ಚಿನ್ನ-ಬೆಳ್ಳಿ 
ರಾಜ್ಯ

ತುಮಕೂರು: ಮಗನ ಮದುವೆಗೆ ಮಹಾರಾಷ್ಟ್ರಕ್ಕೆ ತೆರಳಿದ್ದ ಆಭರಣ ವ್ಯಾಪಾರಿ ಮನೆಗೆ ಕನ್ನ; ₹2.25 ಕೋಟಿ ಮೌಲ್ಯದ ಚಿನ್ನ-ಬೆಳ್ಳಿ ಕಳ್ಳತನ

ಕಳ್ಳತನವಾದ ಬೆಲೆಬಾಳುವ ವಸ್ತುಗಳಲ್ಲಿ ಚಿನ್ನದ ಬಿಸ್ಕತ್ತುಗಳು, ಬೆಳ್ಳಿಯ ಬಾರ್‌ಗಳು ಮತ್ತು ಬೆಳ್ಳಿಯ ನಾಣ್ಯಗಳಲ್ಲದೆ, ಇತರ ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ಇಲ್ಲಿನ ಆಭರಣ ವ್ಯಾಪಾರಿಯೊಬ್ಬರ ಮನೆಯಿಂದ ಸುಮಾರು ₹2.25 ಕೋಟಿ ಮೌಲ್ಯದ ಚಿನ್ನ-ಬೆಳ್ಳಿಯ ಆಭರಣಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆಭರಣ ವ್ಯಾಪಾರಿ ಲಕ್ಷಂ ಗಣಪತ್ ಪವಾರ್ ಮತ್ತು ಅವರ ಕುಟುಂಬವು ಆಗಸ್ಟ್ 29 ಮತ್ತು 30 ರಂದು ತಮ್ಮ ಮಗನ ಮದುವೆಗಾಗಿ ಮಹಾರಾಷ್ಟ್ರದ ಸಾಂಗ್ಲಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳ್ಳರು ಕಾಂಪೌಂಡ್ ಗೋಡೆ ಹಾಗೂ ಕಿಟಕಿಗಳ ಗ್ರಿಲ್ ಅನ್ನು ಕತ್ತರಿಸಿ ಮನೆಗೆ ನುಗ್ಗಿದ್ದಾರೆ. ಗುರುತು ಸಿಗದಂತೆ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನವಾದ ಬೆಲೆಬಾಳುವ ವಸ್ತುಗಳಲ್ಲಿ ಚಿನ್ನದ ಬಿಸ್ಕತ್ತುಗಳು, ಬೆಳ್ಳಿಯ ಬಾರ್‌ಗಳು ಮತ್ತು ಬೆಳ್ಳಿಯ ನಾಣ್ಯಗಳಲ್ಲದೆ, ಇತರ ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕ್‌ನ F-16 ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ಅವಧಿಗೂ ಮುನ್ನವೇ ನಿವೃತ್ತಿ; ಈಗ ಗೋವಾ ಏರ್ಲೈನ್ಸ್ ಪೈಲಟ್!

ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಓಡಿಸಲು ಅನುಮತಿ ಕೊಡಿ, ಇದರಿಂದ 8 ಕೋಟಿ ಉದ್ಯೋಗ ಸೃಷ್ಟಿ: ರಾಜ್ಯಗಳಿಗೆ ನಿತಿನ್ ಗಡ್ಕರಿ ಮನವಿ

'ಸೇಡಿನ ಮನೋಭಾವ ಸರಿಯಲ್ಲ'.. 'ನಮ್ಮ ವಿರುದ್ಧ ಏನಾದರೊಂದು ಟ್ವೀಟ್ ಮಾಡ್ತಾನೇ ಇರ್ತಾನೆ': ಇರ್ಫಾನ್ ಪಠಾಣ್ ಬಗ್ಗೆ ಪಾಕಿಸ್ತಾನ ಮಾಜಿ ವೇಗಿ Wasim Akram ಅಚ್ಚರಿ ಹೇಳಿಕೆ

ಜನಾರ್ದನ ರೆಡ್ಡಿ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ, ಶ್ರೀರಾಮುಲು ಉಪಾಧ್ಯಕ್ಷ, ಲೂಟಿಕೋರರಿಂದ ಪಾಠ ಕಲಿಯಬೇಕಿಲ್ಲ: ಪ್ರದೀಪ್ ಈಶ್ವರ್

ಸಿಎಂಗೆ ಕಟ್ಟಿದ ಚಿನ್ನದ ರಾಖಿ ಕೂಡ ರಕ್ಷಿಸಲಿಲ್ಲ; Konda Surekhaಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ, ಸಂಪುಟದಿಂದ ಗೇಟ್‌ಪಾಸ್