ಸಂಗ್ರಹ ಚಿತ್ರ 
ಜೀವನಶೈಲಿ

ಧೂಳು, ಕಲುಷಿತ ವಾತಾವರಣದಿಂದ ಚರ್ಮದ ಆರೈಕೆ ಹೇಗೆ?

ನಗರಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ ಧೂಳು ಹಾಗೂ ಕಲುಷಿತ ವಾತಾವರಣ ಹೆಚ್ಚಾಗುತ್ತಿದೆ. ಇದರಿಂದ ಸೌಂದರ್ಯ ಪ್ರಿಯರಿಗಂತೂ ತಲೆನೋವು ಹೆಚ್ಚಾಗಿ ಹೋಗಿದೆ. ಧೂಳು ಹಾಗೂ ಕಲುಷಿತ ವಾತಾವರಣ ಕೇವಲ ಆರೋಗ್ಯದ ಮೇಲಷ್ಟೇ ಅಲ್ಲದೆ, ಸೌಂದರ್ಯದ ಮೇಲೂ ಗಂಭೀರ ಪರಿಣಾಮಗಳನ್ನು ಬೀರುತ್ತವೆ. 

ನಗರಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ ಧೂಳು ಹಾಗೂ ಕಲುಷಿತ ವಾತಾವರಣ ಹೆಚ್ಚಾಗುತ್ತಿದೆ. ಇದರಿಂದ ಸೌಂದರ್ಯ ಪ್ರಿಯರಿಗಂತೂ ತಲೆನೋವು ಹೆಚ್ಚಾಗಿ ಹೋಗಿದೆ. ಧೂಳು ಹಾಗೂ ಕಲುಷಿತ ವಾತಾವರಣ ಕೇವಲ ಆರೋಗ್ಯದ ಮೇಲಷ್ಟೇ ಅಲ್ಲದೆ, ಸೌಂದರ್ಯದ ಮೇಲೂ ಗಂಭೀರ ಪರಿಣಾಮಗಳನ್ನು ಬೀರುತ್ತವೆ. 

ಪ್ರತೀನಿತ್ಯ ಹೊರಗೆ ಓಡಾಡುವುದರಿಂದ ಚರ್ಮ ನೇರವಾಗಿ ಇಂತಹ ಕಲುಷಿತ ವಾತಾವರಣ ಹಾಗೂ ಧೂಳಿಗೆ ಎದುರಾಗುತ್ತದೆ. ಇಂತಹ ಸಂದರ್ಭದಲ್ಲಿ ಚರ್ಮದ ಆರೈಕೆ ಅತಿ ಮುಖ್ಯವಾಗುತ್ತದೆ. ವಿಟಮಿನ್ ಸಿ, ವಿಟಮಿನ್ ಇ ಗ್ರೀನ್ ಟೀ ಸೇವನೆ ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ. ಕಲುಷಿತ ವಾತಾವರಣದಿಂದ ದೂರ ಇರಲು ನೈಸರ್ಗಿಕ ಪದಾರ್ಥಗಳ ಬಳಕೆ ಅತಿ ಮುಖ್ಯವಾಗುತ್ತದೆ. ಕ್ಯಾರೆಟ್ ಸೇವನೆ ಚರ್ಮದ ಆರೋಗ್ಯವನ್ನು ಹೆಚ್ಚುಸುತ್ತದೆ. ಅಲ್ಲದೆ, ಹಾಳಾದ ಚರ್ಮವನ್ನು ರಕ್ಷಣೆ ಮಾಡುತ್ತದೆ. 

ಹೊರಗೆ ಹೋಗುವುದಕ್ಕೂ ಮುನ್ನ ಎಸ್'ಪಿಎಪ್ ಇರುವ ಕ್ರೀಮ್ ಗಳನ್ನು ಹಚ್ಚುವುದು ಉತ್ತಮ. ಇದು ಚರ್ಮವನ್ನು ರಕ್ಷಣೆ ಮಾಡುತ್ತದೆ. ಚರ್ಮದ ಸೌಂದರ್ಯ ನಾವು ಹಚ್ಚುವ ಕ್ರೀಮ್ ಗಳ ಮೇಲಷ್ಟೇ ಅವಲಂಬಿತವಾಗಿಲ್ಲ. ತಿನ್ನುವಆಹಾರ ಕೂಡ ಅಂದವನ್ನು ಹೆಚ್ಚಿಸುತ್ತದೆ. ಹಣ್ಣು, ತರಕಾರಿ, ಎಳನೀರಿನ ಸೇವನೆಯಿಂದ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳು ದೊರೆಯುತ್ತವೆ. ಇದು ಚರ್ಮದ ಕಾಂತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. 

ದೇಹ ಹಾಗೂ ಚರ್ಮದ ಆರೋಗ್ಯಕ್ಕೆ ನೀರು ತುಂಬಾ ಅವಶ್ಯಕವಾಗುತ್ತದೆ. ಅದರಲ್ಲೂ ಚರ್ಮದ ಕಾಂತಿ ಹೆಚ್ಚಿಸಲು ಪ್ರತೀನಿತ್ಯ 4 ಲೀಟರ್ ಗಳಷ್ಟು ನೀರು ಕುಡಿಯಲೇಬೇಕು. ತರಕಾರಿ ಹಾಗೂ ಹಣ್ಣಿನ ಸೇವನೆಯಿಂದ ದೇಹದಲ್ಲಿ ನೀರಿನಾಂಶ ಸಂಗ್ರಹವಾಗುತ್ತದೆ. 

ಸ್ನಾನಕ್ಕೂ ಮುನ್ನ ಚರ್ಮಕ್ಕೆ ಎಣ್ಣೆ ಹಚ್ಚಿ ಮಸಾಜ್ ಮಾಡುವುದು ಅತ್ಯುತ್ತಮವಾಗಿರುತ್ತದೆ. ಇದರಿಂದ ಚರ್ಮ ಒಣಗುವುದನ್ನು ತಪ್ಪಿಸಬಹುದು. ಜೊತೆಗೆ ಪಕಳೆ ಏಳುವುದೂ ಕೂಡ ತಪ್ಪುತ್ತದೆ. ಕೆನೆಯುಳ್ಳ ಸೋಪ್ ಬಳಕೆ ಚರ್ಮಕ್ಕೆ ಬೇಕಾಗುವ ತೇವಾಂಶವನ್ನು ಒದಗಿಸುತ್ತದೆ. ಹೊರಗೆ ಹಾಗುವುದಕ್ಕೂ ಮುನ್ನ ಮುಖ ತೊಳೆದ ಅರ್ಧ ಗಂಟೆಗಳ ಬಳಿಕ ಹೊರಗೆ ಹೋಗಬೇಕು. ತಾಪಮಾನ ಬದಲಾವಣೆ ಕೂಡ ಚರ್ಮವನ್ನು ಕಳೆಕುಂದುವಂತೆ ಮಾಡುತ್ತದೆ. ಹೀಗಾಗಿ ಹೊರಗಿನಿಂದ ಬಂದ ಕೂಡಲೇ ತಣ್ಣಗಿನ ನೀರಿನಿಂದ ಮುಖ ತೊಳೆಯುವುದನ್ನು ರೂಢಿಸಿಕೊಳ್ಳಿ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT