ರಾಜ್ಯ

ಬಿಜೆಪಿಯವರು ರಣಹದ್ದುಗಳಂತೆ, ರಾಜಕೀಯ ಲಾಭಕ್ಕಾಗಿ ಕೋಮು ಗಲಭೆ ಮಾಡಲು ಕಾಯುತ್ತಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ; Video

ಬಿಜೆಪಿ ಸದಸ್ಯರು ರಣಹದ್ದುಗಳಂತೆ. ರಾಜಕೀಯ ಲಾಭಕ್ಕಾಗಿ ಕೋಮು ಉದ್ವಿಗ್ನತೆಯನ್ನು ಬಳಸಿಕೊಳ್ಳಲು ಅವಕಾಶ ಸಿಗುವುದನ್ನೇ ಅವರು ಕಾಯುತ್ತಿರುತ್ತಾರೆ ಎಂದು ಟೀಕಿಸಿದರು.

ಬೆಂಗಳೂರು: ಸಚಿವ ಯತೀಂದ್ರ ಸಿದ್ದರಾಮಯ್ಯ ಮತ್ತೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜಕೀಯ ಲಾಭಕ್ಕಾಗಿ ಕೋಮು ಉದ್ವಿಗ್ನತೆಯನ್ನು ಬಳಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿರುವ ರಣಹದ್ದುಗಳಂತೆ ಬಿಜೆಪಿ ಸದಸ್ಯರು ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಗಣೇಶ ಪೂಜಾ ಸಮಿತಿಯ ಸದಸ್ಯರಿಗೆ ನಿಯಮಗಳನ್ನು ಪಾಲಿಸುವಂತೆ, ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಎಚ್ಚರಿಕೆ ನೀಡಿದ್ದರು ಎನ್ನಲಾದ ಘಟನೆಗೆ ಸಂಬಂಧಿಸಿ ಕಳೆದ ವಾರ ಟಿ. ನರಸೀಪುರದಲ್ಲಿ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆ ಕುರಿತು ಅವರು ಮಾತನಾಡಿದರು.

ಬಿಜೆಪಿ ಸದಸ್ಯರು ರಣಹದ್ದುಗಳಂತೆ. ರಾಜಕೀಯ ಲಾಭಕ್ಕಾಗಿ ಕೋಮು ಉದ್ವಿಗ್ನತೆಯನ್ನು ಬಳಸಿಕೊಳ್ಳಲು ಅವಕಾಶ ಸಿಗುವುದನ್ನೇ ಅವರು ಕಾಯುತ್ತಿರುತ್ತಾರೆ ಎಂದು ಟೀಕಿಸಿದರು.

ಟಿ.ನರಸೀಪುರ ಗಣೇಶ ಮೆರವಣಿಗೆಯ ಕುರಿತು ಇನ್ಸ್​ಪೆಕ್ಟರ್​​ ವೈರಲ್ ವಿಡಿಯೋ ಸರಿಯಿದೆ. ಮಸೀದಿ ಮುಂದೆ, ಚರ್ಚ್​ಗಳ ಮುಂದೆ ದೇವಸ್ಥಾನಗಳ ಮುಂದೆ ಪಟಾಕಿ ಹೊಡೆಯುವುದು ತಪ್ಪು. ಯಾರಾದರು ದೇವಸ್ಥಾನಗಳ ಮುಂದೆ ಬೇರೆಯವರು ಬಂದು ಪಟಾಕಿ ಹೊಡೆದರೆ ಸರಿನಾ?, ಸುಮ್ಮನೆ ಪಟಾಕಿ ಹೊಡೆಯುವುದು ಸರಿಯಲ್ಲ.

ಕಳೆದ ಬಾರಿ ಅನುಮತಿ ಪಡೆಯದೇ ಆ ರಸ್ತೆಯಲ್ಲಿ ಹೋಗಿದ್ದಾರೆ. ಆಗ ಪೊಲೀಸ್ ಇರಲಿಲ್ಲ. ಈಗ ಹೆಚ್ಚು ಕಡಿಮೆ ಆದರೆ ಯಾರು ಹೊಣೆ. ಆದ್ದರಿಂದ ಅನುಮತಿ ಕೊಟ್ಟಿದ್ದಾರೆ, ಅನುಮತಿ ಪಡೆದು ಯಾವ ರಸ್ತೆಯಲ್ಲಿ ಬೇಕಾದರೂ ಮೆರವಣಿಗೆ ಹೋಗಬಹುದು. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಅಷ್ಟೇ ಎಂದರು.

ಗಣೇಶ ಉತ್ಸವ ಆರಂಭಿಸಿದ್ದೇ ಬಾಲಗಂಗಾಧರನಾಥ ತಿಲಕರು, ತಿಲಕರು ಯಾವ ಪಕ್ಷದವರು ಎಂದು ಕೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕುರಿತು ಮಿಮಿಕ್ರಿ, ದಿವಂಗತ ತಾಯಿಗೆ ಅಪಮಾನ: ‘ಅಸಭ್ಯ ಸಂಸ್ಕೃತಿಗೆ ರಾಹುಲ್ ಬೆಂಬಲ’; ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ

ಅಸಹ್ಯಕರವಾಗಿ ಫೋಟೋ ತೆಗೆಯುವವರಿಗೆ ಹೊಡೆಯಿರಿ: ಶರ್ಟ್ ಬಿಚ್ಚಿ ಪಾಪರಾಜಿಗಳ ವಿರುದ್ಧ ಸಲ್ಮಾನ್ ಖಾನ್ ಗರಂ!

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು, 3 ವಿದ್ಯಾರ್ಥಿಗಳ ಸಾವು! Video

ಏಪ್ರಿಲ್-ಆಗಸ್ಟ್ ಅವಧಿಯಲ್ಲಿ ಪ್ರಮುಖ BRICS ಮಾರುಕಟ್ಟೆಗಳಿಗೆ ಭಾರತದ ರಫ್ತು ಶೇ 34ರಷ್ಟು ಏರಿಕೆ; ಚೀನಾಗೆ ಅತಿ ಹೆಚ್ಚು!

ಯಾರನ್ನೂ ಬಿಟ್ಟಿಲ್ಲ ವೈಫಲ್ಯ: "ಆ ದಿನ ನನ್ನ ವೃತ್ತಿ ಜೀವನ ಮುಗಿದೇ ಹೋಗಿತ್ತು ಎಂದುಕೊಂಡಿದ್ದೆ...": ಅಜಿತ್ ದೋವಲ್