ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ, ಜನರ ಬದುಕಿನ ಮೇಲೆ ಕಾಳಜಿ ಇದೆ ಎಂದರು.

ಹೆಬ್ರಿ: ಜನರ ಭಾವನೆ ಮೇಲೆ ನಾವು ರಾಜಕಾರಣ ಮಾಡಲ್ಲ, ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ, ಜನರ ಬದುಕಿನ ಮೇಲೆ ಕಾಳಜಿ ಇದೆ ಎಂದರು.

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳುನಾಡಿನ ಜನರ ಬಯಕೆಯಂತೆ ಕೈಗೊಂಡ 60 ತೀರ್ಮಾನಗಳಲ್ಲಿ 40 ನಿರ್ಧಾರಗಳು ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿವೆ. ಸ್ಥಳೀಯ ಜನಪ್ರತಿನಿಧಿಗಳು ಇಟ್ಟಿರುವ ವಲಯ ನಿರ್ವಹಣೆ ಯೋಜನೆ ಹಾಗೂ ಹೆಬ್ರಿಯಲ್ಲಿ ತಾಲ್ಲೂಕು ಆಸ್ಪತ್ರೆ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು; ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ, ಮುಂದಿನ ದಿನಗಳಲ್ಲಿ ಉಡುಪಿಗೂ ಭೇಟಿ ನೀಡುವೆ ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ; ಅಧಿಕಾರಿಗಳ ಜೊತೆ ಚರ್ಚಿಸಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ

ಕಸ್ತೂರಿ ರಂಗನ್ ಸಮಿತಿಯು ಉಪಗ್ರಹ ಆಧಾರಿತ ಜಿಪಿಎಸ್ ಸಮೀಕ್ಷೆ ಮಾಡಿದ್ದು, ವಾಸ್ತವ ಭೌತಿಕ ಸಮೀಕ್ಷೆ ನಡೆಸಿಲ್ಲ. ಇದರಿಂದ 100ಕ್ಕೂ ಹೆಚ್ಚು ಜನರಿದ್ದರೂ ಹಾಗೂ ಕೇವಲ 5% ಸಂರಕ್ಷಿತ ಅರಣ್ಯವಿದ್ದರೂ (ವರದಿಯ 100ಕ್ಕಿಂತ ಕಡಿಮೆ ಜನಸಂಖ್ಯೆ ಮತ್ತು 20% ಸಂರಕ್ಷಿತ ಅರಣ್ಯ ನಿಯಮ ಮೀರಿ) ಪ್ರದೇಶಗಳನ್ನು ಸೂಕ್ಷ್ಮ ವಲಯಕ್ಕೆ ಸೇರಿಸಲಾಗಿದೆ ಎಂದರು.

ಕೇರಳದಲ್ಲಿ ಉನ್ನತ ಮಟ್ಟದ ಸಮಿತಿ ಮೂಲಕ ಭೌತಿಕ ಸಮೀಕ್ಷೆ ನಡೆಸಿ, ನಾಡು-ಕಾಡನ್ನು ಬೇರ್ಪಡಿಸಿ ವ್ಯಾಪ್ತಿಯನ್ನು 13,000 ಚ.ಕಿ.ಮೀನಿಂದ 9,000 ಚ.ಕಿ.ಮೀಗೆ ಇಳಿಸಿ 3,200 ಚ.ಕಿ.ಮೀ ಮುಕ್ತಗೊಳಿಸಲಾಗಿದೆ; ಕರ್ನಾಟಕದಲ್ಲೂ (ಒಟ್ಟು 20,000 ಚ.ಕಿ.ಮೀ ವ್ಯಾಪ್ತಿ) ಇದೇ ಮಾದರಿ ಅನುಸರಿಸಿದರೆ ಸುಮಾರು 5,000 ಚ.ಕಿ.ಮೀ ಪ್ರದೇಶ ಮುಕ್ತವಾಗಲಿದೆ ಎಂದು ಸಲಹೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರವೇ ತಜ್ಞರ ಸಮಿತಿ ರಚಿಸಿ ಭೌತಿಕ ಸಮೀಕ್ಷೆ ನಡೆಸಿ, ಆ ವರದಿಯನ್ನು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಹಾಗೂ ಹಸಿರು ನ್ಯಾಯಪೀಠಕ್ಕೆ ಸಲ್ಲಿಸಿ ಮನವರಿಕೆ ಮಾಡಿಕೊಡಬೇಕು ಎಂಬ ಬೇಡಿಕೆಗೆ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಭಾವನೆ ತಿಳಿದು ಪರಿಹಾರ ನೀಡಲು ಬಂದಿದ್ದು, ನಿಮ್ಮ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಲಿದೆ. ಸೆಪ್ಟೆಂಬರ್ 27ರ ಒಳಗೆ ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗಿದೆ.

ಸರ್ಕಾರದ ಮುಂದಿನ ನಡೆ ಹಾಗೂ ಅಧಿವೇಶನದ ತೀರ್ಮಾನ:

ಕರೆಯಲಾಗಿರುವ 3 ದಿನಗಳ ವಿಶೇಷ ಅಧಿವೇಶನದ ಮೊದಲ ದಿನವೇ ಕಸ್ತೂರಿ ರಂಗನ್ ವರದಿ, ರೈತರು ಮತ್ತು ಬರಗಾಲದ ಕುರಿತು ಚರ್ಚಿಸಲಾಗುವುದು; ಜೊತೆಗೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗಕ್ಕೂ ಭೇಟಿ ನೀಡಿ ಜನರ ಅಭಿಪ್ರಾಯ ಆಲಿಸಲಾಗುವುದು ಎಂದು ಹೇಳಿದರು.

ಅರಣ್ಯವಾಸಿಗಳ ಹಕ್ಕಿನ ರಕ್ಷಣೆ: ಅರಣ್ಯ ರಕ್ಷಿಸುವ ಅರಣ್ಯವಾಸಿಗಳ ಬದುಕಿಗೆ ಸಂರಕ್ಷಣಾ ಕಾನೂನು ತೊಂದರೆಯಾಗಬಾರದು ಹಾಗೂ ವರದಿಯಿಂದ ಒಕ್ಕಲೆಬ್ಬಿಸುತ್ತಾರೆ ಎಂಬ ಆತಂಕದ ಬಗ್ಗೆ ಸಾರ್ವಜನಿಕರಿಗೆ ವಾಸ್ತವಾಂಶದ ಅರಿವು ಮೂಡಿಸಬೇಕಿದೆ. ಅರಣ್ಯ ಹಕ್ಕು ಕಾಯ್ದೆಯಲ್ಲಿ ಕೆಲವರಿಗೆ 25 ವರ್ಷ ಹಾಗೂ ಉಳಿದವರಿಗೆ 75 ವರ್ಷವಿರುವ ನಿಯಮ ಬದಲಿಸಿ, ಎಲ್ಲರಿಗೂ 25 ವರ್ಷಗಳ ಮಿತಿ ನಿಗದಿ ಮಾಡಲು ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲಾಗುವುದು; ಅರಣ್ಯವಾಸಿಗಳಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಗರ್ ಹುಕುಂ ಸಾಗುವಳಿ ಹಾಗೂ ಉಳುವವನಿಗೆ ಭೂಮಿ ನೀಡಿರುವುದು ನಮ್ಮ ಸರ್ಕಾರ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!