ಈಶ್ವರ್ ಖಂಡ್ರೆ online desk
ರಾಜ್ಯ

ಕೈಕೊಟ್ಟ ಮುಂಗಾರು: ರಾಜ್ಯದಲ್ಲಿ ಹೆಚ್ಚಿದ ಬರಗಾಲದ ಆತಂಕ, 180-200 ತಾಲೂಕು ಬರಪೀಡಿತ ಘೋಷಣೆ ಸಾಧ್ಯತೆ: ಸಚಿವ ಈಶ್ವರ್ ಖಂಡ್ರೆ

ಈಗಾಗಲೇ ಬರಪೀಡಿತ ಎಂದು ಘೋಷಿಸಿರುವ 101 ತಾಲೂಕುಗಳಿಗೆ ಬರ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ 2,600 ಕೋಟಿ ರೂ. ಕೇಳಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಕೃಷಿ ಪ್ರದೇಶಗಳಿಗೂ ಕೇಂದ್ರ ಸರ್ಕಾರ ಪರಿಹಾರ ನೀಡುತ್ತದೆ.

ಬೆಂಗಳೂರು: ಎಲ್‌ ನಿನೊ ಪರಿಣಾಮದಿಂದ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದ ವೇಳೆಗೆ ರಾಜ್ಯದ 180ರಿಂದ 200 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 24 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಿದ್ಧತೆ ನಡೆಯುತ್ತಿದೆ. ತಿಂಗಳಾಂತ್ಯದಲ್ಲಿ ನಡೆಯಲಿರುವ ಹೊಸದಾಗಿ ಭೂಮಟ್ಟದ ಪರಿಶೀಲನೆಯ ಬಳಿಕ ಬರಪೀಡಿತ ಪ್ರದೇಶಗಳ ಸಂಖ್ಯೆ 180ರಿಂದ 200ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಈಗಾಗಲೇ ಬರಪೀಡಿತ ಎಂದು ಘೋಷಿಸಿರುವ 101 ತಾಲೂಕುಗಳಿಗೆ ಬರ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ 2,600 ಕೋಟಿ ರೂ. ಕೇಳಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಕೃಷಿ ಪ್ರದೇಶಗಳಿಗೂ ಕೇಂದ್ರ ಸರ್ಕಾರ ಪರಿಹಾರ ನೀಡುತ್ತದೆ ಎಂದು ತಿಳಿಸಿದರು.

ತೀವ್ರ ಬೆಳೆ ನಷ್ಟ ಅನುಭವಿಸಿರುವ ಪ್ರದೇಶಗಳಿಗೆ ಹೆಚ್ಚುವರಿ ಪರಿಹಾರ ಕೇಳುವ ಸಾಧ್ಯತೆಯೂ ಇದೆ. ಈ ಕುರಿತು ಮುಖ್ಯಮಂತ್ರಿ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

2026ರ ಮುಂಗಾರು ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸುತ್ತಿರುವ ಸಚಿವ ಸಂಪುಟ ಉಪಸಮಿತಿಯ ಸದಸ್ಯರಾಗಿರುವ ಖಂಡ್ರೆ, ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಕುರಿತು ವಿವರವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಸಂಸದರು ಹಾಗೂ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬರಪೀಡಿತ ರೈತರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಅದನ್ನು ಬಿಟ್ಟು ಪಾದಯಾತ್ರೆಗಳನ್ನು ನಡೆಸುವ ಮೂಲಕ “ಸಮಯ ವ್ಯರ್ಥ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಡಿಕೆಶಿಗೆ ಟಕ್ಕರ್ ಕೊಡಲು ಹೊಸ ತಂತ್ರ: AHINDA ಮುರಿದು ‘HINDA’ ಕಟ್ಟಲು ಸಿದ್ದು ಮಾಸ್ಟರ್ ಪ್ಲ್ಯಾನ್, ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?

ವಿಶ್ವಕಪ್ 2026: ಶಫಾಲಿ ವರ್ಮಾ ಗೆ ಫೆವಿಲಿಯನ್ ಗೆ ಹೋಗು ಎನ್ನುವಂತೆ ಕೈ ಸನ್ನೆ, ಪಾಕ್ ನಾಯಕಿ ವಿರುದ್ಧ ಭಾರತೀಯರ ಆಕ್ರೋಶ, ಟ್ರೋಲ್! Video

Miss World 2026: ವಿಶ್ವಸುಂದರಿ ಪಟ್ಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಬ್ಯೂಟಿ! ಭಾರತದ ನಿಕಿತಾ ಪೂರ್ವಾಲ್ ಗೆ ನಿರಾಸೆ