ಚೇರ್ ಮನ್ ಕ್ಲಬ್ ನ ಕಿಚನ್ ರೂಂನ ದೃಶ್ಯ  
ರಾಜ್ಯ

ಆಹಾರ ಸುರಕ್ಷತೆ ಗಂಭೀರ ಉಲ್ಲಂಘನೆ: ಚೇರ್‌ಮನ್ ಕ್ಲಬ್ ಕಿಚನ್ ಬಂದ್; ಹಲವು ವಸ್ತುಗಳು ವಶ; Video

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದ ಮೇರೆಗೆ ನಿನ್ನೆ ತಪಾಸಣೆ ನಡೆಸಲಾಯಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ) ನಿಯಮಗಳು-2011ರ ಅನ್ವಯ ಈ ತಪಾಸಣೆ ಕೈಗೊಳ್ಳಲಾಗಿದೆ.

ಬೆಂಗಳೂರು: ಸಹಕಾರನಗರ (ಡಾಲರ್ಸ್ ಕಾಲೋನಿ)ದಲ್ಲಿರುವ ಚೇರ್‌ಮನ್ ಕ್ಲಬ್‌ನ ಅಡುಗೆಮನೆಯನ್ನು ವಿಶೇಷ ತಪಾಸಣೆ ನಡೆಸಿದ ಬಳಿಕ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮುಚ್ಚಿ, ವಶಕ್ಕೆ ಪಡೆದಿದೆ. ತಪಾಸಣೆ ವೇಳೆ ಆಹಾರ ಸುರಕ್ಷತೆ ಮತ್ತು ಸ್ವಚ್ಛತಾ ನಿಯಮಗಳ ಗಂಭೀರ ಉಲ್ಲಂಘನೆಗಳು ಪತ್ತೆಯಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದ ಮೇರೆಗೆ ನಿನ್ನೆ ತಪಾಸಣೆ ನಡೆಸಲಾಯಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ) ನಿಯಮಗಳು-2011ರ ಅನ್ವಯ ಈ ತಪಾಸಣೆ ಕೈಗೊಳ್ಳಲಾಗಿದೆ.

ತಪಾಸಣೆ ವೇಳೆ ಆಹಾರ ಉತ್ಪನ್ನವಾಗಿ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಅವಧಿ ಮೀರಿದ ಮೆಣಸಿನಕಾಯಿಯನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಇದಲ್ಲದೆ, FSSAI ನಿಯಮಗಳಿಗೆ ಅನುಸಾರ 5 ಕೆ.ಜಿ. ಬ್ರೆಡ್‌ಕ್ರಂಬ್ಸ್ ಹಾಗೂ 2 ಕೆ.ಜಿ. ಸಜೀರಾ ಆಹಾರ ಉತ್ಪನ್ನಗಳಿಗೆ ಸರಿಯಾದ ಲೇಬಲ್ ಅಳವಡಿಸದಿರುವುದು, ಆಹಾರ ತಯಾರಿಕೆ ಮತ್ತು ಸಂಗ್ರಹಣಾ ಪ್ರದೇಶಗಳಲ್ಲಿ ತೀವ್ರ ಸ್ವಚ್ಛತೆಯ ಕೊರತೆ, ಆಹಾರ ಪದಾರ್ಥಗಳಲ್ಲಿ ಅನುಮತಿಯಿಲ್ಲದ ಕೃತಕ ಬಣ್ಣಗಳ ಬಳಕೆ ಅಥವಾ ಸಂಗ್ರಹಣೆ, ಆಹಾರವನ್ನು ಸಂಗ್ರಹಿಸುವ ಹಾಗೂ ನಿರ್ವಹಿಸುವ ವೇಳೆ ನಿಗದಿತ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ಮತ್ತು ಸಸ್ಯಾಹಾರಿ ಹಾಗೂ ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಒಟ್ಟಿಗೆ ಸಂಗ್ರಹಿಸಿರುವುದು ಪತ್ತೆಯಾಗಿದೆ.

ಅಡುಗೆಮನೆಯು ಅತ್ಯಂತ ಅಸ್ವಚ್ಛ ಸ್ಥಿತಿಯಲ್ಲಿದ್ದು, ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಹೊಂದಿತ್ತು ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಈ ಎಲ್ಲ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗಂಭೀರ ಲೋಪಗಳ ಹಿನ್ನೆಲೆಯಲ್ಲಿ ಕ್ಲಬ್‌ನ ಅಡುಗೆಮನೆಯನ್ನು ಮುಚ್ಚಿ ವಶಕ್ಕೆ ಪಡೆಯಲಾಗಿದ್ದು, ಅನ್ವಯವಾಗುವ ಆಹಾರ ಸುರಕ್ಷತಾ ಕಾನೂನುಗಳ ಅಡಿಯಲ್ಲಿ ಮುಂದಿನ ಕಾನೂನು ಕ್ರಮ ಆರಂಭಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಆಹಾರ ಸುರಕ್ಷತೆ ಮತ್ತು ಸ್ವಚ್ಛತಾ ಮಾನದಂಡಗಳನ್ನು ಉಲ್ಲಂಘಿಸುವ ಆಹಾರ ಸಂಸ್ಥೆಗಳ ವಿರುದ್ಧ ನಿರಂತರ ತಪಾಸಣೆ ನಡೆಸಿ, ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಜಲಪ್ರಳಯ ನಡುವೆ ಮಹಾ ಪವಾಡ; ಮೃತ್ಯುಕೂಪದಿಂದ ಹೊರಬಂದ ಕಾರ್ಮಿಕರು, ತ್ರಿಶೂಲಿ-3A ಸುರಂಗದಿಂದ ಇಬ್ಬರು ಜೀವಂತ ರಕ್ಷಣೆ..!

Climate compensation ವಿವಾದ; ಭಾರತದಿಂದ ನೆರವು ಸ್ವೀಕರಿಸಿದ್ದೇವೆ, ಯಾವುದೇ ಪರಿಹಾರಕ್ಕೂ ಬೇಡಿಕೆ ಇಟ್ಟಿಲ್ಲ; ನೇಪಾಳ ಸ್ಪಷ್ಟನೆ..!

ನೇಪಾಳ ಪ್ರವಾಹ ದುರಂತ: ನಾಪತ್ತೆಯಾದವರ ಕುಟುಂಬಕ್ಕೆ ಭಾರತ ನೆರವು, DNA ಪರೀಕ್ಷೆಗೆ ಕೇಂದ್ರದಿಂದ ವ್ಯವಸ್ಥೆ..!

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ