ಕಾಮಗಾರಿ ವೇಳೆ ಪತ್ತೆಯಾದ ಚಿನ್ನದ ನಾಣ್ಯ 
ರಾಜ್ಯ

ಸವದತ್ತಿ: ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕೂಲಿ ಕಾರ್ಮಿಕರಿಗೆ ಚಿನ್ನದ ನಾಣ್ಯಗಳ ನಿಧಿ ಪತ್ತೆ!

ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುವ ವೇಳೆ ನಾಣ್ಯಗಳು ಸಿಕ್ಕಿದ್ದು, ಒಟ್ಟು 54.8 ಗ್ರಾಂ ತೂಕ ಹೊಂದಿರುವ ಇವುಗಳ ಮೌಲ್ಯ ಸುಮಾರು ₹8.27 ಲಕ್ಷ ಎಂದು ಅಂದಾಜಿಸಲಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಗಡಿಗೆಯೊಳಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುವ ವೇಳೆ ನಾಣ್ಯಗಳು ಸಿಕ್ಕಿದ್ದು, ಒಟ್ಟು 54.8 ಗ್ರಾಂ ತೂಕ ಹೊಂದಿರುವ ಇವುಗಳ ಮೌಲ್ಯ ಸುಮಾರು ₹8.27 ಲಕ್ಷ ಎಂದು ಅಂದಾಜಿಸಲಾಗಿದೆ.

ನಾಣ್ಯಗಳು ಪತ್ತೆಯಾದ ಕೂಡಲೇ ಕೂಲಿ ಕಾರ್ಮಿಕರು ಅವುಗಳನ್ನು ಅಧಿಕಾರಿಗಳಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಸಮ್ಮುಖದಲ್ಲಿ ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಅವರಿಗೆ ನಾಣ್ಯಗಳನ್ನು ಹಸ್ತಾಂತರಿಸಲಾಗಿದೆ. ಬಳಿಕ ತಹಶೀಲ್ದಾರ್ ಅವರು ಎಲ್ಲ ನಾಣ್ಯಗಳನ್ನು ಖಜಾನೆಗೆ ಒಪ್ಪಿಸಲಾಗಿದೆ.

ಪತ್ತೆಯಾದ ನಾಣ್ಯಗಳ ಮೇಲೆ ಆನೆಯ ಚಿತ್ರ ಇರುವುದಾಗಿ ತಿಳಿದುಬಂದಿದೆ. ತಲಕಾಡಿನ ಗಂಗರ ರಾಜಲಾಂಛನ ಆನೆಯಾಗಿದ್ದ ಹಿನ್ನೆಲೆಯಲ್ಲಿ, ಈ ನಾಣ್ಯಗಳು ಗಂಗರ ಕಾಲಕ್ಕೆ ಸಂಬಂಧಿಸಿರಬಹುದೇ ಎಂಬ ಕುತೂಹಲ ಮೂಡಿದೆ. ನಾಣ್ಯಗಳು ಕ್ರಿ.ಶ. 10ರಿಂದ 15ನೇ ಶತಮಾನದ ಅವಧಿಗೆ ಸೇರಿದವು ಎಂಬ ಅನುಮಾನ ವ್ಯಕ್ತವಾಗಿದೆ.

ಆದರೆ ನಾಣ್ಯಗಳ ನಿಖರ ಕಾಲಘಟ್ಟ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಖಚಿತಪಡಿಸಲು ಹೆಚ್ಚಿನ ಪರಿಶೀಲನೆ ಅಗತ್ಯವಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ನಾಣ್ಯಗಳು ಸಿಕ್ಕರೂ ಅವುಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ ಕೂಲಿ ಕಾರ್ಮಿಕರ ಪ್ರಾಮಾಣಿಕತೆಗೆ ಸವದತ್ತಿ ತಾಲೂಕು ಆಡಳಿತ ಮೆಚ್ಚುಗೆ ವ್ಯಕ್ತಪಡಿಸಿದೆ.

ನಾಣ್ಯಗಳ ಐತಿಹಾಸಿಕ ಮಹತ್ವ, ಮೂಲ ಮತ್ತು ನಿಖರವಾದ ಅವಧಿಯ ಮೌಲ್ಯಮಾಪನಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಅವುಗಳ ಗೋಚರತೆಯ ಆಧಾರದ ಮೇಲೆ, ನಾಣ್ಯಗಳು 800 ರಿಂದ 1,000 ವರ್ಷಗಳಷ್ಟು ಹಳೆಯದಾಗಿವೆ ಎಂದು ತಾತ್ಕಾಲಿಕವಾಗಿ ಶಂಕಿಸಲಾಗಿದೆ. ಪುರಾತತ್ವ ಇಲಾಖೆಯ ಪರೀಕ್ಷೆಯ ನಂತರವೇ ನಾಣ್ಯಗಳ ನಿಜವಾದ ಅವಧಿ, ಐತಿಹಾಸಿಕ ಮಹತ್ವ ಮತ್ತು ಅಧಿಕೃತ ಮೌಲ್ಯವನ್ನು ಸ್ಥಾಪಿಸಬಹುದು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!