ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಲ್ಲಿ POP ಗಣೇಶ ಮೂರ್ತಿ ಮಾರಾಟಕ್ಕೆ GBA ಬ್ರೇಕ್; ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್!

ಗಣೇಶ ಮೂರ್ತಿಗಳನ್ನು ಮನೆಯಲ್ಲೇ ಬಕೆಟ್‌ಗಳಲ್ಲಿ ವಿಸರ್ಜಿಸಿ, ವಿಸರ್ಜನೆಯ ಬಳಿಕ ಉಳಿಯುವ ಮಣ್ಣನ್ನು ತೋಟಗಾರಿಕೆ ಹಾಗೂ ಹೂವಿನ ಕುಂಡಗಳಿಗೆ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು.

ಬೆಂಗಳೂರು: ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ಪರಿಸರಕ್ಕೆ ಹಾನಿಕಾರಕ ವಸ್ತುಗಳ ಬಳಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಮಂಗಳವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಬಳಸಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಹಾಗೂ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಗಣೇಶ ಮೂರ್ತಿಗಳನ್ನು ಮನೆಯಲ್ಲೇ ಬಕೆಟ್‌ಗಳಲ್ಲಿ ವಿಸರ್ಜಿಸಿ, ವಿಸರ್ಜನೆಯ ಬಳಿಕ ಉಳಿಯುವ ಮಣ್ಣನ್ನು ತೋಟಗಾರಿಕೆ ಹಾಗೂ ಹೂವಿನ ಕುಂಡಗಳಿಗೆ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ದೊಡ್ಡ ಗಾತ್ರದ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಸೂಕ್ತ ಸ್ಥಳಗಳನ್ನು ಗುರುತಿಸಲಾಗುವುದು.

ಅಗತ್ಯವಿರುವ ಕಡೆ ಸಂಚಾರಿ ವಾಹನಗಳು, ತಾತ್ಕಾಲಿಕ ಟ್ಯಾಂಕರ್‌ಗಳು, ಡ್ರಮ್‌ಗಳು ಹಾಗೂ ಬ್ಯಾರಿಕೇಡ್‌ಗಳ ವ್ಯವಸ್ಥೆ ಮಾಡಲಾಗುವುದು. ಕೆರೆಗಳಲ್ಲಿ ಮಾಲಿನ್ಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಪ್ರತಿ ವಾರ್ಡ್‌ಗೆ ಒಬ್ಬ ನೋಡಲ್ ಅಧಿಕಾರಿಯನ್ನು ಪಾಲಿಕೆಗಳಲ್ಲಿ ನೇಮಿಸಲಾಗುವುದು. “ಪಾಲಿಕೆ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಪರಿಸರ ಇಲಾಖೆಗಳ ಸಮನ್ವಯದೊಂದಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ಸರ್ಕಾರದ ನಿಯಮಗಳು ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನ ಮೇರೆಗೆ ಅನುಮತಿ ನೀಡಲಾಗುತ್ತದೆ ಎಂದು ಹೇಳಿದರು.

ಧ್ವನಿವರ್ಧಕಗಳ ಬಳಕೆಗೆ ಅನುಮತಿ ಪಡೆಯುವುದು ಹಾಗೂ ನಿಗದಿತ ಶುಲ್ಕ ಪಾವತಿಸುವುದು ಕಡ್ಡಾಯವಾಗಿರಲಿದೆ. ಈ ಎಲ್ಲ ಕ್ರಮಗಳ ಅನುಷ್ಠಾನವನ್ನು ಪಾಲಿಕೆಗಳ ಆಯುಕ್ತರು ಹಾಗೂ ಸಂಬಂಧಿಸಿದ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವರಿಗೆ ED ಶಾಕ್‌; ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ !

US-Iran ಸಂಘರ್ಷ ತಾರಕಕ್ಕೆ: ತೈಲ ಟ್ಯಾಂಕರ್ ದಾಳಿಗೆ Tehran ಪ್ರತಿಕಾರ; ಜೋರ್ಡಾನ್‌ ಅಮೆರಿಕ ಸೇನಾ ನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ, Hormuz ಬಿಕ್ಕಟ್ಟು ಮತ್ತಷ್ಟು ಉಲ್ಬಣ..!

West Asia Conflict: ಇರಾನ್ ಆರ್ಥಿಕ ಬೆನ್ನೆಲುಬಿಗೆ ಅಮೆರಿಕ ಪೆಟ್ಟು: ಸಮುದ್ರದ ಮಧ್ಯದಲ್ಲೇ 5 ಬೃಹತ್ ತೈಲ ಹಡಗುಗಳು ಗುರಿಯಾಗಿಸಿ ದಾಳಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ..!

West Asia Conflict ಎಫೆಕ್ಟ್: ಗಗನಕ್ಕೇರುತ್ತಿದೆ ಜಾಗತಿಕ ತೈಲ ದರ, $100 ತಲುಪಿದ ಕಚ್ಚಾ ತೈಲ ಬೆಲೆ..!

'ಬ್ರಿಟನ್ ತೊರೆಯದಂತೆ ಕಾನೂನುಬದ್ಧ ನಿರ್ಬಂಧ, ಭಾರತ ಸರ್ಕಾರದಿಂದ ನನಗೆ ಅನ್ಯಾಯವಾಗಿದೆ': ವಿಜಯ್ ಮಲ್ಯ