ಎಳನೀರು 
ಜೀವನಶೈಲಿ

ಸರ್ವರೋಗಕ್ಕೂ ಮದ್ದು ಈ ಎಳನೀರು!

ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ. 

ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ. 

ವರ್ಷದ ಎಲ್ಲಾ ದಿನಗಳಲ್ಲೂ ಸಿಗುವ ಎಳನೀರಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಪ್ರತೀನಿತ್ಯ ಒಂದೊಂದು ಎಳನೀರು ಕುಡಿಯುವ ಅಭ್ಯಾಸವಿಟ್ಟುಕೊಂಡರೆ, ದೇಹಕ್ಕೆ ಎದುರಾಗುವ ಸಾಕಷ್ಟು ರೋಗಗಳಿಂದ ದೂರ ಇರಬಹುದು. ನವಿರಾದ ಸಿಹಿ, ನೀರಿನಷ್ಟೇ ಗಾಢವಾದ ಎಳನೀರು ದೇಹಕ್ಕೆ ಅಗತ್ಯವಾದ ಬಹಳಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಎಳನೀರಿನಿಂದ ಸಿಗುವ ಪೋಷಕಾಂಶಗಳಿಂದ ದೇಹ ಶೀಘ್ರ ತನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತದೆ. 

ಎಳನೀರಿನಲ್ಲಿರುವ ವಿವಿಧ ಖನಿಜ, ಸಕ್ಕರೆ ಹಾಗೂ ಲವಣಾಂಶ ಅಗತ್ಯ ಪ್ರಮಾಣದಲ್ಲಿ ಇರುವುದರಿಂದಲೇ ಇದೊಂದು ಅಮೃತಪಾನವಾಗಿದೆ. ಬೇಸಿಗೆ ತಾಪವನ್ನು ನೇರವಾಗಿ ನೀಗಿಸಬಲ್ಲ ಎಳನೀರು ದೈವದತ್ತವಾದುದು. ಸರ್ವರೋಗಕ್ಕೂ ಮದ್ದಾಗಿರುವ ಎಳನೀರಿನ ಕೆಲ ಉಪಯೋಗಗಳನ್ನು ಇಲ್ಲಿ ವಿವರಿಸಲಾಗಿದೆ. 

ರೋಗನಿರೋಧಕ ಶಕ್ತಿ ಹೆಚ್ಚಿಸಲು ರಾಮಬಾಣ
ಮನುಷ್ಯನ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಗ್ಗಿದಾಗ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಸಣ್ಣಪುಟ್ಟ ಗಾಯಗಳಾದರೂ ಆ ನೋವನ್ನು ಸಹಿಸಿಕೊಳ್ಳುವ ಶಕ್ತಿ ಮನುಷ್ಯನಿಗಿಲ್ಲದಂತಾಗುತ್ತದೆ. ಎಳನೀರು ಮನುಷ್ಯನ ದೇಹಕ್ಕೆ ರೋಗನಿರೋಧಕ ಶಕ್ತಿ ನೀಡುವುದರಿಂದ ಎಂತಹುದ್ದೇ ರೋಗ ಬಂದರೂ ಅದರ ವಿರುದ್ಧ ದೇಹ ಹೋರಾಡುವ ಶಕ್ತಿ ಪಡೆದುಕೊಳ್ಳುತ್ತದೆ. 

ಸಕ್ಕರೆ ಕಾಯಿಲೆಗೂ ಮದ್ದು
ಸಾಮಾನ್ಯವಾಗಿ ಸಿಹಿಯಾಗಿರುವ ಪದಾರ್ಥ ಹಾಗೂ ನೀರೆಂದರೆ ಮದುಮೇಹಿಗಳು ದೂರ ಉಳಿಯುವುದುಂಟು. ಆದರೆ, ಎಳನೀರು ಬ್ಲಡ್ ಶುಗರ'ನ್ನು ನಿಯಂತ್ರಿಸುತ್ತದೆ.  ಎಳನೀರಿನಲ್ಲಿ ಮೆಗ್ನೀಸಿಯಮ್ ಹೇರಳವಾಗಿದ್ದು, ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. 

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ ಸಾಮಾನ್ಯವಾಗಿ ಹೋಗಿದೆ. ಎಳನೀರು ಮನುಷ್ಯನ ದೇಹದಲ್ಲಿರುವ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಎಳನೀರಿನಲ್ಲಿ ಪೊಟ್ಯಾಸಿಯಮ್ ಹೆಚ್ಚಾಗಿರುವುದರಿಂದ ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಹಾಗೂ ರಕ್ತ ಹೆಪ್ಪುಗಟ್ಟುವಿಕೆಯಂತಹ ಅಪಾಯವನ್ನು ಕಡಿಮೆ ಮಾಡುತ್ತದೆ. 

ಕಿಡ್ನಿಸ್ಟೋನ್ಸ್ ನಿಯಂತ್ರಿಸುತ್ತದೆ
ಹೆಚ್ಚೆಚ್ಚು ನೀರು ಕುಡಿಯುವುದರಿಂದ ಕಿಡ್ನಿಯಲ್ಲಿರುವ ಕಲ್ಲು ಹೊರ ಬರುತ್ತದೆ ಎಂದು ಹೇಳಲಾಗುತ್ತಿದೆ. ಕಿಡ್ನಿಯಲ್ಲಿ ಕಲ್ಲು ಇರುವವರು ಹೆಚ್ಚಾಗಿ ಎಳನೀರು ಕುಡಿಯುವುದರಿಂದ ಕಿಡ್ನಿಯಲ್ಲಿರುವ ಕಲ್ಲುಗಳು ನಿಯಂತ್ರಣಗೊಳ್ಳುತ್ತವೆ. ಮೂತ್ರಪಿಂಡಗಳಲ್ಲಿ ಸಂಗ್ರಹಗೊಳ್ಳುವ ಲವಣಾಂಶಗಳನ್ನು ಮೂತ್ರದ ಮೂಲಕ ಹೊರ ಹಾಕಲು ಎಳನೀರು ಸಹಾಯ ಮಾಡುತ್ತದೆ. 

ಆಯಾಸ ದೂರಾಗಿಸುತ್ತದೆ
ವ್ಯಾಯಾಮದ ಬಳಿಕ ದೇಹ ಸುಸ್ತಾದಂತೆ ಎನಿಸುತ್ತದೆ. ಈ ವೇಳೆ ಎಳನೀರನ್ನು ಕುಡಿಯುವುದರಿಂದ ದೇಹಕ್ಕೆ ಶಕ್ತಿಯೊದಗುತ್ತದೆ. ನಿರ್ಜಲೀಕರಣದಂತಹ ಸಮಸ್ಯೆಗಳನ್ನೂ ಎಳನೀರು ದೂರಾಗಿಸುತ್ತದೆ. 

ತೂಕ ಇಳಿಕೆಗೂ ಸಹಾಯಕ
ಎಳನೀರು ಸೇವನೆಯ ಪ್ರಮುಖ ಉಪಯೋಗಗಳ ಪೈಕಿ ದೇಹದ ತೂಕ ಕಳೆದುಕೊಳ್ಳುವಿಕೆಯೂ ಕೂಡ ಒಂದಾಗಿದೆ. ಎಳನೀರಿನಲ್ಲಿ ಫೈಬರ್ ಅಂಶ ಹೆಚ್ಚಾಗಿದ್ದು, ಕೊಬ್ಬಿನಾಂಶ ಕಡಿಮೆ ಇರುತ್ತದೆ. ಫೈಬರ್ ದೇಹದ ಜೀರ್ಣ ಕ್ರಿಯೆ ನಿಧಾನಗೊಳಿಸಿ, ಹಸಿವನ್ನು ನಿಗ್ರಹಿಸುತ್ತದೆ. ಇದು ನಿಮಗೆ ಹೊಟ್ಟಿ ತುಂಬಿದ ಭಾವವನ್ನು ನೀಡುತ್ತದೆ. ಇದರಂದ ಬಹುಬೇಗ ದೇಹದ ತೂಕವನ್ನು ಇಳಿಕೆ ಮಾಡಬಹುದು. 

ಚರ್ಮದ ಆರೈಕೆಗೂ ಸಿದ್ದೌಷಧಿ ಎಳನೀರು
ದೀರ್ಘಕಾಲ ವಯಸ್ಸಾಗದಂತೆ ಉಳಿಯಲು ಎಳನೀರು ಸಹಾಯ ಮಾಡುತ್ತದೆ. ಮುಖದಲ್ಲಿ ಮೊಡವೆಗಳು ಮತ್ತು ರಾಡಿಕಲ್ ಗಳನ್ನು ನಿವಾರಿಸುತ್ತದೆ. ತೆಂಗಿನ ಕಾಯಿ ನೀರನ್ನು ಮೊಡವೆ, ಕಲೆಗಳು, ಸುಕ್ಕುಗಳು, ಸೆಲ್ಯುಲೈಟ್ ಮತ್ತು ಎಸ್ಟಿಮಾ ಜಾಗಗಳಿಗೆ ನಿರಂತರವಾಗಿ ಎರಡರಿಂದ ಮೂರು ವಾರಗಳ ಕಾಲ ರಾತ್ರಿ ಹಚ್ಚಿ ಮಲಗಿದರೆ ತ್ವಚೆ ಸ್ವಚ್ಛವಾಗುತ್ತದೆ ಹಾಗೂ ಕಾಂತಿಯುತವಾಗುತ್ತದೆ. ಹೆಚ್ಚೆಚ್ಚು ಎಳನೀರು ಕುಡಿಯುವುದರಿಂದ ಚರ್ಮದಲ್ಲಿರುವ ಹೆಚ್ಚಿನ ಆಯಿಲ್ ಅಂಶ ಕಡಿಮೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಫೇಷಿಯಲ್ ಕ್ರೀಮ್ ಗಳು, ಶ್ಯಾಂಪುಗಳು, ಕಂಡೀಷನರ್ ಹಾಗೂ ಲೋಷನ್ ಗಳಲ್ಲಿ ಎಳನೀರು ಬಳಕೆ ಮಾಡುತ್ತಿರುವುದೂ ಕೂಡ ಸಾಮಾನ್ಯವಾಗಿ ಹೋಗಿದೆ. 

ಹೆಚ್ಚು ಉಷ್ಣಾಂಶ ಇರುವ ಪ್ರದೇಶದಲ್ಲಿರುವ ಜನರು ಎಳನೀರನ್ನು ಹೆಚ್ಚಾಗಿ ಕುಡಿಯಬೇಕು. ಇದು ಚರ್ಮ ನಿರ್ಜಲೀಕರಣಗೊಳ್ಳದಂತೆ ಕಾಯುತ್ತದೆ. ಅಲ್ಲದೆ, ಚರ್ಮಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನೂ ನೀಡುತ್ತದೆ. ಎಷ್ಟೆಲ್ಲಾ ಉಪಯೋಗವಿರುವ ಎಳನೀರನ್ನು ನಮ್ಮ ಪ್ರತೀನಿತ್ಯದ ಆಹಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಳ್ಳುವುದರಿಂದ ಸಾಕಷ್ಟು ಉಪಯೋಗಗಳನ್ನು ಪಡೆಯಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT