ರಾಜ್ಯ

KPSC ನೇಮಕಾತಿಯಲ್ಲಿ ಸಂದರ್ಶನ ಕೈಬಿಟ್ಟು, ಲಿಖಿತ ಪರೀಕ್ಷೆ ಆಧರಿಸಿ ಆಯ್ಕೆ ಮಾಡಿ: ಸರ್ಕಾರಕ್ಕೆ ಕಾಂಗ್ರೆಸ್‌ ನಾಯಕ ಎಸ್‌.ಎ. ಹುಸೇನ್‌ ಆಗ್ರಹ

ಸಂದರ್ಶನವು ಆಯ್ಕೆ ಪ್ರಕ್ರಿಯೆಯಲ್ಲಿನ ಒಂದು ಹಂತವಾಗಿದ್ದು, ನಂತರ ಅದನ್ನು ಮರುಪರಿಶೀಲಿಸಲು ಸಾಧ್ಯವಾಗುವ ರೀತಿಯಲ್ಲಿ ಯಾವುದೇ ದಾಖಲೆ ಉಳಿಯುವುದಿಲ್ಲ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಸಂದರ್ಶನವನ್ನು ಕೈಬಿಟ್ಟು, ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಸಾಧನೆಯ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಉಪಾಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಎಸ್‌.ಎ. ಹುಸೇನ್‌ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು, “ಸಂದರ್ಶನವು ಆಯ್ಕೆ ಪ್ರಕ್ರಿಯೆಯಲ್ಲಿನ ಒಂದು ಹಂತವಾಗಿದ್ದು, ನಂತರ ಅದನ್ನು ಮರುಪರಿಶೀಲಿಸಲು ಸಾಧ್ಯವಾಗುವ ರೀತಿಯಲ್ಲಿ ಯಾವುದೇ ದಾಖಲೆ ಉಳಿಯುವುದಿಲ್ಲ. ಅಭ್ಯರ್ಥಿಯ ಉತ್ತರ ಪತ್ರಿಕೆ ಇಲ್ಲ, ಒಎಂಆರ್‌ ಶೀಟ್‌ ಇಲ್ಲ, ಅಭ್ಯರ್ಥಿಯ ಫಲಿತಾಂಶವನ್ನು ಪರಿಶೀಲಿಸಲು ಸಾಧ್ಯವಾಗುವಂತಹ ಉತ್ತರ ಕೀ ಕೂಡ ಇರುವುದಿಲ್ಲ ಎಂದು ಹೇಳಿದ್ದಾರೆ.

ಸಂದರ್ಶನವು ಅಭ್ಯರ್ಥಿಯ ಅರ್ಹತೆಯನ್ನು ಅಳೆಯುವಲ್ಲಿ ಬಹಳ ಕಡಿಮೆ ಕೊಡುಗೆ ನೀಡುತ್ತದೆ. ಆದರೆ, ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ಧಾರ ಕೈಗೊಳ್ಳುವ ವಿವೇಚನಾಧಿಕಾರದ ಬಹುಪಾಲು ಈ ಹಂತದಲ್ಲೇ ಇರುತ್ತದೆ.

ಸಂದರ್ಶನವನ್ನು ತೆಗೆದುಹಾಕುವುದರಿಂದ ಆಯ್ಕೆಯ ಗುಣಮಟ್ಟಕ್ಕೆ ರಾಜ್ಯಕ್ಕೆ ಯಾವುದೇ ದೊಡ್ಡ ನಷ್ಟವಾಗುವುದಿಲ್ಲ. ಜೊತೆಗೆ ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದ ಒಂದು ಹಂತವನ್ನು ತೆಗೆದುಹಾಕಿದಂತಾಗುತ್ತದೆ.

ಕೆಪಿಎಸ್‌ಸಿಯಲ್ಲಿ ಅಕ್ರಮಗಳ ಆರೋಪಗಳು ಕಳೆದ ಸುಮಾರು ಮೂರು ದಶಕಗಳಿಂದ ಮತ್ತೆ ಮತ್ತೆ ಕೇಳಿಬರುತ್ತಿವೆ. ಪ್ರತಿಬಾರಿಯೂ ಆರೋಪಗಳು ಕೇಳಿಬಂದಾಗ ಆರೋಪಪಟ್ಟಿ ಸಲ್ಲಿಕೆ, ತನಿಖೆ, ಮರುಪರೀಕ್ಷೆ ಅಥವಾ ಅಧಿಕಾರಿಗಳ ವರ್ಗಾವಣೆಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ನಮ್ಮ ಸರ್ಕಾರ ನ್ಯಾಯಯುತ ತನಿಖೆಗೆ ಅವಕಾಶ ನೀಡಿದೆ. ಆದರೆ ಬದಲಾಗದೆ ಉಳಿದಿರುವುದು ವ್ಯವಸ್ಥೆಯ ರಚನೆ. ಪ್ರತಿಯೊಂದು ಪ್ರಕರಣದಲ್ಲೂ ಮತ್ತೆ ಮತ್ತೆ ಎದುರಾಗುತ್ತಿರುವ ಮೂರು ಹಂತಗಳೆಂದರೆ ಪ್ರಶ್ನೆಪತ್ರಿಕೆಯ ಭದ್ರತೆ, ಉತ್ತರ ಪತ್ರಿಕೆಯ ಮೌಲ್ಯಮಾಪನ ಹಾಗೂ ಸಂದರ್ಶನದಲ್ಲಿ ಲಭ್ಯವಿರುವ ವಿವೇಚನಾಧಿಕಾರ.

ಹೀಗಾಗಿ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಪರಿಶೀಲನೆಗೆ ಒಳಪಡಬಹುದಾದ ರೀತಿಯಲ್ಲಿ ರೂಪಿಸಲು ಲಿಖಿತ ಪರೀಕ್ಷೆಯ ಸಾಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಪ್ರವಾಹ ದುರಂತ: ನಾಪತ್ತೆಯಾದವರ ಕುಟುಂಬಕ್ಕೆ ಭಾರತ ನೆರವು, DNA ಪರೀಕ್ಷೆಗೆ ಕೇಂದ್ರದಿಂದ ವ್ಯವಸ್ಥೆ..!

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ