ಗ್ಯಾನೇಂದ್ರ ಕುಮಾರ್ - ಬಸವರಾಜ್ ಕನ್ನಾಳೆ 
ರಾಜ್ಯ

KPSC ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್, ಕನ್ನಾಳೆ ಜೈಲು ಪಾಲು; 14 ದಿನ ನ್ಯಾಯಾಂಗ ಬಂಧನ

ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ ಸಿಐಡಿ ಅಧಿಕಾರಿಗಳು ಬಂಧಿತ ಇಬ್ಬರು ಆರೋಪಿಗಳನ್ನು ಬುಧವಾರ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಿಜೆಪಿ ಮುಖಂಡ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಇಬ್ಬರೂ ಜೈಲು ಪಾಲಾಗಿದ್ದಾರೆ.

ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ ಸಿಐಡಿ ಅಧಿಕಾರಿಗಳು ಬಂಧಿತ ಇಬ್ಬರು ಆರೋಪಿಗಳನ್ನು ಬುಧವಾರ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಗಳನ್ನು ಒಂದನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದ ಸಿಐಡಿ ಅಧಿಕಾರಿಗಳು, ಸದ್ಯ ನಮ್ಮ ಕಸ್ಟಡಿಗೆ ಬೇಡ, ಬೇಕಾದ್ರೆ ಮುಂದೆ ಮತ್ತೆ ಕಸ್ಟಡಿಗೆ ಪಡೆಯುವುದಾಗಿ ಹೇಳಿದೆ. ಹೀಗಾಗಿ ಇಬ್ಬರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇನ್ನು, ನಾಪತ್ತೆಯಾಗಿರುವ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಮನೆ ಮೇಲೆ ಸಿಐಡಿ ದಾಳಿ ನಡೆಸಿದೆ. ಬೆಂಗಳೂರಿನ ಮತ್ತಿಕೆರೆ, ನಾಗರಬಾವಿ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಈ ಮಧ್ಯೆ ನಾಪತ್ತೆಯಾಗಿರೋ ಶಾಂತ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಿಕೆಶಿ ಸರ್ಕಾರಕ್ಕೆ ನಾಳೆ 100 ದಿನದ ಸಂಭ್ರಮ: ಬಡವರಿಗೆ ಬಂಪರ್ ಗಿಫ್ಟ್! 15 ಲಕ್ಷ ಉಚಿತ ಸೈಟ್ ಹಂಚಿಕೆಗೆ ಸಂಪುಟ ಅಸ್ತು!

3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್: ಕಾಂಗ್ರೆಸ್ ಆರೋಪ!

ಚೀನಾ ನಿರ್ಮಿಸಿದ್ದ ಟ್ಯಾಂಕರ್ ಬಾಂಗ್ಲಾದಲ್ಲಿ ಪರೀಕ್ಷೆ: ಸೇನಾ ವ್ಯಾಯಾಮದ ವೇಳೆ ಸ್ಫೋಟಗೊಂಡು ಇಬ್ಬರು ಸೈನಿಕರು ಸಾವು, Video

ವೇದಿಕೆ ಮೇಲೆ ಫಿಲಿಪೈನ್ಸ್ ನಾಯಕನಿಗೆ ಚೀನಾದ ಬೆದರಿಕೆ; ಸಭ್ಯತೆ, ಸರಿಯಾದ ನಡವಳಿಕೆ ಕಲಿಯಿರಿ- ಬೀಜಿಂಗ್ ಗೆ ದ್ವೀಪರಾಷ್ಟ್ರದ ತಪರಾಕಿ!