ಈಗಿನ ಸುದ್ದಿ

ರಾಜ್ ಠಾಕ್ರೆ ಜೊತೆ ಕೈಜೋಡಿಸುವ ಸುಳಿವು ನೀಡಿದ ಉದ್ಧವ್ ಠಾಕ್ರೆ

ಶಿವಸೇನಾದ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ಸಹೋದರ ಸಂಬಂಧಿ ರಾಜ್ ಠಾಕ್ರೆ ಅವರೊಡನೆ ಇರುವ ಭಿನ್ನಭಿಪ್ರಾಯಕ್ಕೆ ನಾಂದಿ...

ಮುಂಬೈ: ಶಿವಸೇನಾದ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ಸಹೋದರ ಸಂಬಂಧಿ ರಾಜ್ ಠಾಕ್ರೆ ಅವರೊಡನೆ ಇರುವ ಭಿನ್ನಭಿಪ್ರಾಯಕ್ಕೆ ನಾಂದಿ ಹಾಡಿ, ಕೈಜೋಡಿಸುವ ಸುಳಿವು ನೀಡಿದ್ದಾರೆ.

ಬುಧವಾರ ಪತ್ರಕರ್ತರೊಬ್ಬರು ನಡೆಸಿದ ಸಂದರ್ಶನದಲ್ಲಿ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಅವರಿಗೆ ಮೈತ್ರಿಯಾಗಲು ಇಚ್ಚೆಯಿದ್ದರೆ ಅವರಿಗೆ ಸುಸ್ವಾಗತ ಎಂದು ಪರೋಕ್ಷವಾಗಿ ಶಿವಸೇನಾಗೆ ಆಹ್ವಾನವಿತ್ತಿದ್ದಾರೆ.

ಈ ಸಂಬಂಧ ರಾಜ್ ಠಾಕ್ರೆ ಮತ್ತು ನಾವು ಪರಸ್ಪರ ಮಾತಕತೆ ನಡೆಸಿ ನಿರ್ಧಾರ ತೆಗೆದು ಕೊಳ್ಳಬೇಕಾಗಿದೆ ಎಂದು ಉದ್ದವ್ ಠಾಕ್ರೆ ಹೇಳಿದ್ದಾರೆ.

2006ರಲ್ಲಿ ರಾಜ್ ಠಾಕ್ರೆ ಅವರು ಶಿವಸೇನಾ ತೊರೆದು ಮಹರಾಷ್ಟ್ರ ನವನಿರ್ಮಾಣ ಸೇನಾ ಸಂಘಟನೆ ಸ್ಥಾಪಿಸಿದರು. ಶಿವಸೇನಾ ಮತ್ತು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಸಂಘಟನೆಗಳು ಮೈತ್ರಿಯಾದರೆ ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಭಯ ಹುಟ್ಟುತ್ತದೆ. ಮಹಾರಾಷ್ಟ್ರದಲ್ಲಿ ಎರಡು ಪಕ್ಷಗಳು ಪ್ರಬಲವಾಗಿದ್ದವು. ಎರಡು ಸಂಘಟನೆಗಳು ಮೈತ್ರಿಯಾಗುವುದರಿಂದ ರಾಜಕೀಯ ಪಕ್ಷಗಳಿಗೆ ಚುನಾವಣೆ ಬಗ್ಗೆ ಆತಂಕ ಹುಟ್ಟಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT