ಕರ್ನಾಟಕ ಹೈಕೋರ್ಟ್ Online Desk
ರಾಜ್ಯ

ಆಸ್ತಿ ಕಲಹಕ್ಕೆ SC/ST ಕಾಯ್ದೆ ದುರುಪಯೋಗ ಬೇಡ: ಸಿವಿಲ್ ವಿವಾದಗಳನ್ನು ಕ್ರಿಮಿನಲ್ ಕೇಸ್ ಆಗಿ ಸೇಡು ತೀರಿಸಿಕೊಳ್ಳಲು ಅವಕಾಶವಿಲ್ಲ ಎಂದ ಹೈಕೋರ್ಟ್

ಸಿವಿಲ್ ವ್ಯಾಜ್ಯಕ್ಕೆ ಕ್ರಿಮಿನಲ್ ಮುಖವಾಡ ಸಾಧ್ಯವಿಲ್ಲ: ಆಸ್ತಿ ಕಲಹಕ್ಕೆ SC/ST ಕಾಯ್ದೆ ಬಳಸಿ, 7 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್; ಆಸ್ತಿ ಜಗಳವನ್ನು ಕ್ರಿಮಿನಲ್ ಕೇಸ್ ಆಗಿ ಸೇಡು ತೀರಿಸಿಕೊಳ್ಳಲು ಅವಕಾಶವಿಲ್ಲ ಎಂದು ಸ್ಪಷ್ಟನೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಇತ್ತೀಚೆಗೆ ಕೆಲವು ಕಾನೂನುಗಳನ್ನು ದುರುಪಯೋಗ ಪಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ, ಕೆಲವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ (SC/ST Act) ಅಡಿಯಲ್ಲಿ ಬೇರೆ ಬೇರೆ ಪ್ರಕರಣಗಳಿಗೂ ದೂರು ದಾಖಲಿಸುತ್ತಿದ್ದರು. ಆದರೆ, ಇದಕ್ಕೆ ಲಗಾಮು ಹಾಕಿರುವ ಕರ್ನಾಟಕ ಹೈಕೋರ್ಟ್, "ನಾಗರಿಕ (ಸಿವಿಲ್) ವ್ಯಾಜ್ಯಗಳನ್ನು ಕ್ರಿಮಿನಲ್ ಪ್ರಕರಣಗಳಾಗಿ ಪರಿವರ್ತಿಸಿ ಸೇಡು ತೀರಿಸಿಕೊಳ್ಳಲು ಬಳಸಬಾರದು" ಎಂದು ಸ್ಪಷ್ಟಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಮಹಾಲಿಂಗಪುರದಲ್ಲಿರುವ 6.20 ಎಕರೆ ಜಮೀನಿಗೆ ಸಂಬಂಧಿಸಿದಂತೆ ದೂರುದಾರರು ಮತ್ತು ಆರೋಪಿಗಳ ನಡುವೆ ಈಗಾಗಲೇ 2016ರಿಂದ ಸಿವಿಲ್ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಇದರ ನಡುವೆಯೇ, ದೂರುದಾರೆ ಉಮಾ ಎಂಬುವವರು ಮಂಜುನಾಥ್ ಸೇರಿದಂತೆ ಏಳು ಜನರ ವಿರುದ್ಧ ಗಂಭೀರ ಆರೋಪ ಮಾಡಿ, ಜಿಗಣಿಯ ಜಾಗದಲ್ಲಿದ್ದ ತಮ್ಮ ದಿವಂಗತ ತಂದೆಯ ಸಮಾಧಿ ಕಲ್ಲನ್ನು ಕಿತ್ತುಹಾಕಲಾಗಿದೆ ಮತ್ತು ತಮ್ಮ ಕುಟುಂಬಕ್ಕೆ ಜಾತಿ ನಿಂದನೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದರು. ಇದರ ಅನ್ವಯ ಆರೋಪಿಗಳ ಮೇಲೆ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಹಲವು ಕಲಂಗಳು ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 329, 351 ಮತ್ತು 45 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮುಂದುವರೆದು, ಅಧೀನ ನ್ಯಾಯಾಲಯವು ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಿದಾಗ, ಆರೋಪಿಗಳು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಈ ವಿವಾದವು ಸಂಪೂರ್ಣವಾಗಿ ಸಿವಿಲ್ ಸ್ವರೂಪದ್ದು ಎಂದು ಸ್ಪಷ್ಟಪಡಿಸಿದೆ. ಇದರೊಂದಿಗೆ, ಸ್ಥಿರಾಸ್ತಿಯ ಹಕ್ಕು ಯಾರಿಗೆ ಸೇರಿದ್ದು ಎಂಬುದು ನ್ಯಾಯಾಲಯದಲ್ಲಿ ಇನ್ನೂ ನಿರ್ಧಾರವಾಗದಿರುವಾಗ, ಸಿವಿಲ್ ವ್ಯಾಜ್ಯವನ್ನು ಆಧಾರವಾಗಿಟ್ಟುಕೊಂಡು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಈ ಮೂಲಕ, ಆಸ್ತಿ ಜಗಳದ ವೈಯಕ್ತಿಕ ದ್ವೇಷ ತೀರಿಸಿಕೊಳ್ಳಲು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಒಂದು ಅಸ್ತ್ರವಾಗಿ ಬಳಸುವುದು ಕಾನೂನು ಪ್ರಕ್ರಿಯೆಯ ಸ್ಪಷ್ಟ ದುರುಪಯೋಗ ಎಂದು ಹೈಕೋರ್ಟ್ ಕಠಿಣವಾಗಿ ಹೇಳಿದೆ.

ಒಟ್ಟಾರೆಯಾಗಿ, ಈ ತೀರ್ಪು ಸಿವಿಲ್ ವಿವಾದಗಳನ್ನು ಕ್ರಿಮಿನಲ್ ಕೇಸ್‌ಗಳಾಗಿ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿಯಲ್ಲಿ ಸುಳ್ಳು ಪ್ರಕರಣಗಳಾಗಿ ದಾಖಲಿಸುವುದಕ್ಕೆ ಬ್ರೇಕ್ ಹಾಕುತ್ತದೆ. ಜೊತೆಗೆ, ಸಿವಿಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಬೇಕಾದ ಆಸ್ತಿ ವಿಚಾರಗಳನ್ನು ಅಲ್ಲೇ ಬಗೆಹರಿಸಿಕೊಳ್ಳಬೇಕೇ ಹೊರತು, ಪೊಲೀಸರ ಮೂಲಕ ಕ್ರಿಮಿನಲ್ ತನಿಖೆಗೆ ಒಳಪಡಿಸಿ ಕಿರುಕುಳ ನೀಡಬಾರದು ಎಂಬುದನ್ನು ಇದು ಪುನರುಚ್ಚರಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ಸಂಘರ್ಷ-ಕಚ್ಚಾ ತೈಲ ಬೆಲೆ ಏರಿಕೆ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 789 ಅಂಕ ಇಳಿಕೆ, 24 ಸಾವಿರಕ್ಕಿಂತ ಕೆಳಗೆ ಕುಸಿದ Nifty

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನೇಪಾಳ ಪ್ರವಾಹ ಮಹಾ ದುರಂತ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ, ನಾಪತ್ತೆಯಾಗಿರುವ 4,858 ಮಂದಿಗಾಗಿ ಮುಂದುವರೆದ ಕಾರ್ಯಾಚರಣೆ..!

ಗೃಹಲಕ್ಷ್ಮಿ ನಕಲಿ ಖಾತೆಗಳಿಗೆ ಕಡಿವಾಣ: ಮನೆ-ಮನೆ ಸಮೀಕ್ಷೆಗೆ ಸರ್ಕಾರ ಮುಂದು, ಸಮೀಕ್ಷೆ ತಪ್ಪಿಸಿದ್ರೆ ನಿಲ್ಲಲಿದೆ 2,000 ರೂ. ಹಣ..!

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಜಸ್ಟ್ ಮಿಸ್; ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ 17 ಮಂದಿ ಕನ್ನಡಿಗರು!