ಬಿವೈ ವಿಜಯೇಂದ್ರ 
ರಾಜ್ಯ

ದಲಿತರಿಗೆ ನ್ಯಾಯ ಕೊಡದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಸವಾಲು

‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ಅವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು

ರಾಯಚೂರು: ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ನ್ಯಾಯ ನೀಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಎದುರಿಸಲಿ. ಆಗ ಜನರೇ ತೀರ್ಮಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು.

‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ಅವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿದೆ. ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ. ಮೀಸಲಾತಿ ನೆಪದಲ್ಲಿ ಯುವಕರಿಗೆ ಉದ್ಯೋಗ ನೀಡದೆ ದಲಿತರು ಸೇರಿದಂತೆ ಎಲ್ಲ ಸಮುದಾಯಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ. ಒಟ್ಟಾರೆ ಅಖಂಡ ಕರ್ನಾಟಕವನ್ನೇ ಕಡೆಗಣಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಡಿಕೆಶಿ ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳಲು ಸಿದ್ಧವಾಗಿವೆ. ಭ್ರಷ್ಟಾಚಾರವೇ ಈ ಸರ್ಕಾರಕ್ಕೆ ಉರುಳಾಗಲಿದೆ. ಬಿಜೆಪಿ ಜನರ ಸಮಸ್ಯೆಗಳಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ರೈತರೂ ನಮ್ಮೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ. ಅನ್ನದಾತರ ಸಮಸ್ಯೆಗಳನ್ನು ಆಲಿಸುವ ಕನಿಷ್ಠ ಸೌಜನ್ಯವನ್ನೂ ಮುಖ್ಯಮಂತ್ರಿ ತೋರಿಸುತ್ತಿಲ್ಲ ಎಂದು ಟೀಕಿಸಿದರು.

ಬಿಜೆಪಿ ಈಗಾಗಲೇ ರಾಜ್ಯಾದ್ಯಂತ ಬರ ವೀಕ್ಷಣೆ ನಡೆಸಿದೆ. ಈವರೆಗೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗ ಕಾಟಾಚಾರದ ಬರ ವೀಕ್ಷಣೆ ಆರಂಭಿಸಿದ್ದಾರೆ. ಎಸಿ ಕೊಠಡಿಗಳಲ್ಲಿದ್ದವರು ಈಗ ಅನಿವಾರ್ಯವಾಗಿ ರೈತರ ಸಮಸ್ಯೆ ಕೇಳಲು ಹೊರಟಿದ್ದಾರೆ. ಇದಕ್ಕೆ ಬಿಜೆಪಿ ಹೋರಾಟವೇ ಕಾರಣ ಎಂದು ಹೇಳಿದರು.

ರಾಯಚೂರು ಭಾಗದ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಕರೆದಿರುವ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಅದು ರೈತರ ಸಮಸ್ಯೆ ಅರಿಯುವ ಸಭೆಯಲ್ಲ, ಬಿಜೆಪಿ ಆಡಳಿತದ ಹಗರಣಗಳನ್ನು ಹುಡುಕುವ ಸಭೆಯಂತೆ. ಮೂರು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದರು? ಇಂತಹ ಬೆದರಿಕೆಗಳಿಗೆ ಬಿಜೆಪಿ ಹೆದರುವುದಿಲ್ಲ. ಉತ್ತರ ಕರ್ನಾಟಕದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ.

ಸಾವಿರ ಅಡಿ ಕೊರೆದರೂ ನೀರು ಸಿಗುತ್ತಿಲ್ಲ. ಜಾನುವಾರುಗಳಿಗೆ ಮೇವು ಇಲ್ಲ, ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದೆ. ಆದರೆ ಮುಖ್ಯಮಂತ್ರಿ ಬೆಂಗಳೂರಿನಲ್ಲೇ ರಿಯಲ್ ಎಸ್ಟೇಟ್‌ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಆರೋಪಿಸಿದರು.

ಮಹಿಳೆಯರು ವಿಜಯೇಂದ್ರ ಅವರ ಕೈಗೆ ರಾಖಿ ಕಟ್ಟಿ, ಹಣೆಗೆ ತಿಲಕವಿಟ್ಟು ಶುಭ ಹಾರೈಸಿದರು. ದಾರಿಯಲ್ಲಿ ಬೇಡರ ಕಾರ್ಲಕುಂಟಿ ಮತ್ತು ಅಂಕುಶದೊಡ್ಡಿ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯನ್ನು ಸ್ವಾಗತಿಸಿದರು. ಪಾದಯಾತ್ರೆಯಲ್ಲಿ ಭಾಗವಹಿಸಿದ ಸಾವಿರಾರು ಜನರಿಗೆ ಮುಡಬಾಳ ಕ್ರಾಸ್ ಬಳಿ ಊಟ ಮತ್ತು ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 4 ಗಂಟೆಯ ನಂತರ ಪಾದಯಾತ್ರೆ ಮಸ್ಕಿ ಪಟ್ಟಣದ ಕಡೆಗೆ ಸಾಗಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

'ಇತರ ಹಿಂದೂಗಳು ಯಾಕೆ ಬೆದರಿಕೆ ಎದುರಿಸುತ್ತಿಲ್ಲ?': ಕಾಶ್ಮೀರಿ ಪಂಡಿತರ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ! Video

ಬೆಂಗಳೂರಿನ 'ಸುರಂಗ ರಸ್ತೆ' ಯೋಜನೆ ಬೆಂಬಲಿಸಲು ಉದ್ಯಮಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಕರೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್