ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಹೊರಗಿರುವಂತೆ 'ರೌಡಿ ಶೀಟರ್'ಗೆ ಆದೇಶ!

30 ವರ್ಷದ ಚಂದ್ರಶೇಖರ್ ಅಲಿಯಾಸ್ ಚಂದ್ರ, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾರೆ. ಇವರು ಕಗ್ಗಲಿಪುರದಲ್ಲಿ ನಾಲ್ಕು ಮತ್ತು ತಲಘಟ್ಟಪುರದಲ್ಲಿ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿದ್ದರು.

ಬೆಂಗಳೂರು: ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿರುವ ರೌಡಿ ಶೀಟರ್ ಗೆ' (ಪೊಲೀಸ್ ದಾಖಲೆಗಳಲ್ಲಿ ಹೆಸರಿರುವ ಅಪರಾಧಿ) ಒಬ್ಬರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಹೊರಗಿರುವಂತೆ (ಜಿಲ್ಲಾ ಬಹಿಷ್ಕಾರ) ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

30 ವರ್ಷದ ಚಂದ್ರಶೇಖರ್ ಅಲಿಯಾಸ್ ಚಂದ್ರ, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾರೆ. ಇವರು ಕಗ್ಗಲಿಪುರದಲ್ಲಿ ನಾಲ್ಕು ಮತ್ತು ತಲಘಟ್ಟಪುರದಲ್ಲಿ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿದ್ದರು.

ಆದರೆ, ಜಾಮೀನಿನ ಮೇಲಿದ್ದಾಗಲೂ ಅವರು ತಮ್ಮ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಗ್ಗಲಿಪುರ ಪೊಲೀಸರು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರೋಹನ್ ಜಗದೀಶ್ ಅವರಿಗೆ ಇವರನ್ನು ಜಿಲ್ಲೆಯಿಂದ ಹೊರಗಿಡುವಂತೆ (ಎಕ್ಸ್‌ಟರ್ನ್‌ಮೆಂಟ್) ಪ್ರಸ್ತಾವನೆ ಸಲ್ಲಿಸಿದ್ದರು. ಅದರಂತೆ, ಎಸ್ಪಿ ಅವರು ಸೆಪ್ಟೆಂಬರ್ 3 ರಂದು ಈ ಆದೇಶವನ್ನು ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಶಾಂತಿಭಂಗ ಉಂಟುಮಾಡುವ ಹಾಗೂ ಕಾನೂನು-ಸುವ್ಯವಸ್ಥೆಗೆ ಅಡ್ಡಿಪಡಿಸುವವರ ವಿರುದ್ಧದ ಕ್ರಮಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ: ಅಮೆರಿಕಾಕ್ಕೆ Iran ಖಡಕ್ ಸಂದೇಶ..!

ದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ರಸ್ತೆ ಸಾರ್ವಜನಿಕ ಆಸ್ತಿ, ಕಾರು ಮಾಲೀಕರ ಸ್ವತ್ತಲ್ಲ: ಸಂಚಾರ ದಟ್ಟಣೆ ಕಡಿಮೆಯಾಗಬೇಕಾದರೆ ಪಾರ್ಕಿಂಗ್ ನಿಯಂತ್ರಣ ಅಗತ್ಯ; ಸಚಿವ ಕೃಷ್ಣ ಬೈರೇಗೌಡ (INTERVIEW)

Bigg Boss Kannada 13 ಆರಂಭ; ಎಲ್ಲಾ 16 ಸ್ಪರ್ಧಿಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ!

KPSC ಹಗರಣ: ಶಾಂತಾ ಹೊಸಮನಿಗಾಗಿ ಸಿಐಡಿ ಶೋಧ; ಬಂಧನ ವಾರಂಟ್‌ಗೆ ಕೋರ್ಟ್ ಗೆ ಮನವಿ ಸಾಧ್ಯತೆ!