ಈಗಿನ ಸುದ್ದಿ

ರಾಜ್ ಠಾಕ್ರೆ ಜೊತೆ ಕೈಜೋಡಿಸುವ ಸುಳಿವು ನೀಡಿದ ಉದ್ಧವ್ ಠಾಕ್ರೆ

ಶಿವಸೇನಾದ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ಸಹೋದರ ಸಂಬಂಧಿ ರಾಜ್ ಠಾಕ್ರೆ ಅವರೊಡನೆ ಇರುವ ಭಿನ್ನಭಿಪ್ರಾಯಕ್ಕೆ ನಾಂದಿ...

ಮುಂಬೈ: ಶಿವಸೇನಾದ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ಸಹೋದರ ಸಂಬಂಧಿ ರಾಜ್ ಠಾಕ್ರೆ ಅವರೊಡನೆ ಇರುವ ಭಿನ್ನಭಿಪ್ರಾಯಕ್ಕೆ ನಾಂದಿ ಹಾಡಿ, ಕೈಜೋಡಿಸುವ ಸುಳಿವು ನೀಡಿದ್ದಾರೆ.

ಬುಧವಾರ ಪತ್ರಕರ್ತರೊಬ್ಬರು ನಡೆಸಿದ ಸಂದರ್ಶನದಲ್ಲಿ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಅವರಿಗೆ ಮೈತ್ರಿಯಾಗಲು ಇಚ್ಚೆಯಿದ್ದರೆ ಅವರಿಗೆ ಸುಸ್ವಾಗತ ಎಂದು ಪರೋಕ್ಷವಾಗಿ ಶಿವಸೇನಾಗೆ ಆಹ್ವಾನವಿತ್ತಿದ್ದಾರೆ.

ಈ ಸಂಬಂಧ ರಾಜ್ ಠಾಕ್ರೆ ಮತ್ತು ನಾವು ಪರಸ್ಪರ ಮಾತಕತೆ ನಡೆಸಿ ನಿರ್ಧಾರ ತೆಗೆದು ಕೊಳ್ಳಬೇಕಾಗಿದೆ ಎಂದು ಉದ್ದವ್ ಠಾಕ್ರೆ ಹೇಳಿದ್ದಾರೆ.

2006ರಲ್ಲಿ ರಾಜ್ ಠಾಕ್ರೆ ಅವರು ಶಿವಸೇನಾ ತೊರೆದು ಮಹರಾಷ್ಟ್ರ ನವನಿರ್ಮಾಣ ಸೇನಾ ಸಂಘಟನೆ ಸ್ಥಾಪಿಸಿದರು. ಶಿವಸೇನಾ ಮತ್ತು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಸಂಘಟನೆಗಳು ಮೈತ್ರಿಯಾದರೆ ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಭಯ ಹುಟ್ಟುತ್ತದೆ. ಮಹಾರಾಷ್ಟ್ರದಲ್ಲಿ ಎರಡು ಪಕ್ಷಗಳು ಪ್ರಬಲವಾಗಿದ್ದವು. ಎರಡು ಸಂಘಟನೆಗಳು ಮೈತ್ರಿಯಾಗುವುದರಿಂದ ರಾಜಕೀಯ ಪಕ್ಷಗಳಿಗೆ ಚುನಾವಣೆ ಬಗ್ಗೆ ಆತಂಕ ಹುಟ್ಟಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ..' 'ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': ಬಾಲಿವುಡ್ ನಟಿ Nora Fatehi ಶಾಕಿಂಗ್ ಹೇಳಿಕೆ

'Rafale ಫೈಟರ್ ಜೆಟ್, ಕ್ಷಿಪಣಿಗಳೂ ಕೂಡ ನಿಷ್ಪ್ರಯೋಜಕ... ': ಲೆಫ್ಟಿನೆಂಟ್ ಜನರಲ್ Raj Shukla ಅಚ್ಚರಿ ಹೇಳಿಕೆ

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!

SCROLL FOR NEXT