ಗೃಹ ಸಚಿವ ಅಮಿತ್ ಶಾ 
ರಾಜ್ಯ

ಅಮಿತ್ ಶಾಗೆ ‘Food Poisoning’; ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು, ಆರೋಗ್ಯದ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿದ್ದೇನು..?

ಅವರು ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ವಿಷಾಹಾರದಿಂದಾಗಿ ವಾಂತಿಯಾಗಿದ್ದು, ಸಹಜವಾಗಿಯೇ ಸ್ವಲ್ಪ ನಿಶ್ಶಕ್ತಿ ಉಂಟಾಗಿತ್ತು.

ಹುಬ್ಬಳ್ಳಿ: ಕರ್ನಾಟಕಕ್ಕೆ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶನಿವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಫುಡ್ ಪಾಯಿಸನಿಂಗ್’ ಉಂಟಾಗಿದ್ದು, ಇದೀಗ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.

ಹುಬ್ಬಳ್ಳಿಯ ಗಬ್ಬೂರಿನಲ್ಲಿ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಕಾಲೇಜಿನ ನೂತನ ಶೈಕ್ಷಣಿಕ ಕಟ್ಟಡ ಹಾಗೂ 1,200 ಹಾಸಿಗೆಗಳ ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಅಮಿತ್ ಶಾ ಉದ್ಘಾಟಿಸಬೇಕಿತ್ತು. ಆದರೆ, ಶನಿವಾರ ಬೆಳಗ್ಗೆ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಸಂಜೆ ವೇಳೆಗೆ ಕ್ಯಾಂಪಸ್‌ಗೆ ಭೇಟಿ ನೀಡಿ, ಇದ್ದಕ್ಕಿದ್ದಂತೆ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿದರು ಎಂದು ಸ್ಥಳೀಯ ನಾಯಕರು ತಿಳಿಸಿದ್ದಾರೆ.

ಬಳಿಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾದಲ್ಲಿ ಶ್ರೀ ವೀರೇಶ್ವರ ಸಹಕಾರಿ ಕ್ರೆಡಿಟ್ ಸೊಸೈಟಿಯ ನೂತನ ಕೇಂದ್ರ ಕಚೇರಿ ಕಟ್ಟಡವನ್ನು ಉದ್ಘಾಟಿಸುವ ಕಾರ್ಯಕ್ರಮವನ್ನೂ ರದ್ದುಗೊಳಿಸಲಾಯಿತು.

ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿಯವರು, ಅಮಿತ್ ಶಾ ಅವರು ಇಲ್ಲಿಗೆ ಬರಬೇಕಿತ್ತು. ಆದರೆ, ಆಹಾರ ವಿಷಬಾಧೆಯಿಂದಾಗಿ ಅವರಿಗೆ ಅನಾರೋಗ್ಯ ಉಂಟಾಯಿತು. ಮಾಜಿ ಬಿಜೆಪಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ನನ್ನನ್ನೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ನಾವು ಅವರೊಂದಿಗೆ ಬರಬೇಕಿತ್ತು. ಆದರೆ, ಈಗ ನಾವು ಮಾತ್ರ ಬಂದಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಶಾ ಅವರ ಆರೋಗ್ಯದ ಕುರಿತು ಮಾತನಾಡಿದ ಜೋಶಿ, ಅವರು ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ವಿಷಾಹಾರದಿಂದಾಗಿ ವಾಂತಿಯಾಗಿದ್ದು, ಸಹಜವಾಗಿಯೇ ಸ್ವಲ್ಪ ನಿಶ್ಶಕ್ತಿ ಉಂಟಾಗಿತ್ತು ಎಂದು ತಿಳಿಸಿದರು.

ಶಾ ಅವರ ಅನುಪಸ್ಥಿತಿಯಲ್ಲಿ ಕೆಎಲ್‌ಇಯ ಹುಬ್ಬಳ್ಳಿ ಕ್ಯಾಂಪಸ್‌ಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೋಶಿ, ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ಶ್ರೀ ಜಗದ್ಗುರು ಮೂರುಸಾವಿರಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಭಾಗವಹಿಸಿ ಉದ್ಘಾಟಿಸಿದರು.

ಕೆಎಲ್‌ಇ ಸೊಸೈಟಿ ಅಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಮಾತನಾಡಿ, ‘ಈ ಐತಿಹಾಸಿಕ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಹೋಟೆಲ್‌ನಲ್ಲೇ ಉಳಿದಿದ್ದಾರೆ. ಈ ಸಂದೇಶವನ್ನು ನಿಮಗೆ ತಿಳಿಸುವಂತೆ ಅವರು ನನಗೆ ತಿಳಿಸಿದ್ದಾರೆ’ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧ ಭೀತಿ: ಅಮೆರಿಕಕ್ಕೆ Iran 'Deadline'.. Trumpಗೆ ಕತಾರ್ ಮೂಲಕ 7 ಷರತ್ತುಗಳ ರವಾನೆ, ಟೆಹ್ರಾನ್‌ ಇಟ್ಟ ಬೇಡಿಕೆಗಳೇನು..?

‘ನನ್ನ ಪತಿ ಮಾಡಿಸುವ ಕೆಲಸಗಳು'; Royal Enfield ಇ-ಬೈಕ್ ಏರಿದ ತೇಜಸ್ವಿ ಸೂರ್ಯ ಪತ್ನಿ Sivasri Skanda! Video

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರ ಬಯಸುತ್ತದೆ, ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!