ನಟ ದರ್ಶನ್ 
ರಾಜ್ಯ

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿ ರಿಲೀಫ್ ಸಿಕ್ಕಿದೆ. ಎ14 ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ಆದೇಶ ಪ್ರಕಟಿಸಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿ ರಿಲೀಫ್ ಸಿಕ್ಕಿದೆ. ಎ14 ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ಆದೇಶ ಪ್ರಕಟಿಸಿದೆ. ಪ್ರದೋಷ್ ಮಾಫಿ ಸಾಕ್ಷಿಯನ್ನಾಗಿಸಿದ್ದ 59ನೇ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಪ್ರಸನ್ನ ಅವರ ಪೀಠ ರದ್ದುಪಡಿಸಿದೆ.

59ನೇ ಸೆಷನ್ಸ್ ಕೋರ್ಟ್ ಪ್ರದೋಷ್​​ಗೆ ಮಾಫಿ ಸಾಕ್ಷಿ ಆಗಲು ಅನುಮತಿ ನೀಡಿತ್ತು. ಆದರೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಇದಕ್ಕೆ ವಿರೋಧ ವ್ಯಕ್ತಪಡಿಸಿ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಕುರಿತು ವಿಚಾರಣೆ ನಡೆದು, ಆದೇಶವನ್ನು ಕಾಯ್ದಿಸಿದ್ದ ಹೈಕೋರ್ಟ್ ಇಂದು ಆದೇಶ ಹೊರಡಿಸಿದ್ದು ದರ್ಶನ್​​ ಅರ್ಜಿಯನ್ನು ಭಾಗಷಃ ಪುರಸ್ಕರಿಸಿದೆ. ಆದರೆ ಪ್ರದೋಶ್ ಮಾಫಿ ಸಾಕ್ಷಿ ಹೇಳಿಕೆಗೆ ತಡೆ ನೀಡಿಲ್ಲ. ಬದಲಿಗೆ ಮತ್ತೊಮ್ಮೆ ಆದೇಶ ಹೊರಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಇನ್ನು ಹೊಸದಾಗಿ ವಿಚಾರಣೆ ನಡೆಸುವ ಯಾವುದೇ ಅಗ್ಯವಿಲ್ಲ. ಒಂದು ವಾರದಲ್ಲಿ ಮರು ಆದೇಶ ಹೊರಡಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇದೀಗ ವಿಚಾರಣಾ ನ್ಯಾಯಾಲಯವು ಮರು ಆದೇಶವನ್ನಷ್ಟೆ ಮಾಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್!

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!

ಗಂಡ Video Call ರಿಸೀವ್ ಮಾಡ್ಲಿಲ್ಲಾ ಅಂತಾ ಬೇಸರಗೊಂಡ ಪತ್ನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ!