ಮೆಚ್ಚುಗೆಯ ಮಾತುಗಳೇ ಮಕ್ಕಳಲ್ಲಿ ಸನ್ನಡತೆ ಹೆಚ್ಚಿಸಲು ಸಹಕಾರಿ: ಅಧ್ಯಯನ ವರದಿ 
ಜೀವನಶೈಲಿ

ಮೆಚ್ಚುಗೆಯ ಮಾತುಗಳೇ ಮಕ್ಕಳಲ್ಲಿ ಸನ್ನಡತೆ ಹೆಚ್ಚಿಸಲು ಸಹಕಾರಿ: ಅಧ್ಯಯನ ವರದಿ

ಪೋಷಕರು ತಮ್ಮ ಮಕ್ಕಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವುದು ಮಕ್ಕಳಲ್ಲಿ ಸನ್ನಡತೆ ಹೆಚ್ಚಿಸಲು ಸಹಕಾರಿಯಾಗಿದ್ದು, ಪೋಷಕರು ಮಕ್ಕಳ ಬೆನ್ನು ತಟ್ಟುವುದರಿಂದ ಅವರ ನಡವಳಿಕೆ ಉತ್ತಮಗೊಳ್ಳುತ್ತದೆ.

ಲಂಡನ್: ಪೋಷಕರು ತಮ್ಮ ಮಕ್ಕಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವುದು ಮಕ್ಕಳಲ್ಲಿ ಸನ್ನಡತೆ ಹೆಚ್ಚಿಸಲು ಸಹಕಾರಿಯಾಗಿದ್ದು, ಪೋಷಕರು ಮಕ್ಕಳ ಬೆನ್ನು ತಟ್ಟುವುದರಿಂದ ಅವರ ನಡವಳಿಕೆ ಉತ್ತಮಗೊಳ್ಳುತ್ತದೆ. ಅಷ್ಟೇ ಅಲ್ಲದೇ ಸನ್ನಡತೆ ಮತ್ತಷ್ಟು ಹೆಚ್ಚುತ್ತದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. 
ಮಕ್ಕಳು ಮಾಡುವ ಒಳ್ಳೆಯ ಕೆಲಸಗಳ ಬಗ್ಗೆ ಮೆಚ್ಚುಗೆಯ ಮಾತನ್ನಾಡುವುದು ಮತ್ತಷ್ಟು ಒಳ್ಳೆಯ ಕೆಲಸ ಮಾಡುವುದಕ್ಕೆ ಪ್ರೇರಣೆ ನೀಡುತ್ತದೆ ಎಂದು ಬ್ರಿಟನ್ ನ ಡೆ ಮೊಂಟ್ಫೋರ್ಟ್ ವಿಶ್ವವಿದ್ಯಾಲಯದ ಸಂಶೋಧಕ ಸ್ಯೂ ವೆಸ್ಟ್ ವುಡ್ ಹೇಳಿದ್ದಾರೆ. 
2-4 ವರ್ಷದ ಮಕ್ಕಳಿದ್ದ 34 ಪೋಷಕರನ್ನು ಮಕ್ಕಳೊಂದಿಗೆ 4 ವಾರಗಳ ಕಾಲ ಸಮೀಕ್ಷೆಗೆ ಒಳಪಡಿಸಲಾಗಿತ್ತು. ಪ್ರತಿ ದಿನ 5 ಬಾರಿ ತಮ್ಮ ಮಕ್ಕಳು ಮಾಡುವ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲು ಪೋಷಕರಿಗೆ ಸೂಚಿಸಲಾಗಿತ್ತು. ಪೋಷಕರು ಅದರಂತೆಯೇ ಮಾಡಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ ಪೋಷಕರ ಮಕ್ಕಳ ನಡವಳಿಕೆ ಹಾಗೂ ಸನ್ನಡೆಯಲ್ಲಿ ಸುಧಾರಣೆ ಕಂಡುಬಂದಿತ್ತು. ಅಂತಿಮವಾಗಿ ಹೈಪರ್ಆಕ್ಟೀವ್ ಮತ್ತು ಗಮನ ನೀಡದ ಮಕ್ಕಳ ನಡವಳಿಕೆಗಳಲ್ಲಿ ಬದಲಾವಣೆ ಉಂಟಾಗಿತ್ತು ಎಂದು ಅಧ್ಯಯನ ವರದಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT