ತಹಶೀಲ್ದಾರ್ ಸಚ್ಚಿದಾನಂದ 
ರಾಜ್ಯ

ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ ಬರೋಬ್ಬರಿ 50 ಲಕ್ಷ ರೂ.ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!

ಲೋಕಾಯುಕ್ತ ಎಸ್.ಪಿ.ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ಮಾಡಿತು.ಈ ವೇಳೆ ದೂರುದಾರರು ಕೂಡ ಅವರ ಜೊತೆಗೆ ಇದ್ದರು.

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50 ಲಕ್ಷ ರೂ. ಲಂಚ ಪಡೆಯುವಾಗ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಧಾರವಾಡ-ಕಲಘಟಗಿ ಮಧ್ಯೆ ಇರುವ ಯರಿಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿರುವ 33 ಎಕರೆ ಪೈಕಿ 13 ಎಕರೆ ಭೂಮಿ ಖರಾಬು ಇತ್ತು. ಇದನ್ನು ಮಾರ್ಪಾಟು ಮಾಡಿಕೊಡಲು 50 ಲಕ್ಷ ರೂ. ಲಂಚ ಮತ್ತು ಅದೇ ಭೂಮಿಯ ಪೈಕಿ 2 ಎಕರೆ ಜಮೀನು ನುಂಗಲು ತಹಶೀಲ್ದಾರ್ ಹೊಂಚು ಹಾಕಿದ್ದರು ಎನ್ನಲಾಗಿದೆ.

ಲೋಕಾಯುಕ್ತ ಎಸ್.ಪಿ.ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ಮಾಡಿತು.ಈ ವೇಳೆ ದೂರುದಾರರು ಕೂಡ ಅವರ ಜೊತೆಗೆ ಇದ್ದರು. ಡಿಎಸ್ ಪಿ ರವೀಂದ್ರ ಕುರುಬಗಟ್ಟಿ, ಇನ್ಸಪೆಕ್ಟರ್ ಪ್ರಸಾದ್, ಕರುಣೇಶಗೌಡ, ಪ್ರಸಾದ ಪಾನೇಕರ್ ಸೇರಿದಂತೆ ಇತರರು ಭ್ರಷ್ಟ ತಹಶೀಲ್ದಾರ್ ಬೇಟೆಯಾಡಿದ್ದಾರೆ.

ಬಾಗಲಕೋಟೆಯ ಮಂಜುನಾಥ ಅರಳಿಕಟ್ಟಿ ಎಂಬುವವರು ಧಾರವಾಡದ ಯರಿಕೊಪ್ಪ ಹದ್ದಿನಲ್ಲಿ ಖರೀದಿಸಿದ್ದ ಜಮೀನಿನ ಖರಾಬು ಪಹಣಿ ಸರಿಪಡಿಸಲು ಈ ಲಂಚಕ್ಕೆ ತಹಶೀಲ್ದಾರ ಬೇಡಿಕಿ ಇಟ್ಟಿದ್ದರು ಎನ್ನಲಾಗಿದೆ. ಬುಧವಾರ ರಾತ್ರಿ ಕರ್ನಾಟಕ ಕಾಲೇಜು ಆವರಣದಲ್ಲಿಯೇ ಈ ಲಂಚ ಪಡೆಯುವಾಗ ಸಚ್ಚಿದಾನಂದ ಕುಚನೂರು ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಚ್ಚಿದಾನಂದ ಕುಚನೂರ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಜಮೀನು ದಾಖಲೆ ಸರಿಪಡಿಸಿಕೊಡುವ ವಿಷಯಕ್ಕೆ ಸಂಬಂಧಿಸಿದಂತೆ 50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ, ಕಚೇರಿಯಲ್ಲಿ ಸತ್ಯನಾರಾಯಣ ಪೂಜೆ ಇಟ್ಟುಕೊಂಡಿದ್ದರು. ಪೂಜೆಯ ಜೊತೆಗೆ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು. ಅನ್ನ ಸಂತರ್ಪಣೆಗಾಗಿ ಕಚೇರಿಯಲ್ಲಿ ಭರದ ಸಿದ್ಧತೆ ನಡೆದಿತ್ತು. ರಾತ್ರಿಯೇ ಅಡುಗೆ ಮಾಡಲು ಬಟ್ಟರು ಬಂದಿದ್ದರು. ಸುಮಾರು ಎರಡು ಸಾವಿರ ಜನರಿಗೆ ಅಡುಗೆ ಸಿದ್ದವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಜಕೀಯ ನಾಯಕರಿಂದ ಶುಭಾಶಯ, ‘ವಿಶ್ವದ ಅತ್ಯಂತ ಜನಪ್ರಿಯ ನಾಯಕ’ ಎಂದು ಬಣ್ಣನೆ..!

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ..!

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

9/11 ಪಾಠ ಮರೆಯದಿರಿ, ಉಗ್ರರಿಗೆ ಆಶ್ರಯ ನೀಡುವ ವ್ಯವಸ್ಥೆ ಕಿತ್ತೊಗೆಯಿರಿ: JeM, LeT ಹೆಸರು ಪ್ರಸ್ತಾಪಿಸಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಚಾಟಿ..!

ಮದ್ಯದ ಅಮಲಿನಲ್ಲಿ ಜಡ್ಜ್‌ ಎದುರೇ ರಂಪಾಟ: ಜೈಲು ಶಿಕ್ಷೆ ವಿಧಿಸಿ ಕುಡುಕ ವಕೀಲನಿಗೆ ತಕ್ಕ ಶಾಸ್ತಿ ಮಾಡಿದ ಹೈಕೋರ್ಟ್‌..!