ಈಗಿನ ಸುದ್ದಿ

ಕಾರ್ಯಾಚರಣೆ ನಿಲ್ಲಿಸಿ, ಜಿಲ್ಲಾಡಳಿತಕ್ಕೆ ತಿಮ್ಮಣ್ಣನ ತಂದೆ ಮನವಿ

ಬಾದಾಮಿ ತಾಲೂಕಿನ ಸೂಳಿಕೇರಿಯಲ್ಲಿ ತೆರೆದ ಕೊಳವೆ...

ಬಾಗಲಕೋಟೆ: ಬಾದಾಮಿ ತಾಲೂಕಿನ ಸೂಳಿಕೇರಿಯಲ್ಲಿ ತೆರೆದ ಕೊಳವೆ ಬಾವಿಗೆ ಬಾಲಕ ತಿಮ್ಮಣ್ಣ ಬಿದ್ದು 6 ದಿನಗಳು ಕಳೆದರು ಕಾರ್ಯಾಚರಣೆ ಇನ್ನೂ ಯಶಸ್ವಿಯಾಗಿಲ್ಲ.

ಇದರಿಂದ ಮಗ ಬದುಕಿರುವ ಭರವಸೆ ಕಳೆದುಕೊಂಡಿರುವ ತಿಮ್ಮಣ್ಣನ ತಂದೆ ಕಾರ್ಯಾಚರಣೆಯನ್ನು ನಿಲ್ಲಿಸಿ ತನ್ನ ಹೊಲವನ್ನು ಉಳಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

ರೋಬೋಟ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಪರ್ಯಾಯ ಬಾವಿ ಕಾರ್ಯಾಚರಣೆ ಮುಂದುವರೆದಿದೆ. ಆದರೆ ಈ ಕಾರ್ಯಾಚರಣೆಯನ್ನು  ಸಮಾಪ್ತಿ ಮಾಡಿ ಎಂದು ಕಳೆದ ಮೂರು ದಿನಗಳಿಂದ ಒತ್ತಾಯಿಸುತ್ತಿರುವ ತಿಮ್ಮಣ್ಣನ ತಂದೆ "ಮಗನನ್ನಂತೂ ಕಳೆದುಕೊಂಡೆ. ಈಗ ಹೊಸ ಜೀವನವನ್ನು ಪ್ರಾರಂಭಿಸಬೇಕಿದೆ. ದಯವಿಟ್ಟು ಕಾರ್ಯಾಚರಣೆ ನಿಲ್ಲಿಸಿ ನನ್ನ ಹೊಲವನ್ನು ಉಳಿಸಿಕೊಡಿ" ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಸುರಂಗ ಮಾರ್ಗ ಕೊರೆಯುವ  ಕಾರ್ಯಾಚರಣೆ ಮುಂದುವರೆದಿದ್ದು, ಅದನ್ನು ನಿಲ್ಲಿಸಬೇಕೋ ಅಥವಾ ಮುಂದುವರೆಸಬೇಕೋ ಎಂಬುದರ ಕುರಿತು ಜಿಲ್ಲಾಡಳಿತ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT