ಜೈಲಿನಲ್ಲಿದ್ದ ಅಮಾನತುಗೊಂಡ IAS ಅಧಿಕಾರಿ ಜ್ಞಾನೇಂದ್ರ, ಮಧ್ಯವರ್ತಿ ಇಡಿ ವಶಕ್ಕೆ!  Online Desk
ರಾಜ್ಯ

KPSC ನೇಮಕಾತಿ ಹಗರಣ: ಪರಪ್ಪನ ಅಗ್ರಹಾರದಲ್ಲೇ IAS ಅಧಿಕಾರಿ ಜ್ಞಾನೇಂದ್ರ, ಮಧ್ಯವರ್ತಿ ಕನ್ನಾಳೆ ಇಡಿ ವಶಕ್ಕೆ!

KPSC Scam: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಮಧ್ಯವರ್ತಿ ಬಸವರಾಜು ಕನ್ನಾಳೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭಾರಿ ಕ್ರಮ ಕೈಗೊಂಡಿದ್ದು, ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಜೈಲಿನಲ್ಲೇ ಬಂಧಿಸಿದೆ.ಈ ಹಿಂದೆ ಅಪರಾಧ ತನಿಖಾ ಇಲಾಖೆ (CID) ಇವರಿಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು, ಹೀಗಾಗಿ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಇದರ ನಡುವೆಯೇ, ಸೆಪ್ಟೆಂಬರ್ 19, 2026 ರಂದು ಇಡಿ ಅಧಿಕಾರಿಗಳು ಇಬ್ಬರನ್ನೂ ಔಪಚಾರಿಕವಾಗಿ ಬಂಧಿಸಿ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ, ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಲಂಚದ ಆರೋಪ ಕೇಳಿಬಂದಿತ್ತು. ಈ ಹಿಂದೆ ಸಿಐಡಿ ಪೊಲೀಸರು ಇವರಿಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದರು. ಆ ಬಳಿಕ ಇಬ್ಬರೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಜೊತೆಗೆ, ಅಕ್ರಮದ ಹಿನ್ನೆಲೆಯಲ್ಲಿ ಸರ್ಕಾರ ಜ್ಞಾನೇಂದ್ರ ಕುಮಾರ್ ಅವರನ್ನು ಇತ್ತೀಚೆಗಷ್ಟೇ ಅಮಾನತು ಮಾಡಿ ಆದೇಶ ಹೊರಡಿಸಿತ್ತು.

ಇಡಿಯಿಂದ ಬಂಧನ ಯಾಕೆ?

ಮುಂದುವರೆದು, ಈ ಅಕ್ರಮ ದಂಧೆಯಿಂದ ಸುಮಾರು ₹12 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಲಾಗಿದ್ದು, ಇದರ ಆರ್ಥಿಕ ಹರಿವು ಮತ್ತು ಬೇನಾಮಿ ಆಸ್ತಿಗಳ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು, ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿಯೇ ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಆದರೆ,  ಅಧಿಕಾರಿಗಳ ಸುದೀರ್ಘ ಡ್ರಿಲ್‌ಗೆ ಇಬ್ಬರೂ ಸರಿಯಾಗಿ ಸಹಕರಿಸದ ಕಾರಣ ಹಾಗೂ ತನಿಖೆಯನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಇಡಿ ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದೆ. ಅದರಂತೆ, ಮಧ್ಯವರ್ತಿ ಕನ್ನಾಳೆ ಮೂಲಕ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಲಾಗಿತ್ತು ಮತ್ತು ಆ ಹಣವನ್ನು ಚಿನ್ನಾಭರಣ ಹಾಗೂ ವಿದೇಶಿ ಪ್ರವಾಸಗಳಿಗೆ ಬಳಸಲಾಗಿತ್ತು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!