ಪೊಲೀಸ್ ಠಾಣೆ ಎದುರು ಜಮಾಯಿಸಿದ ಪ್ರತಿಭಟನಾಕಾರರು 
ರಾಜ್ಯ

ಭಟ್ಕಳದಲ್ಲಿ ಮಸೀದಿ-ಮದರಸಾ ಮೇಲೆ ಅಷ್ಟೇ ಅಲ್ಲ, ಗಣೇಶ ಮೆರವಣಿಗೆ ಮೇಲೂ ಕಲ್ಲು ತೂರಾಟ: ಎರಡು ಪ್ರತ್ಯೇಕ FIR ದಾಖಲು; Video

ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು(FIR) ದಾಖಲಿಸಿದ್ದಾರೆ.

ಭಟ್ಕಳ: ಭಟ್ಕಳ ತಾಲ್ಲೂಕಿನ ತಲಾಂದದಲ್ಲಿ ಬುಧವಾರ ತಡ ರಾತ್ರಿ ಸಾರ್ವಜನಿಕ ಗಣೇಶ ವಿಸರ್ಜನೆ ಮೆರವಣಿಗೆ ಸಾಗುವ ವೇಳೆ ಮಾರ್ಗ ಮಧ್ಯೆ ಗುಳ್ಮಿಯ ಇಸ್ಮಾಯಿಲ್ ಮಸೀದಿ ಮತ್ತು ಮದರಸಾ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು(FIR) ದಾಖಲಿಸಿದ್ದಾರೆ.

ಸ್ಥಳೀಯ ನಿವಾಸಿ ಅಬ್ದುಲ್ ಆಲಿಮ್ ಅವರು ನೀಡಿದ ದೂರಿನ ಪ್ರಕಾರ, ಗುಲ್ಮಿಯ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮಿಯಾ ಮಸೀದಿ ಮತ್ತು ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಇದರಿಂದ ಎರಡು ಕಿಟಕಿ ಗಾಜುಗಳು ಜಖಂಗೊಂಡಿವೆ.

ಇನ್ನು ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗಣೇಶ ಮೆರವಣಿಗೆಯ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ಪ್ರತಿದೂರು ಕೂಡ ದಾಖಲಾಗಿದೆ. ಈ ಗಣೇಶ ಮೆರವಣಿಗೆಯು ತಲಂದಾದಿಂದ ಪ್ರಾರಂಭವಾಗಿ ಗುಲ್ಮಿ ಮೂಲಕ ವಿಸರ್ಜನಾ ಸ್ಥಳದತ್ತ ಸಾಗುತ್ತಿತ್ತು.

ಭಟ್ಕಳ ನಗರ ಪೊಲೀಸರು ಎರಡೂ ದೂರುಗಳ ಆಧಾರದ ಮೇಲೆ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಸ್ಥಳಕ್ಕೆ ಭೇಟಿ ನೀಡಿ, ಘಟನೆಗೆ ಕಾರಣರಾದವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಮಹೇಶ್ ಟೆಂಗಿನಕಾಯಿ, ಗಣಪತಿ ಹಬ್ಬದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆಯನ್ನು ಖಂಡಿಸಿದ್ದು, ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ

PM Modi Birthday: 'ಆತ್ಮೀಯ ಗೆಳೆಯ' ಮೋದಿಗೆ ಜಾರ್ಜಿಯಾ ಮೆಲೋನಿ ವಿಶೇಷ ವಿಶ್; ಇಟಲಿ ಪ್ರಧಾನಿಯಿಂದ ಹೃದಯಸ್ಪರ್ಶಿ ಸಂದೇಶ!