ಸಂಗ್ರಹ ಚಿತ್ರ 
ರಾಜ್ಯ

ಪ್ರವಾಸಿಗರಿಗೆ Good News: 4 ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ, Red-Green ಝೋನ್ ನಿಯಮದಡಿ ವೀಕ್ಷಣೆಗೆ ಅವಕಾಶ..!

ಇದೀಗ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್‌ಒಪಿ ಅನ್ವಯ ಶಿಬಿರಗಳನ್ನು ಪುನರಾರಂಭಿಸಲಾಗಿದೆ. ಹೊಸ ನಿಯಮಗಳಡಿ ಪ್ರವಾಸಿಗರು ಆನೆಗಳೊಂದಿಗೆ ನೇರ ಸಂಪರ್ಕ ಹೊಂದುವುದಕ್ಕೆ ಹೆಚ್ಚಿನ ನಿರ್ಬಂಧ ವಿಧಿಸಲಾಗಿದೆ.

ಮಡಿಕೇರಿ: ಪ್ರವಾಸಿಗರಿಗೆ ಅರಣ್ಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಸುರಕ್ಷತಾ ಕಾರಣಗಳಿಗಾಗಿ ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಲಾಗಿದ್ದ ಕೊಡಗಿನ ಪ್ರಸಿದ್ಧ ಹಾರಂಗಿ ಮತ್ತು ಮೈಸೂರು ಗಡಿಯ ಬಳಿಯಿರುವ ಮತ್ತಿಗೋಡು ಆನೆ ಶಿಬಿರಗಳನ್ನು ಇಂದಿನಿಂದ (ಶನಿವಾರ) ಸಾರ್ವಜನಿಕರ ವೀಕ್ಷಣೆಗೆ ಅಧಿಕೃತವಾಗಿ ಮುಕ್ತಗೊಂಡಿವೆ. ಆದರೆ, ಪ್ರವಾಸಿಗರ ನೆಚ್ಚಿನ ತಾಣವಾದ ದುಬಾರೆ ಆನೆ ಶಿಬಿರವು ಇನ್ನು ಕೆಲವು ದಿನಗಳ ಕಾಲ ಮುಚ್ಚಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ದುರಂತದಲ್ಲಿ ಪ್ರವಾಸಿಗರೊಬ್ಬರು ಹಾಗೂ ಸಾಕಿದ್ದ ಆನೆಯೊಂದು ಮೃತಪಟ್ಟಿದ್ದವು. ಘಟನೆಯ ಬಳಿಕ ರಾಜ್ಯದ ಎಲ್ಲ ಆನೆ ಶಿಬಿರಗಳಲ್ಲಿನ ಪ್ರವಾಸಿಗರ ಚಟುವಟಿಕೆಗಳನ್ನು ಅರಣ್ಯ ಇಲಾಖೆ ಸ್ಥಗಿತಗೊಳಿಸಿ, ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿತ್ತು.

ಇದೀಗ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್‌ಒಪಿ ಅನ್ವಯ ಶಿಬಿರಗಳನ್ನು ಪುನರಾರಂಭಿಸಲಾಗಿದೆ. ಹೊಸ ನಿಯಮಗಳಡಿ ಪ್ರವಾಸಿಗರು ಆನೆಗಳೊಂದಿಗೆ ನೇರ ಸಂಪರ್ಕ ಹೊಂದುವುದಕ್ಕೆ ಹೆಚ್ಚಿನ ನಿರ್ಬಂಧ ವಿಧಿಸಲಾಗಿದೆ.

ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಮಾತನಾಡಿ, ಪ್ರವಾಸಿಗರಿಗೆ ಸಾಕಿದ ಆನೆಗಳನ್ನು ಮುಟ್ಟಲು ಅಥವಾ ಅವುಗಳ ಸಮೀಪಕ್ಕೆ ತೆರಳಲು ಇನ್ನು ಮುಂದೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರವಾಸಿಗರ ಭೇಟಿಯ ಸಮಯದಲ್ಲಿ ಪ್ರತಿಯೊಂದು ಆನೆಯೂ ತನ್ನ ಮಾವುತನ ಮೇಲ್ವಿಚಾರಣೆಯಲ್ಲಿರಲಿದೆ. ಆನೆಗಳ ಆವರಣದೊಳಗೆ ಅರಣ್ಯ ಇಲಾಖೆ ಸಿಬ್ಬಂದಿ, ಮಾವುತರು ಹಾಗೂ ಅಧಿಕೃತ ಸಿಬ್ಬಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಹೊಸ ಸುರಕ್ಷತಾ ಕ್ರಮಗಳ ಭಾಗವಾಗಿ ಆನೆಗಳ ಆವರಣದ ಸುತ್ತ ರೈಲ್ವೆ ಮಾದರಿಯ ತಡೆಗೋಡೆಗಳನ್ನು ನಿರ್ಮಿಸಲಾಗಿದೆ. ಅರಣ್ಯ ಸಿಬ್ಬಂದಿಯೂ ಈ ತಡೆಗೋಡೆಗಳನ್ನು ದಾಟುವಂತಿಲ್ಲ. ಪ್ರವಾಸಿಗರು ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಸುಮಾರು 10 ಮೀಟರ್ ದೂರದಲ್ಲಿ ನಿರ್ಮಿಸಿರುವ ಮತ್ತೊಂದು ಹಸಿರು ಬಣ್ಣದ ತಡೆಗೋಡೆಯ ಹಿಂದೆಯೇ ಇರಬೇಕು. ಪ್ರಸ್ತುತ ಹರಂಗಿ ಆನೆ ಶಿಬಿರದಲ್ಲಿ ಆರು ಆನೆಗಳಿದ್ದು, ಮತ್ತಿಗೋಡು ಶಿಬಿರದಲ್ಲಿ 12 ಆನೆಗಳಿವೆ.

ಇದೇ ವೇಳೆ, ಮೇ ತಿಂಗಳಲ್ಲಿ ಮಾರಣಾಂತಿಕ ಘಟನೆ ನಡೆದಿದ್ದ ದುಬಾರೆ ಆನೆ ಶಿಬಿರವನ್ನು ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ಮುಚ್ಚಿಯೇ ಇಡಲಾಗಿದೆ. ಶಿಬಿರವನ್ನು ಯಾವಾಗ ಪುನರಾರಂಭಿಸಲಾಗುತ್ತದೆ ಎಂಬುದನ್ನು ಅರಣ್ಯ ಇಲಾಖೆ ಇನ್ನೂ ಪ್ರಕಟಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump