ಬಿ ಕೆ ಹರಿಪ್ರಸಾದ್, ಉಮರ್ ಖಾಲಿದ್ (ಸಂಗ್ರಹ ಚಿತ್ರ) 
ರಾಜ್ಯ

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣ ಸಂಬಂಧ ಜೈಲು ಸೇರಿರುವ ಉಮರ್ ಖಾಲಿದ್ ಒಬ್ಬ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಎಬಿವಿಪಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ​ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: 2020ರ ದೆಹಲಿ ಗಲಭೆ ಪ್ರಕರಣ ಸಂಬಂಧ ಜೈಲು ಸೇರಿರುವ ಉಮರ್ ಖಾಲಿದ್ ಒಬ್ಬ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಎಬಿವಿಪಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ​ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ದೆಹಲಿಯಲ್ಲಿ ಗಲಭೆ ಎಬ್ಬಿಸಿದವನ ಪರ ಮಾತನಾಡುತ್ತಾರೆ. ಸಮಾಜದಲ್ಲಿ ದ್ವೇಷ ಮೂಡುವಂತ ಹೇಳಿಕೆ ನೀಡಿದ್ದಾರೆ. ಅಲ್ಲದೆ ಎಬಿವಿಪಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬಿಕೆ ಹರಿಪ್ರಸಾದ್ ವಿರುದ್ಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಒಬ್ಬ ಭಯೋತ್ಪಾದಕನ ಬಗ್ಗೆ ವಿಧಾನಸೌಧದಲ್ಲಿ ನಿಂತು ಬಿಕೆ ಹರಿಪ್ರಸಾದ್ ಹೇಳಿಕೆ ನೀಡುತ್ತಿದ್ದಾರೆ ಎಂದು ತೇಜಸ್ ಗೌಡ ಹೇಳಿದ್ದಾರೆ. ಭಯೋತ್ಪಾದಕರ ಬಗ್ಗೆ ಮಾತನಾಡುವವರು ಭಯೋತ್ಪಾದಕರಿಗೆ ಸಮ ಎಂದು ತೇಜಸ್ ಗೌಡ ಹೇಳಿದ್ದು ಪೊಲೀಸರು ಕಾನೂನು ತಜ್ಞರ ಸಲಹೆ ಪಡೆದು ಕ್ರಮಕೈಗೊಳ್ಳುತ್ತೇನೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತೆರಿಗೆ ನೀತಿ ಚರ್ಚೆಗಳು ವಲಯ ಹಿತಾಸಕ್ತಿ ಮೀರಬೇಕು: ಒಟ್ಟಾರೆ ಆರ್ಥಿಕತೆಯ ಅಗತ್ಯತೆಗಳ ಮೇಲೆ ಗಮನ ಹರಿಸಬೇಕು- ನಿರ್ಮಲಾ ಸೀತಾರಾಮನ್

ಇದೇ ಮೊದಲ ಬಾರಿಗೆ ಮೆಕ್ಕಾ ಬಳಿ ಮೊಳಗಿದ ಸೈರನ್: ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ!

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು!

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ

ಸಾಲು ಸಾಲು ಉದ್ಯೋಗ ಕಡಿತದ ನಡುವೆ Flipkart ಗೆ 2.5 ಲಕ್ಷ ಮಂದಿ ಹೊಸ ನೇಮಕ!