ಈಗಿನ ಸುದ್ದಿ

ಕಾರ್ಯಾಚರಣೆ ನಿಲ್ಲಿಸಿ, ಜಿಲ್ಲಾಡಳಿತಕ್ಕೆ ತಿಮ್ಮಣ್ಣನ ತಂದೆ ಮನವಿ

ಬಾದಾಮಿ ತಾಲೂಕಿನ ಸೂಳಿಕೇರಿಯಲ್ಲಿ ತೆರೆದ ಕೊಳವೆ...

ಬಾಗಲಕೋಟೆ: ಬಾದಾಮಿ ತಾಲೂಕಿನ ಸೂಳಿಕೇರಿಯಲ್ಲಿ ತೆರೆದ ಕೊಳವೆ ಬಾವಿಗೆ ಬಾಲಕ ತಿಮ್ಮಣ್ಣ ಬಿದ್ದು 6 ದಿನಗಳು ಕಳೆದರು ಕಾರ್ಯಾಚರಣೆ ಇನ್ನೂ ಯಶಸ್ವಿಯಾಗಿಲ್ಲ.

ಇದರಿಂದ ಮಗ ಬದುಕಿರುವ ಭರವಸೆ ಕಳೆದುಕೊಂಡಿರುವ ತಿಮ್ಮಣ್ಣನ ತಂದೆ ಕಾರ್ಯಾಚರಣೆಯನ್ನು ನಿಲ್ಲಿಸಿ ತನ್ನ ಹೊಲವನ್ನು ಉಳಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

ರೋಬೋಟ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಪರ್ಯಾಯ ಬಾವಿ ಕಾರ್ಯಾಚರಣೆ ಮುಂದುವರೆದಿದೆ. ಆದರೆ ಈ ಕಾರ್ಯಾಚರಣೆಯನ್ನು  ಸಮಾಪ್ತಿ ಮಾಡಿ ಎಂದು ಕಳೆದ ಮೂರು ದಿನಗಳಿಂದ ಒತ್ತಾಯಿಸುತ್ತಿರುವ ತಿಮ್ಮಣ್ಣನ ತಂದೆ "ಮಗನನ್ನಂತೂ ಕಳೆದುಕೊಂಡೆ. ಈಗ ಹೊಸ ಜೀವನವನ್ನು ಪ್ರಾರಂಭಿಸಬೇಕಿದೆ. ದಯವಿಟ್ಟು ಕಾರ್ಯಾಚರಣೆ ನಿಲ್ಲಿಸಿ ನನ್ನ ಹೊಲವನ್ನು ಉಳಿಸಿಕೊಡಿ" ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಸುರಂಗ ಮಾರ್ಗ ಕೊರೆಯುವ  ಕಾರ್ಯಾಚರಣೆ ಮುಂದುವರೆದಿದ್ದು, ಅದನ್ನು ನಿಲ್ಲಿಸಬೇಕೋ ಅಥವಾ ಮುಂದುವರೆಸಬೇಕೋ ಎಂಬುದರ ಕುರಿತು ಜಿಲ್ಲಾಡಳಿತ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT