ವಿಜಯ್ ಮತ್ತು ನಾಗರತ್ನ 
ರಾಜ್ಯ

ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!

ನಾನು ನನ್ನ ಮಕ್ಕಳಿಗಾಗಿ ಹಾಗೂ ಅವರ ಭವಿಷ್ಯದ ಒಳಿತಿಗಾಗಿ ಎಲ್ಲವನ್ನೂ ಸಹಿಸಿಕೊಂಡು, ಈ ಮದುವೆಯನ್ನು ಉಳಿಸಿಕೊಳ್ಳುವ ಆಶಯದಿಂದ ವಿಚ್ಛೇದನವನ್ನು ವಿರೋಧಿಸುತ್ತಲೇ ಬಂದೆ. ಅದು ಸುಲಭವಾಗಿರಲಿಲ್ಲ.

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಪತ್ನಿ ನಾಗರತ್ನ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಈ ವೈವಾಹಿಕ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ.

‘ನಾಗರತ್ನ ಅವರಿಗೆ ₹2 ಕೋಟಿ ಶಾಶ್ವತ ಪರಿಹಾರವನ್ನು ಮುಂದಿನ ಮೂರು ತಿಂಗಳಲ್ಲಿ ಪಾವತಿ ಮಾಡಬೇಕು’ ಎಂದು ನ್ಯಾಯಪೀಠ ವಿಜಯ್‌ಗೆ ನಿರ್ದೇಶಿಸಿದೆ. ವಿಚ್ಛೇದನದ ಆದೇಶ ಹೊಬಿದ್ದ ಬೆನ್ನಲೇ ನಾಗರತ್ನ ಅವರು ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಮಕ್ಕಳ ಭವಿಷ್ಯವೇ ಮೊದಲ ಆದ್ಯತೆ ಎಂದಿರುವ ಅವರು, ಸದ್ಯ ತಮ್ಮ ಅನುಭವಗಳ ಬಗ್ಗೆ ಹೆಚ್ಚು ಮಾತನಾಡದಿರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಎಲ್ಲಾ ಪ್ರೀತಿಯ ಜನತೆಗೆ ಹಾಗೂ ಮಾಧ್ಯಮದವರಿಗೆ ನನ್ನ ನಮಸ್ಕಾರಗಳು... ಇಷ್ಟು ವರ್ಷಗಳ ಕಾಲ ನಾನು ನನ್ನ ಮಕ್ಕಳಿಗಾಗಿ ಹಾಗೂ ಅವರ ಭವಿಷ್ಯದ ಒಳಿತಿಗಾಗಿ ಎಲ್ಲವನ್ನೂ ಸಹಿಸಿಕೊಂಡು, ಈ ಮದುವೆಯನ್ನು ಉಳಿಸಿಕೊಳ್ಳುವ ಆಶಯದಿಂದ ವಿಚ್ಛೇದನವನ್ನು ವಿರೋಧಿಸುತ್ತಲೇ ಬಂದೆ. ಅದು ಸುಲಭವಾಗಿರಲಿಲ್ಲ.

ಆದರೆ ಇಂದು, ನ್ಯಾಯಾಲಯವು ಅಂತಿಮವಾಗಿ ವಿಚ್ಛೇದನವನ್ನು ಮಂಜೂರು ಮಾಡಿದೆ. ಈ ದೀರ್ಘ ಹೋರಾಟದ ಉದ್ದೇಶ, ನಮ್ಮ ಮದುವೆಯ ಹೊರಗೆ ಆಯ್ಕೆ ಮಾಡಿಕೊಂಡ ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ.

ನಾನು ಅನುಭವಿಸಿದ ನಾರ್ಸಿಸಿಸ್ಟಿಕ್ ಅಬ್ಯೂಸ್ ಹಾಗೂ ಅದರ ನೋವು ಮತ್ತು ಅದರಿಂದಾದ ಎಲ್ಲಾ ಪರಿಣಾಮಗಳನ್ನು ಸಹಿಸಿಕೊಂಡಿದ್ದೇನೆ. ಹೊರಗಿನಿಂದ ಯಾರಿಗೂ ಕಾಣದಂತಹ ಆಳವಾದ ಮಾನಸಿಕ ಹಾಗೂ ಭಾವನಾತ್ಮಕ ನೋವನ್ನು ಒಳಗೇ ಇಟ್ಟುಕೊಂಡು ಬದುಕುವುದು ಹೇಗಿರುತ್ತದೆ ಎಂಬುದು ನನಗೆ ಮಾತ್ರ ಗೊತ್ತು. ನನ್ನ ಅನುಭವವನ್ನು ಒಂದು ದಿನ ಖಂಡಿತವಾಗಿಯೂ ಹಂಚಿಕೊಳ್ಳಲು ಬಯಸುತ್ತೇನೆ.

ಯಾರ ಮೇಲೂ ಆರೋಪ ಹೊರಿಸುವುದಕ್ಕಾಗಲಿ ಅಲ್ಲ. ಇಂತಹ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ತಾವು ಒಂಟಿಯಲ್ಲ ಎಂಬ ಅರಿವು ಮೂಡಿಸುವುದೇ ನನ್ನ ಉದ್ದೇಶ. ನನ್ನ ಮಕ್ಕಳ ಭವಿಷ್ಯವೇ ಯಾವಾಗಲೂ ನನ್ನ ಮೊದಲ ಆದ್ಯತೆಯಾಗಿತ್ತು, ಇಂದಿಗೂ ಅದೇ ನನ್ನ ಮೊದಲ ಆದ್ಯತೆ. ಏಕೆಂದರೆ...ಅವರ ಜೀವನದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ, ನನ್ನ ವೈಯಕ್ತಿಕ ನೋವುಗಳು ಅದರ ಮೇಲೆ ನೆರಳು ಬೀಳುವುದು ನನಗೆ ಇಷ್ಟವಿಲ್ಲ.

ಆದ್ದರಿಂದ ಇಂದು ನಾನು ಮೌನವಾಗಿರಲು ಆಯ್ಕೆ ಮಾಡಿಕೊಳ್ಳುತ್ತಿದ್ದೇನೆ. ಎಲ್ಲದಕ್ಕೂ ಒಂದು ಸರಿಯಾದ ಸಮಯವಿದೆ ಎಂಬ ಕಾರಣಕ್ಕೆ. ಒಂದು ದಿನ ನನ್ನ ಅನುಭವವನ್ನು ನನ್ನದೇ ಮಾತುಗಳಲ್ಲಿ ಹಂಚಿಕೊಳ್ಳುತ್ತೇನೆ. ನನ್ನ ಮಕ್ಕಳು ಯಾವಾಗಲೂ ನನ್ನ ಶಕ್ತಿಯಾಗಿ ನನ್ನ ಜೊತೆ ನಿಂತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೂವರು ಮಕ್ಕಳ ಮೇಲಿದ್ದರೆ, ನನಗೆ ಅಷ್ಟೇ ಸಾಕು ವಿಜಯ್ ಕುಮಾರ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ ಎಂದು ಹಾರೈಸುತ್ತೇನೆ ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ ಎಂದು ಪೋಸ್ಟ್ ಮಾಡಿಕೊಂಡಿದ್ದಾರೆ. ನಾಗರತ್ನ ಅವರ ಪ್ರತಿಕ್ರಿಯೆಯನ್ನ ಪುತ್ರಿ , ನಟಿ ಮೊನಿಷಾ ವಿಜಯ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ

ಬಿಜೆಪಿ 'ಬಳ್ಳಾರಿ ಚಲೋ'ಗೆ 3ನೇ ದಿನವೂ ಭರ್ಜರಿ ಸ್ಪಂದನೆ: ರೈತರ 5 ಲಕ್ಷ ರು. ವರೆಗಿನ ಸಾಲಮನ್ನಾಗೆ ವಿಜಯೇಂದ್ರ ಪಟ್ಟು!

ತೈಲ ಖರೀದಿಸುವುದು ಅಥವಾ ಖರೀದಿಸದಿರುವುದು ಉಕ್ರೇನ್ ಯುದ್ಧವನ್ನು ಪರಿಹರಿಸುವುದಿಲ್ಲ: ಕೈವ್‌ನಲ್ಲಿ ರಾಜತಾಂತ್ರಿಕತೆಗೆ EAM ಜೈಶಂಕರ್ ಕರೆ