Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್!  Online Desk
ರಾಜ್ಯ

Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ; ಹಾಗಾದ್ರೆ, ಕೊನೆಯ ದಿನಾಂಕ ಯಾವಾಗ?

Ration Card e-KYC Deadline: ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಇದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅತಿಯಾದ ಜನದಟ್ಟಣೆ ಮತ್ತು ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ದಿನಂಪ್ರತಿ ತಮ್ಮ ಕೆಲಸ ಕಾರ್ಯ ಬಿಟ್ಟು ಸಾಕಷ್ಟು ತೊಂದರೆ ಎದುರಿಸುತ್ತಿದ್ದರು. ಜೊತೆಗೆ, ಈ ಸಮಸ್ಯೆಗೆ ಶೀಘ್ರದಲ್ಲೇ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುಳಿತು ಇ-ಕೆವೈಸಿ ಮಾಡಲು ಸರ್ಕಾರ ಹೊಸ ಯೋಜನೆ ಸಿದ್ದಪಡಿಸುತ್ತಿತ್ತು. ಆದರೆ, ಅದಕ್ಕೆ ಇನ್ನೂ ಒಂದು ವಾರದ ಸಮಯ ಬೇಕಿತ್ತು. ಅಷ್ಟರಲ್ಲಿ, ಈ ಇ-ಕೆವೈಸಿ ಮಾಡಿಸಲು, ಹೆಚ್ಚೆಂದರೆ ಒಂದು ವಾರ ಉಳಿತಿತ್ತೇನೋ! ಆದರೆ, ಸಮಸ್ಯೆ ಬೇಗ ಪರಿಹಾರವಾಗುತಿರಲಿಲ್ಲ.! ಈ ಕಾರಣದಿಂದ ಕರ್ನಾಟಕ ಸರ್ಕಾರ, ರಾಜ್ಯದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ ಟೈಮ್ ವಿಸ್ತರಣೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

ಇ-ಕೆವೈಸಿ ಕಡ್ಡಾಯ ಯಾಕೆ?

ಕೇಂದ್ರ ಸರ್ಕಾರದ ನಿಯಮದಂತೆ ಪ್ರತಿ 5 ವರ್ಷಕ್ಕೊಮ್ಮೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹಾಗಾಗಿ, ರಾಜ್ಯದ ಸುಮಾರು 2.67 ಕೋಟಿ ಫಲಾನುಭವಿಗಳು ಇ-ಕೆವೈಸಿ ಮಾಡಿಸದಿದ್ದರೆ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.

ಇ-ಕೆವೈಸಿ ಮಾಡಿಸಲು ಯಾವೆಲ್ಲಾ ದಾಖಲೆಗಳು ಬೇಕು?

ಕುಟುಂಬದ ಸದಸ್ಯರ ಮೂಲ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಂಖ್ಯೆ, ಆಧಾರ್‌ಗೆ ಲಿಂಕ್ ಆದ ಮೊಬೈಲ್ ಸಂಖ್ಯೆ ಹಾಗೂ ಎಲ್‌ಪಿಜಿ ಗ್ಯಾಸ್ ಸಂಪರ್ಕದ ವಿವರಗಳು (ಜಾತಿ ಪ್ರಮಾಣಪತ್ರ ಕೇವಲ SC/ST ಫಲಾನುಭವಿಗಳಿಗೆ ಮಾತ್ರ).

APL-BPL ಕಾರ್ಡ್​​​ ಇ-ಕೆವೈಸಿಗೆ ಹೊಸ ಡೆಡ್​ಲೈನ್!

ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿದ್ದ ತೀವ್ರ ಸರ್ವರ್ ಸಮಸ್ಯೆ ಹಾಗೂ ಸಾರ್ವಜನಿಕರ ದಟ್ಟಣೆಯ ಕಾರಣದಿಂದ ರಾಜ್ಯದಲ್ಲಿ . ಇನ್ನೂ ಕೋಟಿಗೂ ಅಧಿಕ ಪಡಿತರ ಚೀಟಿಗಳಿಗೆ ಇ-ಕೆವೈಸಿ ಬಾಕಿ ಇದೆ ಎನ್ನಲಾಗಿದೆ. ಹಾಗಾಗಿ, ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಇದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೋಯೆಲ್ ಟಾಟಾ ವಿರೋಧದ ನಡುವೆ ಟಾಟಾ ಸನ್ಸ್ ಅಧ್ಯಕ್ಷರಾಗಿ ಚಂದ್ರಶೇಖರನ್ ಮರುನೇಮಕ!

KPSC ಹಗರಣ: ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಕೊನೆಗೂ ಪ್ರತ್ಯಕ್ಷ; ಸಿಐಡಿ ವಿಚಾರಣೆಗೆ ಹಾಜರು

ಇನ್ನೂ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ; ಒಟ್ಟು ಸಂಖ್ಯೆ 124ಕ್ಕೆ ಏರಿಕೆ

ಭಾರತ ವಿಶ್ವಾಸಾರ್ಹ ಸೆಮಿಕಂಡಕ್ಟರ್ ಉತ್ಪಾದನಾ ತಾಣ, ಉದ್ಯಮಕ್ಕೆ ಅನುಕೂಲ ವಾತಾವರಣ ನಿರ್ಮಿಸಲು ಸರ್ಕಾರ ಸಿದ್ಧ: ಪ್ರಧಾನಿ ಮೋದಿ

ನಾನು ಇನ್ನೆಲ್ಲಿಗೆ ಹೋಗೋಕಾಗುತ್ತೆ, ಇಲ್ಲಿನ ಜನರನ್ನೆ ನಂಬಿಕೊಂಡಿದ್ದೀನಿ: ರಾಮನಗರದಿಂದಲೇ ಸ್ಪರ್ಧೆ ಖಚಿತ; ನಿಖಿಲ್ ಕುಮಾರಸ್ವಾಮಿ