ಡಿಸಿಎಂ ಪರಮೇಶ್ವರ್ 
ರಾಜ್ಯ

ಪಾರ್ಕ್ ಬಿಲ್‌ಗೆ ಸದ್ಯಕ್ಕೆ ಬ್ರೇಕ್; ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ: ಡಿಸಿಎಂ ಜಿ. ಪರಮೇಶ್ವರ; Video

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮಸೂದೆಯನ್ನು ಸದ್ಯಕ್ಕೆ ವಾಪಸ್ ಪಡೆದು ಸಾರ್ವಜನಿಕ ಚರ್ಚೆಗೆ ಮುಕ್ತಗೊಳಿಸಲಾಗುವುದು.

ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ಮಸೂದೆ, 2026 ಅನ್ನು ವಾಪಸ್ ಪಡೆಯಲು ಸಚಿವ ಸಂಪುಟ ನಿರ್ಧರಿಸಿದೆಯಾದರೂ ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ ಮಾಡುವುದಾಗಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮಸೂದೆಯನ್ನು ಸದ್ಯಕ್ಕೆ ವಾಪಸ್ ಪಡೆದು ಸಾರ್ವಜನಿಕ ಚರ್ಚೆಗೆ ಮುಕ್ತಗೊಳಿಸಲಾಗುವುದು. ಮಸೂದೆಯಲ್ಲಿರುವ ಅಂಶಗಳ ಬಗ್ಗೆ ಸ್ಪಷ್ಟನೆ ನೀಡಲು ಹಾಗೂ ಸಾರ್ವಜನಿಕರಿಂದ ವ್ಯಕ್ತವಾಗಿರುವ ಆತಂಕಗಳನ್ನು ಪರಿಹರಿಸಲು ಮುಂದಿನ ಅಧಿವೇಶನದವರೆಗಿನ ಅವಧಿಯನ್ನು ಸರ್ಕಾರ ಬಳಸಿಕೊಳ್ಳಲಿದೆ ಎಂದು ಹೇಳಿದರು.

“ಸದ್ಯಕ್ಕೆ ಮಸೂದೆಯನ್ನು ವಾಪಸ್ ಪಡೆಯಲು ನಿರ್ಧರಿಸಿದ್ದೇವೆ. ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆಗಾಗಿ ಇದನ್ನು ಸಾರ್ವಜನಿಕ ವಲಯಕ್ಕೆ ತರಲಾಗುವುದು. ಮುಂದಿನ ಅಧಿವೇಶನದಲ್ಲಿ ಮಸೂದೆಯನ್ನು ಮತ್ತೆ ಮಂಡಿಸಲಾಗುವುದು” ಎಂದರು.

ಮಸೂದೆಯನ್ನು ಮತ್ತಷ್ಟು ಚರ್ಚೆಗೆ ಒಳಪಡಿಸಿ, ಅಗತ್ಯ ಸ್ಪಷ್ಟನೆ ಹಾಗೂ ಬದಲಾವಣೆಗಳ ಬಳಿಕ ಮುಂದಿನ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಪ್ರತಿಭಟನೆ ಹಿಂದೆ ಬಿಜೆಪಿ ರಾಜಕೀಯ

ಅಂತೆಯೇ ಮಸೂದೆ ವಿರುದ್ಧ ನಡೆದ ಪ್ರತಿಭಟನೆ ಹಾಗೂ ಅಭಿಯಾನಗಳ ಹಿಂದೆ ಬಿಜೆಪಿ ರಾಜಕೀಯ ಉದ್ದೇಶವಿದೆ ಎಂದು ಅವರು ಆರೋಪಿಸಿದರು.

“ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ಈ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಮಸೂದೆ ಕುರಿತು ವಿವರವಾದ ಚರ್ಚೆಯನ್ನೂ ನಡೆಸಲಿಲ್ಲ. ಬದಲಾಗಿ, ರಾಜಕೀಯ ಉದ್ದೇಶಕ್ಕಾಗಿ ಈ ವಿಚಾರವನ್ನು ಬಳಸಿಕೊಂಡು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಯಿತು” ಎಂದು ಪರಮೇಶ್ವರ್ ಹೇಳಿದರು.

ಸರ್ಕಾರ ಮಸೂದೆಯನ್ನು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಉದ್ಯಾನವನಗಳ ಜಾಗವನ್ನು ಸಾರ್ವಜನಿಕ ಯೋಜನೆಗಳಿಗಾಗಿ ಬಳಸುವ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾರ್ವಜನಿಕ ಚರ್ಚೆ ನಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

'ಲಾಲ್‌ಬಾಗ್ ಉಳಿಸಿ..': ಕೊನೆಗೂ ಹೋರಾಟಕ್ಕೆ ಮಣಿದ ಸರ್ಕಾರ; ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಸ್; BJP ಸ್ವಾಗತ; Video

Video; ಉರಿಯುತ್ತಿದ್ದ ಚಿತೆಯಿಂದ ಮಾಂಸ ತೆಗೆದು ತಿಂದ 'ಅಘೋರಿ', ಉಜ್ಜೈನ್ ಪೊಲೀಸರಿಂದ ಬಂಧನ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ

7.8% ಜಿಡಿಪಿ ಹೇಳಿಕೆ ಬಗ್ಗೆ ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ 4 ಪ್ರಶ್ನೆ