ಮಂಡ್ಯದಲ್ಲಿ ಭೀಕರ ಅಪಘಾತ 
ರಾಜ್ಯ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ಬೆಂಗಳೂರಿನ ಮಹಿಳಾ ಟೆಕ್ಕಿ ಸಾವು; Video

ಮಂಡ್ಯ ಕೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಫ್ಲೈಓವರ್‌ನಿಂದ ಕಾರೊಂದು ಕೆಳಗೆ ಬಿದ್ದು ಬೆಂಗಳೂರಿನ 32 ವರ್ಷದ ಟೆಕ್ಕಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತರನ್ನು ಬೆಂಗಳೂರಿನ ಟೆಕ್ಕಿ ಅಂಜನಾ (32) ಎಂದು ಗುರುತಿಸಲಾಗಿದ್ದು, ಮಂಡ್ಯ ಕೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಪೊಲೀಸರ ಪ್ರಕಾರ, ಕಾರು ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿತ್ತು. ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಫ್ಲೈಓವರ್‌ನಿಂದ ಹಾರಿ ಕೆಳಗಿದ್ದ ಅಂಡರ್‌ಪಾಸ್‌ಗೆ ಬಿದ್ದಿದೆ.

ಅಪಘಾತದ ತೀವ್ರತೆಗೆ ಕಾರಿನ ಕಿಟಕಿಯಿಂದ ಅಂಜನಾ ಹೊರಗೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಕಾರಿನಲ್ಲಿದ್ದ ಅವರ ಪತಿ ಹರೀಶ್ ಹಾಗೂ ಚಾಲಕ ನಿತಿನ್ ಕೂಡ ಗಾಯಗೊಂಡಿದ್ದಾರೆ. ಮೂವರನ್ನೂ ತಕ್ಷಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಜನಾ ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಅಂಜನಾ ಅವರು ಪತಿಯೊಂದಿಗೆ ಮೈಸೂರಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಡ್ಯ ಕೇಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಮಮತಾ ಬಣಕ್ಕೆ ಮತ್ತೊಂದು ಆಘಾತ; ನಾಮಪತ್ರ ವಾಪಸ್ ಪಡೆದ ನಂದಿಗ್ರಾಮ ಅಭ್ಯರ್ಥಿ!

ಬೆಂಗಳೂರು: ಫೋನ್‌ ರಿಸೀವ್‌ ಮಾಡ್ಲಿಲ್ಲ ಅಂತ ಪತ್ನಿ ಕೊಲೆ; ಆರೋಪಿ ಪತಿ ಬಂಧನ! ಅಪ್ಪ, ಅಮ್ಮ ಇಲ್ಲದೆ ಅನಾಥರಾದ ಮಕ್ಕಳು

ಪಾಕಿಸ್ತಾನ: ಖೈಬರ್ ಪಖ್ತುಂಕ್ವಾದ ಪೊಲೀಸ್ ಕೇಂದ್ರದ ಬಳಿ ಕಾರು ಬಾಂಬ್ ಸ್ಫೋಟ; 16 ಮಂದಿ ಸಾವು