ಆರ್ ಅಶೋಕ್  
ರಾಜ್ಯ

KRIDL ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ; ಕರ್ನಾಟಕವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ: ಬಿಜೆಪಿ

ಬಿಜೆಪಿ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲ ಯೋಜನೆಗಳಲ್ಲಿನ ಇತರೆ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಆರೋಪಿಸಿದರು.

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ಕೆ. ಅಶೋಕ್ ಕುಮಾರ್ ರೈ ಅವರು ಬರೆದಿರುವ ಪತ್ರವು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಹೊಸ ರೂಪ ಪಡೆದುಕೊಳ್ಳುತ್ತಿರುವುದನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲ ಯೋಜನೆಗಳಲ್ಲಿನ ಇತರೆ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಆರೋಪಿಸಿದರು. ಇದೀಗ ಹೆಚ್ಚುವರಿ ವೆಚ್ಚವಾಗಿ ಶೇ.7ರಷ್ಟು ಮಂತ್ರಿಗಳ ಚಾರ್ಜ್ ಕೂಡ ಸೇರ್ಪಡೆಯಾಗಿದೆ ಎಂದು ಅವರು ದೂರಿದರು.

ಕೆಆರ್‌ಐಡಿಎಲ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಹಿರಂಗಪಡಿಸಿರುವ ಶಾಸಕ ರೈ ಅವರ ಪತ್ರವು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡಲು ಹೊರಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು. ಪೇಮೆಂಟ್ ಕೋಟಾ ಮೂಲಕ ಸಚಿವರಾದವರು ನಡೆಸುತ್ತಿರುವ ದರೋಡೆ ಆರಂಭವಾಗಿದೆ ಎಂದು ಅವರು ಆರೋಪಿಸಿದರು.

ಕೆಆರ್‌ಐಡಿಎಲ್‌ನಲ್ಲಿ ಕಮಿಷನ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಒತ್ತಾಯಿಸಿದರು. ಅಲ್ಲದೆ, ಹೊಣೆಗಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಇಲಾಖೆ ಹಾಗೂ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಉನ್ನತ ಮಟ್ಟದ, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ತಮ್ಮದೇ ಪಕ್ಷದ ಶಾಸಕರೊಬ್ಬರು ಆರೋಪಗಳನ್ನು ಮಾಡಿದ್ದು, ಕಾಂಗ್ರೆಸ್‌ನ ಸ್ವಂತ ಸರ್ಕಾರದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಮತ್ತೆ ಕದಡಿದ ಮಧ್ಯಪ್ರಾಚ್ಯ; ಇರಾನ್‌ನಲ್ಲಿನ ಗುರಿಗಳ ಮೇಲೆ ದಾಳಿ- ಅಮೆರಿಕ

ಭಯೋತ್ಪಾದನೆಯನ್ನು 'ರಾಜ್ಯ ನೀತಿಯ ಸಾಧನ'ವಾಗಿ ಬಳಸುವ ದೇಶಗಳನ್ನು ಎದುರಿಸಲು SCO ಸಭೆಯಲ್ಲಿ ಪ್ರಧಾನಿ ಮೋದಿ ಒತ್ತಾಯ

ಉತ್ತರಾಖಂಡ್: ರುದ್ರಪ್ರಯಾಗದಲ್ಲಿ ಮಳೆಯ ಅಬ್ಬರಕ್ಕೆ 8 ಮಂದಿ ಬಲಿ, ಭೂ ಕುಸಿತದಿಂದ ಮನೆಗಳಿಗೆ ಅಪಾಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED