ವೃತ್ತಿ ಜೀವನದ ಗುರಿ- ಸಂತಾನೋತ್ಪತ್ತಿ ಸಾಮರ್ಥ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಿರುವ ಅಂಶಗಳು 
ಜೀವನಶೈಲಿ

ವೃತ್ತಿ ಜೀವನವು ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ಪರಿಣಾಮ ಬೀರುವುದೇ?

ವೃತ್ತಿ ಜೀವನದ ಗುರಿ, ಆಯ್ಕೆಗಳು ಮಹಿಳೆ ಹಾಗೂ ಪುರುಷರಲ್ಲಿನ ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ಗಣನೀಯ ಪರಿಣಾಮ ಬೀರಲಿದೆ.

ವಾಷಿಂಗ್ ಟನ್: ವೃತ್ತಿ ಜೀವನದ ಗುರಿ, ಆಯ್ಕೆಗಳು ಮಹಿಳೆ ಹಾಗೂ ಪುರುಷರಲ್ಲಿನ ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ಗಣನೀಯ ಪರಿಣಾಮ ಬೀರಲಿದೆ. 
ಟೇಲರ್ & ಫ್ರಾನ್ಸಿಸ್ ನಲ್ಲಿ ನಡೆದ ಸಂಶೋಧನೆಯಲ್ಲಿ ವಿದ್ಯಾರ್ಥಿಗಳನ್ನು ಸಂದರ್ಶಿಸಲಾಗಿದ್ದು, ವೃತ್ತಿ ಜೀವನದ ಗುರಿಗಳನ್ನು ತಲುಪಿಯೂ ಬಂಜೆತನ ಕಾಡುವುದಕ್ಕೆ ಮೊದಲೇ ಮಕ್ಕಳನ್ನು ಪಡೆಯುವುದು ಮಹಿಳೆ ಹಾಗೂ ಪುರುಷರು ಇಬ್ಬರಿಗೂ ಮುಖ್ಯವಾಗಿರುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 
ಮಕ್ಕಳನ್ನು ಪಡೆಯುವುದಕ್ಕೂ ಮುನ್ನವೇ ತಮ್ಮ ವೃತ್ತಿ ಜೀವನದಲ್ಲಿ ಸಾಧನೆ ಮಾಡಿರಬೇಕೆಂಬುದು ಬಹುತೇಕ ಭಾವಿ ಪೋಷಕರ ಅಭಿಪ್ರಾಯವಾಗಿದೆ. ಬಹುತೇಕ ವಿದ್ಯಾರ್ಥಿಗಳು  ವಯಸ್ಸಿಗೆ ಅನುಗುಣವಾಗಿ ಪುರುಷ-ಮಹಿಳೆಯರ ಸಂತಾನೋತ್ಪತ್ತಿ ಸಾಮರ್ಥ್ಯವನ್ನು ಅಂದಾಜಿಸಲು ಈ ಸಮೀಕ್ಷೆಯಲ್ಲಿ ಯತ್ನಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಹಿಳೆಯರ ವಯಸ್ಸು-ಸಂತಾನೋತ್ಪತ್ತಿ ಸಾಮರ್ಥ್ಯವನ್ನು ನಿಖರವಾಗಿ ಗುರುತಿಸಿದ್ದರೆ, ಕೆಲವರು ಪುರುಷರ ವಯಸಿಗೆ ಅನುಗುಣವಾಗಿ ಸಂತಾನೋತ್ಪತ್ತಿ ಸಾಮರ್ಥ್ಯವನ್ನು ಗುರುತಿಸಿದ್ದಾರೆ. 
ಮಹಿಳೆಯರ ಸಂತಾನೋತ್ಪತ್ತಿ ಸಾಮರ್ಥ್ಯ 35-39 ವಯಸ್ಸಿನ ನಡುವೆ ಕುಗ್ಗುತ್ತದೆ ಎಂಬುದನ್ನು ಶೇ. 38 ರಷ್ಟು ಪುರುಷರು ಹಾಗೂ ಶೇ.45 ರಷ್ಟು ಮಹಿಳೆಯರು ಸರಿಯಾಗಿ ಗುರುತಿಸಿದ್ದು, 45-49 ವಯಸ್ಸಿನ ನಡುವೆ ಪುರುಷರ ಸಂತಾನೋತ್ಪತ್ತಿ ಸಾಮರ್ಥ್ಯ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂಬುದನ್ನು ಶೇ.18.3 ರಷ್ಟು ಪುರುಷರು ಹಾಗೂ 16.9 ಮಹಿಳೆಯರು ನಿಖರವಾಗಿ ಹೇಳಿದ್ದಾರೆ. 
ಸಮೀಕ್ಷೆಯಲ್ಲಿ ಭಾಗವಹಿಸಿದ್ದವರ ಪೈಕಿ ಶೇ.10 ರಷ್ಟು ವಿದ್ಯಾರ್ಥಿಗಳು ಮಕ್ಕಳನ್ನು ಪಡೆಯದೇ ಇರಲು ನಿರ್ಧರಿಸಿದ್ದು, ಶೇ.75 ರಷ್ಟು ಒಂದು ಅಥವಾ ಎರಡು ಮಕ್ಕಳನ್ನು ಪಡೆಯಲು ಬಯಸಿದ್ದಾರೆ.  ಸ್ಥಿರ ಸಂಬಂಧ ಹಾಗೂ ಜವಾಬ್ದಾರಿಗಳನ್ನು ಹಂಚಿಕೊಳ್ಳುವ ಸಂಗಾತಿಯ ಆಯ್ಕೆಯನ್ನು ಬಹುತೇಕ ವಿದ್ಯಾರ್ಥಿಗಳು  ಮಕ್ಕಳನ್ನು ಪಡೆಯುವುದಕ್ಕೂ ಮುನ್ನ ನೀಡಬೇಕಾದ ಪ್ರಾಮುಖ್ಯತೆಗಳೆಂದು ಹೇಳಿದ್ದಾರೆ. 
ವೃತ್ತಿ ಜೀವನದ ಗುರಿ- ಸಂತಾನೋತ್ಪತ್ತಿ ಸಾಮರ್ಥ್ಯದ ಮಿತಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು  ಸಂಶೋಧಕರಾದ ಡಾ.ಯುಜೆನಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT