ಸಾಂಕೇತಿಕ ಚಿತ್ರ online desk
ರಾಜ್ಯ

ಕಲಬುರಗಿ: ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ; ಪ್ರಕರಣ ದಾಖಲಿಸಿದ PSI ಕಾರಿಗೂ ಬೆಂಕಿ ಹಚ್ಚಿದ ಪೇದೆ!

ಭಾನುವಾರ ಸಂಜೆ ಮಹಿಳೆಯನ್ನು ಜೊತೆಗೆ ಕರೆದುಕೊಂಡು ಹೋಗಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾನೆ. ಬಂಡೆಗಲ್ಲು ಎತ್ತಿಹಾಕಿ ಬಾಗಿಲು ಮುರಿದು ಮನೆಗೆ ನುಗ್ಗಿ ಚಿಂದಿ ಬಟ್ಟೆ, ಪ್ಲಾಸ್ಟಿಕ್‌ ಕಾಗದಗಳಿಗೆ ಬೆಂಕಿ ಹಚ್ಚಿದ್ದಾನೆ.

ಕಮಲಾಪುರ: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್‌ನಲ್ಲಿ ಪೊಲೀಸ್‌ ಪೇದೆಯೊಬ್ಬ ನಡು ಬೀದಿಯಲ್ಲೇ ಮಹಿಳೆ ಮೇಲೆ ಹಲ್ಲೆ ಮಾಡಿ ಮನೆಯ ಬಾಗಿಲು ಮುರಿದು ಚಿಂದಿ ಬಟ್ಟೆಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಚಿಂಚೋಳಿ ಠಾಣೆಯ ಪೇದೆ ರಾಜಶೇಖರ ವರನಾಳ ಎಂಬಾತ ಈ ಕೃತ್ಯ ಎಸಗಿದ್ದಾರೆ. ಈ ಹಿಂದೆ ಈತ ಮಹಾಗಾಂವ ಪೊಲೀಸ್‌ ಠಾಣೆಯಲ್ಲಿ 3-4 ವರ್ಷ ಸೇವೆ ಸಲ್ಲಿಸಿದ್ದ. ಮಹಾಗಾಂವ ಕ್ರಾಸ್‌ನಲ್ಲಿ ಮಹಿಳೆಯ ಜತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಮಹಿಳೆಯ ಸಂಬಂಧಿಕರು ದೂರು ನೀಡಿದ್ದಕ್ಕೆ ಚಿಂಚೋಳಿ ಠಾಣೆಗೆ ಆತನನ್ನು ವರ್ಗಾವಣೆ ಮಾಡಲಾಗಿತ್ತು.

ಬಳಿಕ ರಾಜಶೇಖರ ಮಕ್ಕಳ ಶಾಲೆಯ ನೆಪದಲ್ಲಿ ಮಹಾಗಾಂವ ಕ್ರಾಸ್‌ನಲ್ಲಿ ವಾಸವಾಗಿದ್ದು, ಭಾನುವಾರ ಸಂಜೆ ಮಹಿಳೆಯನ್ನು ಜೊತೆಗೆ ಕರೆದುಕೊಂಡು ಹೋಗಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾನೆ. ಬಂಡೆಗಲ್ಲು ಎತ್ತಿಹಾಕಿ ಬಾಗಿಲು ಮುರಿದು ಮನೆಗೆ ನುಗ್ಗಿ ಚಿಂದಿ ಬಟ್ಟೆ, ಪ್ಲಾಸ್ಟಿಕ್‌ ಕಾಗದಗಳಿಗೆ ಬೆಂಕಿ ಹಚ್ಚಿದ್ದಾನೆ. ಇದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರಿಗೆ ಆಕೆ ನನಗೆ 10 ಲಕ್ಷ ರೂ. ಹಣ, ಬಂಗಾರ ಕೊಡಬೇಕು. ಕೇಳಿದರೆ ಏನು ಇಲ್ಲ ಎನ್ನುತ್ತಿದ್ದಾಳೆ, ಆದ್ದರಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾನೆ. ಮಹಿಳೆಯ ಪತಿ ಮಹಾಗಾಂವ ಠಾಣೆಗೆ ದೂರು ನೀಡಿದ್ದಾರೆ.

ಇನ್ನೂ ಪ್ರಕರಣದಲ್ಲಿ ಪೇದೆ ರಾಜಶೇಖರ ವಿರುದ್ಧ ಮಹಾಗಾಂವ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯಿತು. ಇದರಿಂದ ಕುಪಿತಗೊಂಡ ಆತ ನಾನು ಇಲ್ಲಿಯೇ ಕೆಲಸ ಮಾಡಿದ್ದೇನೆ.

ನನ್ನ ಮೇಲೆ ಕೇಸ್‌ ದಾಖಲಿಸಿಕೊಳ್ಳುವುದು ಸರಿಯಲ್ಲ ಎಂದು ಪಿಎಸ್‌ಐ ಬಸವರಾಜ ಚಿತ್ತಕೋಟಗೆ ಆರೋಪಿ ಆವಾಜ್‌ ಹಾಕಿದ್ದಾನೆ. ಮಾತಿನ ಚಕಮಕಿ ನಡೆದಿದ್ದು, ಇದನ್ನು ಸಹಿಸದ ರಾಜಶೇಖರ ಪಿಎಸ್‌ಐ ಕಾರಿಗೂ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ ಬರೋಬ್ಬರಿ 50 ಲಕ್ಷ ರೂ.ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!

ಬದಲಾಗುತ್ತಿರುವ ಜಗತ್ತಿನ ನಡುವೆ ನಡೆದ ಬ್ರಿಕ್ಸ್ ಸಭೆಯಲ್ಲಿನ ಕಥೆ! (ಹಣಕ್ಲಾಸು)

ಅಮೆರಿಕಾ ಸುಂಕದ ಬೆದರಿಕೆಗೆ ಜಗ್ಗದ ಭಾರತ: 140 ಕೋಟಿ ಜನರ ಹಿತಾಸಕ್ತಿ ಮುಖ್ಯ, ಇಂಧನ ಭದ್ರತೆ ಕಾಪಾಡಲು ಅಗತ್ಯ ಕ್ರಮ ಎಂದ MEA

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಜಕೀಯ ನಾಯಕರಿಂದ ಶುಭಾಶಯ, ‘ವಿಶ್ವದ ಅತ್ಯಂತ ಜನಪ್ರಿಯ ನಾಯಕ’ ಎಂದು ಬಣ್ಣನೆ..!

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ..!