ವ್ಯಕ್ತಿ ಬರ್ಬರ ಕೊಲೆ 
ರಾಜ್ಯ

ಹಾಸನ: ಗೃಹಪ್ರವೇಶಕ್ಕೆ ಹೋಗುತ್ತಿದ ಯುವಕನ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ!

ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಹಾಸನ: ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಹರಳಹಳ್ಳಿ ಗ್ರಾಮದ ಮಣಿ ಅಲಿಯಾಸ್ ಮಣಿಕಂಠ ಎಂದು ಗುರುತಿಸಲಾಗಿದೆ.

ಮಣಿಕಂಠ ನಗರದ 80 ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದನು. ತಮ್ಮದೇ ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಚನ್ನಪಟ್ಟಣ ವೃತ್ತದ ಸಮೀಪ ದುಷರ್ಮಿಯೊಬ್ಬ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾನೆ. ಹಲ್ಲೆ ವೇಳೆ ತಲೆಯ ಮೇಲೆ ದೊಡ್ಡ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದು ಈ ದೃಶ್ಯ ಭೀಕರವಾಗಿದೆ.

ಹಾಡಹಗಲೇ ರಾಷ್ಟ್ರೀಯ ಹೆದ್ದಾರಿಯಲ್ಲೇ ನಡೆದ ಕೊಲೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖರ್ಗೆ ಕಾರ್ಯಕ್ರಮ ಜಾಗದಲ್ಲಿ 'ಶುದ್ಧೀಕರಣ' ಪ್ರಕರಣ: ಒಂದು ತಿಂಗಳ ನಂತರ SC/ST ಕಾಯ್ದೆಯಡಿ FIR ದಾಖಲು!

ಶುರುವಾಗಿ 2 ದಿನಕ್ಕೆ Biggboss ಮನೆಯ ಗೋಡೆ ಹಾರಿ ಓಡಿಹೋದ ಸ್ಪರ್ಧಿ.. ಏನಾಯಿತು?

APMCಗೆ CM ಡಿಕೆಶಿ ದಿಢೀರ್ ಭೇಟಿ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು; 19 ಬಾಲ ಕಾರ್ಮಿಕರ ರಕ್ಷಣೆ; ನಾಲ್ಕು ಅಂಗಡಿ ಮಾಲೀಕರ ಬಂಧನ!

ವಿಧಾನಸಭೆಯಲ್ಲಿ ವಿಜಯ್ ಸನ್ನೆಗೆ ಕೆರಳಿದ DMK; ಬಾಡಿ ಶೇಮಿಂಗ್ ಆರೋಪಕ್ಕೆ ಸಿಎಂ ಜೋಸೆಫ್ ವಿಜಯ್ ಸ್ಪಷ್ಟನೆ!

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!