ಮೈಸೂರು ದಸರಾ ಚಲನಚಿತ್ರೋತ್ಸವ ರದ್ದು Online Desk
ರಾಜ್ಯ

ಮೈಸೂರು ದಸರಾ ಚಲನಚಿತ್ರೋತ್ಸವ ರದ್ದು: ಕಂಬಳಕ್ಕೆ ಕೋಟಿ ಅನುದಾನ ಕೊಟ್ಟಿದ್ದೇ ಕಾರಣವಾ? ಸಂಸದ ಯದುವೀರ್ ಒಡೆಯರ್ ಆಕ್ರೋಶ

ಈ ಬಾರಿಯ ಮೈಸೂರು ದಸರಾ 2026ರ ಮಹೋತ್ಸವದಲ್ಲಿ ದಸರಾ ಚಲನಚಿತ್ರೋತ್ಸವವನ್ನ ರಾಜ್ಯ ಸರ್ಕಾರ ರದ್ದುಗೊಳಿಸಿದ್ದು, ಸಿನಿಪ್ರೇಮಿಗಳು ಮತ್ತು ಸ್ಯಾಂಡಲ್‌ವುಡ್ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಮೈಸೂರು: ಯುವ ದಸರಾ, ರೈತ ದಸರಾ, ಮಕ್ಕಳ ದಸರಾ, ಕ್ರೀಡಾ ದಸರಾ ಹೀಗೆ ಮೈಸೂರು ದಸರಾವನ್ನ ಹತ್ತು ಹಲವು ರೀತಿಯಲ್ಲಿ ಆಚರಿಸಲಾಗುತ್ತದೆ. ಈ ಪೈಕಿ ದಸರಾ ಚಲನಚಿತ್ರೋತ್ಸವ ಕೂಡ ಪ್ರಮುಖವಾದ್ದು. ಆದರೆ, ಈ ಬಾರಿಯ ಮೈಸೂರು ದಸರಾ 2026ರ ಮಹೋತ್ಸವದಲ್ಲಿ ದಸರಾ ಚಲನಚಿತ್ರೋತ್ಸವವನ್ನ ರಾಜ್ಯ ಸರ್ಕಾರ ರದ್ದುಗೊಳಿಸಿದ್ದು, ಸಿನಿಪ್ರೇಮಿಗಳು ಮತ್ತು ಸ್ಯಾಂಡಲ್‌ವುಡ್ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ದಸರಾ ಚಲನಚಿತ್ರೋತ್ಸವ ರದ್ದಾಗಲು ಕಾರಣವೇನು?

ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಪ್ರಕಾರ, ಕಳೆದ ಐದು ವರ್ಷಗಳ ದತ್ತಾಂಶವನ್ನು ಪರಿಶೀಲಿಸಿದಾಗ ಚಿತ್ರೋತ್ಸವಕ್ಕೆ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೊತೆಗೆ, ಪ್ರತಿ ವರ್ಷ ಚಲನಚಿತ್ರೋತ್ಸವ ಆಯೋಜಿಸಲು ಸುಮಾರು ₹40 ರಿಂದ ₹45 ಲಕ್ಷದವರೆಗೆ ಖರ್ಚು ಮಾಡಲಾಗುತ್ತಿತ್ತು. ಆದರೆ, ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದ್ದ ಕೆಲವು ಸಿನಿಮಾಗಳನ್ನು ವೀಕ್ಷಿಸಲು ಕೇವಲ 3 ರಿಂದ 5 ಜನ ಮಾತ್ರ ಬರುತ್ತಿದ್ದರು ಎನ್ನಲಾಗಿದೆ.

ಮುಂದುವರೆದು, ಸರ್ಕಾರದ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ರಿಯ ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಮತ್ತು ನಿರ್ದೇಶಕ ಮಂಸೋರೆ, ಮೈಸೂರು ಕನ್ನಡ ಚಿತ್ರೋದ್ಯಮದ ತವರು ಮನೆ. ಇಂತಹ ಐತಿಹಾಸಿಕ ಹಿನ್ನೆಲೆಯುಳ್ಳ ನಗರದಲ್ಲಿ ಚಿತ್ರೋತ್ಸವ ರದ್ದು ಮಾಡಿರುವುದು ಸ್ಯಾಂಡಲ್‌ವುಡ್‌ಗೆ ಮಾಡಿದ ಅಪಮಾನ ಎಂದು ಬೇಸರ ಹೊರಹಾಕಿದ್ದಾರೆ. ಜೊತೆಗೆ, ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸರ್ಕಾರದ ಈ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ, ಚಲನಚಿತ್ರ ರಂಗದ ಹಿರಿಯರೊಂದಿಗೆ ಸಮಾಲೋಚನೆ ನಡೆಸದೇ ಈ ಪ್ರತಿಷ್ಠಿತ ಕಾರ್ಯಕ್ರಮ ರದ್ದುಗೊಳಿಸಿರುವುದು ಕರ್ನಾಟಕದ ಚಲನಚಿತ್ರ ಪರಂಪರೆಯ ಬಗ್ಗೆ ಸರ್ಕಾರಕ್ಕಿರುವ ಉದಾಸೀನತೆಯನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ಏತನ್ಮಧ್ಯೆ, ಈ ಬಾರಿ ದಸರಾದಲ್ಲಿ ಹೊಸದಾಗಿ ಸೇರಿಸಲಾಗಿರುವ 'ಕಂಬಳ' ಉತ್ಸವಕ್ಕೆ ಸುಮಾರು 7 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ಸರ್ಕಾರ, ಚಿತ್ರೋತ್ಸವದ ಬಜೆಟ್ ಅನ್ನು ಅದಕ್ಕೆ ಸರಿದೂಗಿಸಲು ಕಡಿತಗೊಳಿಸಲಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ.

ಮತ್ತೊಂದೆಡೆ, ದಸರಾ ಸಂಭ್ರಮದ ಜಂಬೂ ಸವಾರಿ ವೇಳೆಯಲ್ಲಿ, ಚಂದನವನದ ರಾಕಿಂಗ್ ಸ್ಟಾರ್ ಯಶ್, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ನಟ ಕಿಚ್ಚ ಸುದೀಪ್, ಕ್ರೇಜಿ ಸ್ಟಾರ್ ರವಿಚಂದ್ರನ್, ಹಿರಿಯ ನಟಿ ಉಮಾಶ್ರೀ, ರಚಿತಾ ರಾಮ್, ರುಕ್ಕಿಣಿ ವಸಂತ್ ಮತ್ತು ಸಪ್ತಮಿ ಗೌಡ ಸೇರಿದಂತೆ ಹಲವು ಕನ್ನಡ ಜನಪ್ರಿಯ ನಟಿ-ನಟರನ್ನು ಅಂಬಾವಿಲಾಸ ಅರಮನೆಯಿಂದ ಕೆ.ಆರ್. ವೃತ್ತದವರೆಗೆ ತೆರೆದ ಅಂಬಾರಿ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಜಂಬೂ ಸವಾರಿಯ ಮೆರವಣಿಗೆಯ ವಿಶೇಷ ಮೆರುಗು ನೀಡಲು ದಸರಾ ಸಮಿತಿ ಮುಂದಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS Business Forum 2026: ಭಾರತದ ಮಾರುಕಟ್ಟೆ ಬೃಹತ್, ವೇಗವಾಗಿ ಬೆಳೆಯುತ್ತಿದೆ; ಬಲಿಷ್ಠ ಆರ್ಥಿಕ ಸಹಭಾಗಿತ್ವಕ್ಕೆ ಸೂಕ್ತ ರಾಷ್ಟ್ರ: ವಿದೇಶಾಂಗ ಸಚಿವ ಜೈಶಂಕರ್

ಭಾರತ–ಚೀನಾ ಸಂಬಂಧ; ಭೂಮಿಯ ಲೋಹಗಳು, ವೀಸಾ, ಹೂಡಿಕೆ; ಕ್ಸಿ-ಜಿನ್ ಪಿಂಗ್-ಪ್ರಧಾನಿ ಮೋದಿ ಮಾತುಕತೆ ಅಜೆಂಡಾ ಏನು?

BRICS ಶೃಂಗಸಭೆ: ದೆಹಲಿಗೆ ಆಗಮಿಸಿದ Vladimir Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ, ಭಾರತ-ರಷ್ಯಾ ಸ್ನೇಹಕ್ಕೆ ಮತ್ತಷ್ಟು ಬಲ..!

'Brand Bengaluru'ಯೋಜನೆಗೆ ಬಿಗ್ ಬೂಸ್ಟ್: ಸಿಲಿಕಾನ್ ಸಿಟಿ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡಲು GBA ಮಾಸ್ಟರ್ ಪ್ಲ್ಯಾನ್!

ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ; ಚಿಂದಿ ಆಯುವವರು ಕೂಡ ಅದನ್ನು ತಗೊಳ್ಳಲ್ಲ- ಶ್ರೀರಾಮುಲು