ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಜಾರಕಿಹೊಳಿ ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ- ಸಿಎಂ ಡಿಕೆ ಶಿವಕುಮಾರ್

ಇಡೀ ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್‌ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ. ಬಿಜೆಪಿಯವರ ಮೇಲೆಲ್ಲೂ ಕೂಡ ದಾಳಿ ಮಾಡುತ್ತಿಲ್ಲ. ಸಮುದಾಯ ಮಾತ್ರ ಅಲ್ಲ. ಇಡೀ ಪಕ್ಷವನ್ನೇ ಟಾರ್ಗೆಟ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತನ್ನ ಸಹೋದ್ಯೋಗಿ ಆಗಿದ್ದು, ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಅವರು ನನ್ನ ಸಹೋದ್ಯೋಗಿ. ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ. ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಅಂತ ಎಲ್ಲಿದೆ? ಇದೆಲ್ಲ ರಾಜಕಾರಣ ಎಂದರು.

ಇನ್ನೂ ಮೂರ್ನಾಲ್ಕು ಜನರ ಮೇಲೆ ದಾಳಿ ಮಾಡಬಹುದು. ಇಡೀ ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್‌ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ. ಬಿಜೆಪಿಯವರ ಮೇಲೆಲ್ಲೂ ಕೂಡ ದಾಳಿ ಮಾಡುತ್ತಿಲ್ಲ. ಸಮುದಾಯ ಮಾತ್ರ ಅಲ್ಲ. ಇಡೀ ಪಕ್ಷವನ್ನೇ ಟಾರ್ಗೆಟ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದೇ ವೇಳೆ ವಂದೇ ಮಾತರಂ ಗೀತೆ ಮೊಟಕು ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ, ವಂದೇ ಮಾತರಂ ಬಗ್ಗೆ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಅವರು ರಾಜಕೀಯ ಮಾಡ್ತಿದ್ದಾರೆ ಅಷ್ಟೇ ಎಂದರು.

ಇನ್ನೂ ಕಾನೂನು ಬಾಹಿರ ಬಂದೂಕು ಶರಣಾಗತಿಗೆ ಸೂಚನೆ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, ಕಾನೂನು ಬಾಹಿರವಾಗಿ ಯಾರಾದರೂ ಬಂದೂಕನ್ನು ಇಟ್ಟುಕೊಂಡಿದ್ದರೆ ಕೂಡಲೇ ಅದನ್ನ ಸರ್ಕಾರ ಒಪ್ಪಿಸಬೇಕು. ಸರೆಂಡರ್ ಮಾಡಲು ನವೆಂಬರ್ 1ನೇ ತಾರೀಖಿನವರೆಗೂ ಅವಕಾಶ ಕೊಡ್ತೀವಿ. ಪೊಲೀಸರು, ಅಧಿಕಾರಿಗಳು ಜನರ ಮನವೊಲಿಸಬೇಕು. ಅದರ ಜೊತೆ ಒಂದು ಕ್ಷಮೆಯಾಚನೆ ಬರೆದು ಕೊಟ್ರೆ ಸಾಕು ಎಂದು ತಿಳಿಸಿದ್ದಾರೆ. ಒಂದರ ನಂತರ ಸರೆಂಡರ್ ಮಾಡದಿದ್ದರೆ ಕ್ರಮ ಆಗುತ್ತದೆ. ರಕ್ಷಣೆಗಾಗಿ ಬಂದೂಕು ಬೇಕಿದ್ದರೆ ಅರ್ಜಿ ಹಾಕಲಿ ಎಂದರು.

ಕಸ್ತೂರಿರಂಗನ್ ವರದಿ ವಿಚಾರವಾಗಿ, ಮಂಗಳೂರು ಜಿಲ್ಲೆಗೆ ಭೇಟಿ ಕೊಟ್ಟ ಬಳಿಕ 3-4 ಜಿಲ್ಲೆಗಳಿಗೆ ಭೇಟಿಯನ್ನು ಕೊಡುತ್ತೇನೆ. ಅಲ್ಲಿ ಕಸ್ತೂರಿರಂಗನ್ ಸಂಬಂಧಪಟ್ಟ ಹಾಗೇ ರೈತರನ್ನು ಭೇಟಿ ಮಾಡುತ್ತೇನೆ. ನಾವು ರೈತರ ಸಮಸ್ಯೆ, ಬರದ ಸಮಸ್ಯೆ ಹಾಗೂ ಕಸ್ತೂರಿ ರಂಗನ್ ಸಮಸ್ಯೆ ಕುರಿತು ವಿಶೇಷ ಅಧಿವೇಶನ ಕರೆದಿದ್ದೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ

ತಾಯಿಯ ಅಂತ್ಯಕ್ರಿಯೆಗೆ ಚಿನ್ಮಯ್ ಕೃಷ್ಣ ದಾಸ್‌ಗೆ 5 ಗಂಟೆಗಳ ಪೆರೋಲ್‌: ರಾಧಾ-ಕೃಷ್ಣ ಮೂರ್ತಿಯ ಪಾದ ಸ್ಪರ್ಶಿಸಿ ಕಣ್ಣೀರಿಡುತ್ತಿರುವ ವಿಡಿಯೋ ವೈರಲ್!

ಪಾಕಿಸ್ತಾನವನ್ನು ಹಿಂದಿಕ್ಕಿದ ಭಾರತದ ನ್ಯೂಕ್ಲಿಯರ್ ಬಲ: ಇಂಡಿಯಾದ ಬತ್ತಳಿಕೆಯಲ್ಲಿ 190 ಅಣ್ವಸ್ತ್ರಗಳು; ಯಾವ ದೇಶದಲ್ಲಿ ಎಷ್ಟು ಅಣ್ವಸ್ತ್ರ?