ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಪ್ರಜ್ವಲ್ ರೇವಣ್ಣ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.
ನಾನ್ ಯಾರು ಗೊತ್ತ? ನೀವು ಯಾರ ಜೊತೆಗೆ ಮಾತನಾಡ್ತಿದ್ದೀರಾ ಗೊತ್ತ? ನಾನು ಮಾಜಿ ಸಂಸದ, ಮಾಜಿ ಪ್ರಧಾನಿ ಮೊಮ್ಮಗ. ಬೇಕಂತಲೆ ನನ್ನನ್ನು ಸಿಕ್ಕಿಸಲು ಯತ್ನಿಸುತ್ತಿದ್ದೀರ, ಬೇಲ್ ಕ್ಯಾನ್ಸಲ್ ಮಾಡಲು ಸಾಕಷ್ಟು ಪ್ರಯತ್ನ ಪಡುತ್ತಿದ್ದೀರ. ನಾನು ಏನೂ ಹೇಳಲ್ಲ, ಏನೂ ಮಾತಾಡಲ್ಲ. ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ಪೊಲೀಸರಿಗೇ ಪ್ರಜ್ವಲ್ ಹೇಳಿದ್ದಲ್ಲದೆ ನಾನು ಕೋರ್ಟ್ಗೆ ಅಪೀಲ್ ಹೋಗ್ತೀನಿ ಅಂತ ಪ್ರಜ್ವಲ್ ಹೇಳಿದ್ದಾರೆ ಎನ್ನಲಾಗಿದೆ.