ಈಗಿನ ಸುದ್ದಿ

ಕಾರ್ಯಾಚರಣೆ ನಿಲ್ಲಿಸಿ, ಜಿಲ್ಲಾಡಳಿತಕ್ಕೆ ತಿಮ್ಮಣ್ಣನ ತಂದೆ ಮನವಿ

ಬಾದಾಮಿ ತಾಲೂಕಿನ ಸೂಳಿಕೇರಿಯಲ್ಲಿ ತೆರೆದ ಕೊಳವೆ...

ಬಾಗಲಕೋಟೆ: ಬಾದಾಮಿ ತಾಲೂಕಿನ ಸೂಳಿಕೇರಿಯಲ್ಲಿ ತೆರೆದ ಕೊಳವೆ ಬಾವಿಗೆ ಬಾಲಕ ತಿಮ್ಮಣ್ಣ ಬಿದ್ದು 6 ದಿನಗಳು ಕಳೆದರು ಕಾರ್ಯಾಚರಣೆ ಇನ್ನೂ ಯಶಸ್ವಿಯಾಗಿಲ್ಲ.

ಇದರಿಂದ ಮಗ ಬದುಕಿರುವ ಭರವಸೆ ಕಳೆದುಕೊಂಡಿರುವ ತಿಮ್ಮಣ್ಣನ ತಂದೆ ಕಾರ್ಯಾಚರಣೆಯನ್ನು ನಿಲ್ಲಿಸಿ ತನ್ನ ಹೊಲವನ್ನು ಉಳಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

ರೋಬೋಟ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಪರ್ಯಾಯ ಬಾವಿ ಕಾರ್ಯಾಚರಣೆ ಮುಂದುವರೆದಿದೆ. ಆದರೆ ಈ ಕಾರ್ಯಾಚರಣೆಯನ್ನು  ಸಮಾಪ್ತಿ ಮಾಡಿ ಎಂದು ಕಳೆದ ಮೂರು ದಿನಗಳಿಂದ ಒತ್ತಾಯಿಸುತ್ತಿರುವ ತಿಮ್ಮಣ್ಣನ ತಂದೆ "ಮಗನನ್ನಂತೂ ಕಳೆದುಕೊಂಡೆ. ಈಗ ಹೊಸ ಜೀವನವನ್ನು ಪ್ರಾರಂಭಿಸಬೇಕಿದೆ. ದಯವಿಟ್ಟು ಕಾರ್ಯಾಚರಣೆ ನಿಲ್ಲಿಸಿ ನನ್ನ ಹೊಲವನ್ನು ಉಳಿಸಿಕೊಡಿ" ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಸುರಂಗ ಮಾರ್ಗ ಕೊರೆಯುವ  ಕಾರ್ಯಾಚರಣೆ ಮುಂದುವರೆದಿದ್ದು, ಅದನ್ನು ನಿಲ್ಲಿಸಬೇಕೋ ಅಥವಾ ಮುಂದುವರೆಸಬೇಕೋ ಎಂಬುದರ ಕುರಿತು ಜಿಲ್ಲಾಡಳಿತ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT