ಪ್ರತಾಪ್ ಸಿಂಹ 
ರಾಜ್ಯ

ಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರು

ಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು ಹೊಡೆದ ಹಿಂದೂ ಮಹಾಸಭಾ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಶುಕ್ರವಾರ ಗಣೇಶ ಶೋಭಾಯಾತ್ರೆ ನಡೆಸಿದೆ.

ಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.

ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವಿರುದ್ಧ ಮೈಸೂರು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ಮೆರವಣಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇಷ್ಟೇ ಅಲ್ಲ ಮೆರವಣಿಗೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಕಾಂಗ್ರೆಸ್ ನಿಯೋಗ ಶನಿವಾರ ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ದೂರು ನೀಡಿದೆ.

ಮೆರವಣಿಗೆ ಆಯೋಜಕರು ನಿಗದಿತ ಸಮಯದಲ್ಲಿ ಕಾರ್ಯಕ್ರಮ ಮುಗಿಸಿಲ್ಲ. ಇನ್ನು ಮೆರವಣಿಗೆಯಲ್ಲಿ ಪಾಲ್ಗೊಂಡ ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ಎಫ್ಐಆರ್ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಕಾಂಗ್ರೆಸ್ ದೂರು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ, ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

The Paradise: 'ನೀವೇ ವಿಗ್ ಹಾಕಿದ್ರಿ.. ನಮಗೆ ಜಡೆ ಬಗ್ಗೆ ಹೇಗೆ ಹೇಳ್ತೀರಾ?'; ಕನ್ನಡದ ಪತ್ರಕರ್ತೆ ಪ್ರಶ್ನೆಗೆ ನಟ ನಾನಿ ಖಡಕ್ ಉತ್ತರ, ನಗುವಿನ ಅಲೆ! Video

ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ UP ನ್ಯಾಯಾಲಯದಿಂದ ನೋಟಿಸ್ ಜಾರಿ!

'ಸಿದ್ದರಾಮಯ್ಯ ಪ್ರತಿಮೆ ತೆರವಿನ ಹಿಂದೆ CM ಡಿಕೆಶಿ ಕೈವಾಡ': ಸಿಡಿದೆದ್ದ ಅಭಿಮಾನಿಗಳು; ಕಲಬುರಗಿ ಚಲೋ ಎಚ್ಚರಿಕೆ