ಬೆಂಗಳೂರಿನಲ್ಲಿ ಧಾರಾಕಾರ ಮಳೆ 
ರಾಜ್ಯ

ಬೆಂಗಳೂರಿನಲ್ಲಿ ವರುಣಾರ್ಭಟ: 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ

ಇಂದು ಸಂಜೆ 6 ಗಂಟೆಯ ಸುಮಾರಿಗೆ ಆರಂಭವಾದ ಮಳೆ 7 ಗಂಟೆಯವರೆಗೂ ಸುರಿದಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರದಿದ್ದು, ಹಲವು ಕಡೆ ಮಂಗಳವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಇಂದು ಸಂಜೆ 6 ಗಂಟೆಯ ಸುಮಾರಿಗೆ ಆರಂಭವಾದ ಮಳೆ 7 ಗಂಟೆಯವರೆಗೂ ಸುರಿದಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಭಾರೀ ಮಳೆಯಿಂದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.

ಕೆಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ! ಅಕ್ಟೋಬರ್ 15 ರಿಂದ ಜಾರಿ

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...

BiggBoss Kannada: ಸ್ವಲ್ಪ ಹೆಚ್ಚುಕಮ್ಮಿ ಆಗಿದ್ರೂ ನನಗೆ ಸ್ಟ್ರೋಕ್‌ ಆಗ್ತಿತ್ತು; ಬಿಗ್‌ಬಾಸ್‌ ವಿರುದ್ಧ ಓಂ ಪ್ರಕಾಶ್‌ ರಾವ್‌ ಗರಂ

Sheikh Hasina: ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾರ 7 ಆಪ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌!

ಡ್ರಾಮಾ ಬಿಡಿ, ಎರಡು ವಾರದಲ್ಲಿ 2 ಕೋಟಿ ರೂ. ಠೇವಣಿ ಇಡಿ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ