ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ 
ರಾಜ್ಯ

ಮಂಡ್ಯ: ಕಬ್ಬಿಣದ ಆಂಗಲ್ ತುಂಬಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ ಸಾವು!

ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಆಂಗಲ್ ಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬುಧವಾರ ಕಬ್ಬಿಣದ ಆಂಗಲ್ ಗಳು ತುಂಬಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಕಬ್ಬಿಣದ ಆಂಗಲ್ ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಕೆಎಸ್ಆರ್ ಟಿಸಿ ಬಸ್ ಓವರ್ ಟೆಕ್ ಮಾಡಲು ಯತ್ನಿಸಿದಾಗ ಈ ದುರಂತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಆಂಗಲ್ ಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

CJPಗೆ ಬಿಗ್ ಶಾಕ್; 2 ಕೋಟಿ ಮಾನನಷ್ಟ ಮೊಕದ್ದಮೆ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video

Kanpur: ಮನೆ ಮುಂದೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ಅಂಗಡಿ ಮಾಲೀಕನನ್ನೇ ಹೊಡೆದು ಕೊಂದ ಯುವಕರು! Video

ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಕ್ಕೆ ಸಿಎನ್‌ಆರ್ ರಾವ್‌ಗೆ ಯಾವುದೇ ನೋಟಿಸ್ ನೀಡಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ; Video