ಸಾಂದರ್ಭಿಕ ಚಿತ್ರ online desk
ರಾಜ್ಯ

ಬರ: ರಾಜ್ಯದ 17 ಜಿಲ್ಲೆಗಳ 53 ತಾಲೂಕುಗಳಲ್ಲಿ ಬೆಳೆ ಹಾನಿ ಖುದ್ದು ಪರಿಶೀಲನೆಗೆ ಸರ್ಕಾರದ ಆದೇಶ

​ಇದೀಗ ಜೂ.1 ರಿಂದ ಸೆ.16 ರವರೆಗಿನ ಅವಧಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್‌ಎನ್‌ಡಿಎಂಸಿ) ಉಳಿದ 115 ತಾಲೂಕುಗಳ ವೈಜ್ಞಾನಿಕ ದತ್ತಾಂಶಗಳನ್ನು (ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸೂಚ್ಯಂಕ ಇತ್ಯಾದಿ) ವಿಶ್ಲೇಷಿಸಿದ್ದು,

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಋತುವಿನ ಬರ ಪರಿಸ್ಥಿತಿಯ ವೈಜ್ಞಾನಿಕ ಪರಿಶೀಲನೆ ನಿರಂತರವಾಗಿ ಸಾಗುತ್ತಿದೆ.

2020ರ ಬರ ನಿರ್ವಹಣಾ ಮಾರ್ಗದರ್ಶಿ ನಿಯಮಾವಳಿ ಅನುಸಾರ ಹೆಚ್ಚುವರಿ 53 ತಾಲೂಕುಗಳಲ್ಲಿ ಬೆಳೆ ಹಾನಿಯ ಪ್ರತ್ಯಕ್ಷ ಸ್ಥಳ ಪರಿಶೀಲನೆ (ಗ್ರೌಂಡ್ ಟ್ರೂಥಿಂಗ್) ನಡೆಸಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು(ಕೆಎಸ್‌ಡಿಎಂಎ) ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಹಂತ-ಹಂತವಾಗಿ ಮೌಲ್ಯಮಾಪನ ಮಾಡಲಾಗುತ್ತಿದ್ದು, ಈ ಹಿಂದೆ ಮೊದಲ ಹಂತದಲ್ಲಿ 102 ತಾಲೂಕುಗಳಲ್ಲಿ ಪ್ರತ್ಯಕ್ಷ ಪರಿಶೀಲನೆ ನಡೆಸಿ, 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು (89 ತೀವ್ರ ಬರ ಹಾಗೂ 12 ಸಾಧಾರಣ ಬರ). ನಂತರದ ಹಂತದಲ್ಲಿ 24 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ.

​ಇದೀಗ ಜೂ.1 ರಿಂದ ಸೆ.16 ರವರೆಗಿನ ಅವಧಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್‌ಎನ್‌ಡಿಎಂಸಿ) ಉಳಿದ 115 ತಾಲೂಕುಗಳ ವೈಜ್ಞಾನಿಕ ದತ್ತಾಂಶಗಳನ್ನು (ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸೂಚ್ಯಂಕ ಇತ್ಯಾದಿ) ವಿಶ್ಲೇಷಿಸಿದ್ದು, ಈ ಪೈಕಿ 17 ಜಿಲ್ಲೆಗಳ 53 ತಾಲೂಕುಗಳು ಪ್ರತ್ಯಕ್ಷ ಪರಿಶೀಲನೆಯ 3ನೇ ಹಂತಕ್ಕೆ ಅರ್ಹತೆ ಪಡೆದುಕೊಂಡಿವೆ.

ಈ ಬಾರಿಯ ಸ್ಥಳ ಪರಿಶೀಲನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಹಾಗೂ ನಿಖರವಾಗಿ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿಪಡಿಸಿರುವ ‘ಕ್ರಾಪ್‌ ಲಾಸ್‌ ಜಿಟಿ’ ಎಂಬ ವಿಶೇಷ ಮೊಬೈಲ್ ಆ್ಯಪ್‌ ಬಳಸಲಾಗುತ್ತಿದೆ. ಈ ಆ್ಯಪ್‌ ಮೂಲಕ ಜಿಯೋ-ಟ್ಯಾಗ್ ಮಾಡಿದ ಛಾಯಾಚಿತ್ರಗಳು, ಜಿಪಿಎಸ್ ನಿರ್ದೇಶಾಂಕಗಳು, ಜಮೀನಿನ ವಿವರ ಮತ್ತು ಬೆಳೆ ಹಾನಿಯ ವಿಸ್ತೀರ್ಣವನ್ನು ಸ್ಥಳದಲ್ಲೇ ದಾಖಲಿಸಲಾಗುತ್ತದೆ.

ಶೇ. 33 ಅಥವಾ ಅದಕ್ಕಿಂತ ಹೆಚ್ಚಿನ ಬೆಳೆ ನಷ್ಟ ದಾಖಲಾದರೆ ಆ ತಾಲೂಕನ್ನು ಬರಪೀಡಿತ ಎಂದು ಪರಿಗಣಿಸಲಾಗುತ್ತದೆ. ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟವಿರುವ ತಾಲೂಕುಗಳನ್ನು ತೀವ್ರ ಬರ ಪೀಡಿತ ವರ್ಗದ ಅಡಿಯಲ್ಲಿ ವರ್ಗೀಕರಿಸಲಾಗುತ್ತದೆ. ಪರಿಶೀಲನಾ ಸ್ಥಳಗಳ ಪೈಕಿ ಶೇ. 80 ಕ್ಕಿಂತ ಹೆಚ್ಚು ಕಡೆಗಳಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ಹಾನಿ ಕಂಡುಬಂದರೆ, ಆ ತಾಲೂಕುಗಳನ್ನು ಮಧ್ಯಮ ಬರ ವರ್ಗದಿಂದ ತೀವ್ರ ಬರ ವರ್ಗಕ್ಕೆ ಸೇರಿಸಲಾಗುತ್ತದೆಯ.

ರಾಜ್ಯಾದ್ಯಂತ ಮುಂದುವರಿದ ಒಣ ಹವಾಮಾನ ಮತ್ತು ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಬುಧವಾರ ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ಇದಕ್ಕೂ ಮೊದಲು, ಆಗಸ್ಟ್ 27 ರಂದು ನಡೆದ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು 139 ತಾಲೂಕುಗಳ ವೈಜ್ಞಾನಿಕ ಮೌಲ್ಯಮಾಪನ ನಡೆಸಿದ ನಂತರ ಕಂದಾಯ ಇಲಾಖೆಯು ಈ ನಿರ್ಧಾರವನ್ನು ಕೈಗೊಂಡಿದೆ. ನೈಸರ್ಗಿಕ ವಿಕೋಪಗಳ ಕುರಿತಾದ ಸಚಿವ ಸಂಪುಟ ಉಪ-ಸಮಿತಿಯ ನಿರ್ದೇಶನದ ಮೇರೆಗೆ, ಮೊಬೈಲ್ ಆ್ಯಪ್ ಬಳಸಿ 24 ತಾಲೂಕುಗಳ ವ್ಯಾಪ್ತಿಯ 214 ಹಳ್ಳಿಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು.

ಮೌಲ್ಯಮಾಪನದ ಆಧಾರದ ಮೇಲೆ, 21 ತಾಲೂಕುಗಳನ್ನು ತೀವ್ರ ಬರಪೀಡಿತ ಮತ್ತು ಎರಡು ತಾಲೂಕುಗಳನ್ನು ಮಧ್ಯಮ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಈ ಘೋಷಣೆಯು ಆರು ತಿಂಗಳವರೆಗೆ ಜಾರಿಯಲ್ಲಿರುತ್ತದೆ. ತೀವ್ರ ಬರಗಾಲ ಪೀಡಿತವೆಂದು ಹೊಸದಾಗಿ ಘೋಷಿಸಲಾದ ತಾಲೂಕುಗಳಲ್ಲಿ ತಿಪಟೂರು, ಕಾರಟಗಿ, ಮಾನವಿ, ಸಿಂಧನೂರು, ಸಿರ್ವಾರ, ಅಫಜಲಪುರ, ಆಳಂದ, ಚಿತ್ತಾಪುರ, ಕಲಬುರಗಿ, ಯಡ್ರಾಮಿ, ಶಹಾಬಾದ್, ಭಾಲ್ಕಿ, ಬಸವನ ಬಾಗೇವಾಡಿ, ಬಬಲೇಶ್ವರ, ತಿಕೋಟಾ, ರಟ್ಟಿಹಳ್ಳಿ, ಹುಬ್ಬಳ್ಳಿ, ನವಲಗುಂದ, ಹುಬ್ಬಳ್ಳಿ ನಗರ, ಅಣ್ಣಿಗೇರಿ ಮತ್ತು ಕಡೂರು ಹಾಗೂ ಕೊಡಗು ಜಿಲ್ಲೆಯ ಪೊನ್ನಂಪೇಟೆ ಮತ್ತು ವಿರಾಜಪೇಟೆ ಸೇರಿವೆ.

ಎಸ್‌ಡಿಆರ್‌ಎಫ್ (SDRF) ಮಾರ್ಗಸೂಚಿಗಳ ಅಡಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಕೃಷಿ ಆಯುಕ್ತರು, ತೋಟಗಾರಿಕೆ ನಿರ್ದೇಶಕರು ಮತ್ತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಜಂಟಿಯಾಗಿ ಬೆಳೆ ನಷ್ಟದ ಸಮೀಕ್ಷೆಯನ್ನು ನಡೆಸಲಿದ್ದಾರೆ. ಕೆಎಸ್‌ಎನ್‌ಡಿಎಂಸಿ (KSNDMC) ಪ್ರತಿ ವಾರ ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದು, ಅರ್ಹತಾ ಮಾನದಂಡಗಳನ್ನು ಪೂರೈಸುವ ಇತರ ತಾಲೂಕುಗಳನ್ನು ಹಂತ ಹಂತವಾಗಿ ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬಹುದು ಎಂದು ಸರ್ಕಾರ ತಿಳಿಸಿದೆ ಎಂದು ಸರ್ಕಾರದ ಪ್ರಕಟಣೆಯೊಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ': ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!

ED ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಬೆನ್ನಿಗೆ ನಿಂತ ಎಸ್‌ಟಿ ಸಮುದಾಯ: ಬೃಹತ್‌ ಸಮಾವೇಶಕ್ಕೆ ಮುಂದು, ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು..!