ಆರ್.ಅಶೋಕ್ ಸಾಂದರ್ಭಿಕ ಚಿತ್ರ 
ರಾಜ್ಯ

ಕಾವೇರಿ ನೀರು ಹಂಚಿಕೆ ಆದೇಶ: ರಾಜ್ಯದ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ; ಕಾಂಗ್ರೆಸ್ ವಿರುದ್ಧ BJP ಕಿಡಿ

ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ವಾಸ್ತವ ಸ್ಥಿತಿ, ಕುಡಿಯುವ ನೀರಿನ ಅಗತ್ಯತೆ, ರೈತರ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಲಿರುವ ನೀರಿನ ಪ್ರಮಾಣದ ಕುರಿತು ವೈಜ್ಞಾನಿಕ ದತ್ತಾಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ಸರ್ಕಾರ ವಿಫಲವಾಗಿದೆ.

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಅವರು ಆರೋಪಿಸಿದ್ದಾರೆ.

ರಾಜ್ಯ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಅಸಾಧ್ಯ. ಹೀಗಾಗಿ ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್‌ ಕಾವೇರಿ ನೀರನ್ನು 15 ದಿನಗಳ ಕಾಲ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಬೇಕು ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ವಾಸ್ತವ ಸ್ಥಿತಿ, ಕುಡಿಯುವ ನೀರಿನ ಅಗತ್ಯತೆ, ರೈತರ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಲಿರುವ ನೀರಿನ ಪ್ರಮಾಣದ ಕುರಿತು ವೈಜ್ಞಾನಿಕ ದತ್ತಾಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅಶೋಕ್‌ ಹೇಳಿದರು. ಇದು ಕೇವಲ ಆಡಳಿತಾತ್ಮಕ ಲೋಪವಲ್ಲ, ಕರ್ನಾಟಕದ ಜಲ ಹಕ್ಕುಗಳನ್ನು ರಕ್ಷಿಸುವಲ್ಲಿ ಸರ್ಕಾರ ತೋರಿದ ಗಂಭೀರ ನಿರ್ಲಕ್ಷ್ಯ ಎಂದು ಅವರು ಆರೋಪಿಸಿದರು.

ಈ ವೈಫಲ್ಯಕ್ಕೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಹೊಣೆ ಹೊತ್ತು ರಾಜ್ಯದ ಜನರಿಗೆ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದರು.

ಕರ್ನಾಟಕದ ಪರವಾಗಿ ಪ್ರಾಧಿಕಾರದ ಮುಂದೆ ಯಾವ ಅಂಶಗಳನ್ನು ಮಂಡಿಸಲಾಗಿದೆ? ರಾಜ್ಯದ ಜಲಾಶಯಗಳ ವಾಸ್ತವ ಸ್ಥಿತಿಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಲಾಗಿದೆಯೇ? ತಮಿಳುನಾಡಿಗೆ ನೀರು ಹರಿಸಿದರೆ ಬೆಂಗಳೂರಿನ ಕುಡಿಯುವ ನೀರು ಹಾಗೂ ಕರ್ನಾಟಕದ ರೈತರ ಮೇಲೆ ಉಂಟಾಗುವ ಪರಿಣಾಮವನ್ನು ಸಮರ್ಪಕವಾಗಿ ವಿವರಿಸಲಾಗಿದೆಯೇ? ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಯಾವ ದಾಖಲೆಗಳನ್ನು ಪ್ರಾಧಿಕಾರದ ಮುಂದೆ ಸಲ್ಲಿಸಿದೆ? ಈ ಎಲ್ಲ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕು” ಎಂದು ಅಶೋಕ್‌ ಆಗ್ರಹಿಸಿದರು.

ರಾಜ್ಯದ ಪರವಾಗಿ ವಾದ ಮಂಡಿಸಿದ ತಾಂತ್ರಿಕ ಹಾಗೂ ಕಾನೂನು ತಂಡದ ಕಾರ್ಯನಿರ್ವಹಣೆ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ನಾಯಕ ಒತ್ತಾಯಿಸಿದರು.

ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ನಿರಂತರವಾಗಿ ಸಂಕಷ್ಟ ಎದುರಿಸುತ್ತಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಜ್ಯದಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಕೊರತೆ, ರೈತರಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ, ಇದರಿಂದ ರೈತರಿಗೆ ಉಂಟಾಗುವ ನಷ್ಟ ಹಾಗೂ ಮುಂಬರುವ ಕುಡಿಯುವ ನೀರಿನ ಬಿಕ್ಕಟ್ಟಿನಂತಹ ನೆಲದ ವಾಸ್ತವಾಂಶಗಳನ್ನು ಅಧಿಕಾರಿಗಳು ಪ್ರಾಧಿಕಾರದ ಗಮನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಬೆಂಗಳೂರಿಗರಿಗೆ Good News: ಸಿದ್ಧವಾಯ್ತು ಸಹಾಯ 3.0 ಪೋರ್ಟಲ್‌: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ದೂರು ಸಲ್ಲಿಸಲು ಅವಕಾಶ..!

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ