ಜೀವನಶೈಲಿ

ವಾರದಲ್ಲಿ ಎಷ್ಟು ಮೊಟ್ಟೆಗಳನ್ನು ಸೇವಿಸಬೇಕು? ತಜ್ಞರು ಏನಂತಾರೆ

ಮೊಟ್ಟೆ ಉತ್ತಮ ಪೌಷ್ಠಿಕಯುಕ್ತ ಆಹಾರವಾಗಿದೆ. ಅಂತೆಯೇ ಅನೇಕ ರೋಗಗಳು ಬಾರದಂತೆಯೂ ನಿಯಂತ್ರಿಸುತ್ತದೆ. ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಮತ್ತು ಕೊಬ್ಬಿನ ಅಂಶವಿದ್ದರೂ ಸರಿಯಾದ ಪ್ರಮಾಣದಲ್ಲಿ ತೆಗೆದುಕೊಂಡರೆ ಆರೋಗ್ಯವಂತರಾಗಿ ಇರಬಹುದು. ನಮ್ಮ ದೇಹದಲ್ಲಿ ಪೌಷ್ಠಿಕಾಂಶವೂ ಹೆಚ್ಚಾಗುತ್ತದೆ.

ಬೆಂಗಳೂರು: ಮೊಟ್ಟೆ ಉತ್ತಮ ಪೌಷ್ಠಿಕಯುಕ್ತ ಆಹಾರವಾಗಿದೆ. ಅಂತೆಯೇ ಅನೇಕ ರೋಗಗಳು ಬಾರದಂತೆಯೂ ನಿಯಂತ್ರಿಸುತ್ತದೆ. ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಮತ್ತು ಕೊಬ್ಬಿನ ಅಂಶವಿದ್ದರೂ ಸರಿಯಾದ ಪ್ರಮಾಣದಲ್ಲಿ ತೆಗೆದುಕೊಂಡರೆ ಆರೋಗ್ಯವಂತರಾಗಿ ಇರಬಹುದು. ನಮ್ಮ ದೇಹದಲ್ಲಿ ಪೌಷ್ಠಿಕಾಂಶವೂ ಹೆಚ್ಚಾಗುತ್ತದೆ.

ಮೊಟ್ಟೆಯಿಂದ ನಮ್ಮ ದೇಹಕ್ಕೆ ಪೊಟಾಸಿಯಂ, ಮೆಗ್ನಿಷಿಯಂ, ಸೋಡಿಯಂ ಜೊತೆಗೆ ಗುಣಮಟ್ಟದ ಪ್ರೋಟಿನ್ ಗಳು ದೊರೆಯುತ್ತವೆ. ಅಲ್ಲದೇ, ವಿಟಮಿನ್ ಎ, ರಂಜಕ, ಕಬ್ಬಿಣ, ಸತು, ವಿಟಮಿನ್ ಡಿ, ವಿಟಮಿನ್ ಬಿ6, ಮತ್ತು ಬಿ12, ಪೊಲಿಕ್ ಆಮ್ಲವನ್ನು ಕೂಡಾ ಪೂರೈಸುತ್ತವೆ. 

ಇತ್ತೀಚಿನ ಅಧ್ಯಯನಗಳ ಪ್ರಕಾರ  ಆಹಾರದಲ್ಲಿನ  ಕೊಲೆಸ್ಟ್ರಾಲ್ ಹೃದ್ರೋಗ,  ಪಾರ್ಶ್ವವಾಯು ಮತ್ತು ರಕ್ತದೊತ್ತಡದಂತಹ ಅಪಾಯವನ್ನುಂಟುಮಾಡುವುದಿಲ್ಲ. ಆದ್ದರಿಂದ ಮೊಟ್ಟೆಗಳನ್ನು ಸೇವಿಸುವುದು ಆರೋಗ್ಯಕ್ಕೆ ಉತ್ತಮವಾಗಿದೆ.

ಮೊಟ್ಟೆಯಲ್ಲಿರುವ ಪೌಷ್ಟಿಕ ಅಂಶಗಳು:  ಒಂದು ಮೊಟ್ಟೆಯಲ್ಲಿ  180ರಿಂದ 300 ಮಿಲಿ ಗ್ರಾಂನಷ್ಟು ಕೊಲೆಸ್ಟ್ರಾಲ್ ಇರುತ್ತದೆ. ಮೊಟ್ಟೆಯ ಹಳದಿ ಭಾಗದಲ್ಲಿ  ಮಾತ್ರ  ಕೊಲೆಸ್ಟ್ರಾಲ್ ಇರುತ್ತದೆ. ಬಿಳಿ ಭಾಗ ಕೊಲೆಸ್ಟ್ರಾಲ್ ಮುಕ್ತವಾಗಿರುತ್ತದೆ. 

ಐಸಿಎಂಆರ್ ಮತ್ತು ಎನ್ ಐಎನ್ ಮಾರ್ಗಸೂಚಿಗಳ ಪ್ರಕಾರ  ದಿನ 300 ಗ್ರಾಂನಷ್ಟು ಕೊಲೆಸ್ಟ್ರಾಲ್ ಸೇವಿಸಬಹುದು ಅನ್ನುವುದಾದರೆ ನಾವು ಪ್ರತಿದಿನ ಒಂದೊಂದು ಮೊಟ್ಟೆ ತಿನ್ನಬಹುದು.ಮೊಟ್ಟೆಗಳಲ್ಲಿ ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗುವಂತಹ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ ಎಂಬುದು ಸತ್ಯಕ್ಕೆ ದೂರವಾದ ಮಾತಾಗಿದೆ. 

ವಾರದಲ್ಲಿ ಎಷ್ಟು ಮೊಟ್ಟೆಗಳನ್ನು ಸೇವಿಸಬೇಕು

ಯುವಕರು ಸಮತೋಲಿತ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ಒಂದಂತೆ ವಾರಕ್ಕೆ ಮೂರರಿಂದ ನಾಲ್ಕು ಮೊಟ್ಟೆಗಳನ್ನು ಸೇವಿಸಬೇಕು. ಮಕ್ಕಳು ಪ್ರತಿದಿನ ಒಂದೊಂದು ಮೊಟ್ಟೆಗಳನ್ನು ಸೇವಿಸಬೇಕು, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ವಾರದಲ್ಲಿ ಮೂರು ಮೊಟ್ಟೆಗಳನ್ನು ತಿನ್ನಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT