರ ಪಾದಯಾತ್ರೆ ನಡೆಸುತ್ತಿದ್ದಾರೆ: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಕಾಂಗ್ರೆಸ್ ಸರ್ಕಾರದ ವಿರುದ್ಧ BJP ರಣಕಹಳೆ; ವಿಜಯೇಂದ್ರ ನೇತೃತ್ವದಲ್ಲಿ ‘Ballari Chalo’ ಪಾದಯಾತ್ರೆ ಆರಂಭ..!